Homeಮುಖಪುಟವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

- Advertisement -
- Advertisement -

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು

“ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ ಮೆಸೇಜ್ ಮಾಡಿದರು, ನಾನು ಅದರನ್ನು ತಿಳಿಸಿದೆ. ಅಷ್ಟಕ್ಕೂ ಅದು ತಪ್ಪಲ್ಲ, ನಾನು ಹಾಕಿದ್ದ ಸಂದೇಶದಲ್ಲಿ ಯಾವುದೇ ಅಪರಾಧವಿಲ್ಲ.” ಎಂದು ಉಮರ್ ಖಾಲಿದ್ ಅವರ ಪರ ವಕೀಲರು ಹೇಳಿದ್ದಾರೆ.

ವಾಟ್ಸಾಪ್ ಗುಂಪಿನಲ್ಲಿ ಉಮರ್ ಖಾಲಿದ್ ಇದ್ದಾರೆ ಎಂಬ ಕಾರಣಕ್ಕೆ ಅದನ್ನು ಕ್ರಿಮಿನಲ್ ಪಿತೂರಿಯ ಪುರಾವೆಯಾಗಿ ದೆಹಲಿ ಪೊಲೀಸರು ಉಲ್ಲೇಖಿಸಿದ್ದಕ್ಕೆ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತಿದ್ದರು. ವಾಟ್ಸಾಪ್ ಗುಂಪಲ್ಲಿರುವುದು

ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ಪ್ರಸ್ತುತ ಸರ್ಕಾರಿ ವಿರೋಧಿಗಳ ಒಕ್ಕೂಟವನ್ನು ಒಟ್ಟುಗೂಡಿಸಿದ್ದು ವಾಟ್ಸಾಪ್‌ನಲ್ಲಿ ದೆಹಲಿಯ ಪ್ರತಿಭಟನೆ ಬೆಂಬಲಿಗರ ಗುಂಪು ರಚನೆಗೆ ಕಾರಣವಾಯಿತು ಎಂದು ಆರೋಪಿಸಿದ್ದರು.

ಅಲ್ಲದೆ, ”ಜೆಎನ್‌ಯು [ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ]ದ ಮುಸ್ಲಿಂ ವಿದ್ಯಾರ್ಥಿಗಳು” ಎಂಬ ವಿದ್ಯಾರ್ಥಿಗಳ ಗುಂಪಿಗೆ ಮತ್ತೊಬ್ಬ ಹೋರಾಟಗಾರ ಶಾರ್ಜೀಲ್ ಇಮಾಮ್ ಸಹಾಯದಿಂದ ಉಮರ್ ಖಾಲಿದ್ ಮಾರ್ಗದರ್ಶನ ನೀಡಿದ ಕಾರಣಕ್ಕೆ ಈ ವಾಟ್ಸಾಪ್ ಗುಂಪನ್ನು ರಚಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

ದೆಹಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಂತಹ ಇತರರು “ನನಗಿಂತ ಹೆಚ್ಚಿನ ಪಾತ್ರಗಳನ್ನು ಹೊಂದಿದ್ದಾರೆ”, ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೈಸ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ 2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020 ರಲ್ಲಿ ಖಾಲಿದ್ ಅವರನ್ನು ಬಂಧಿಸಲಾಯಿತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಉಮರ್ ಖಾಲಿದ್ ಮತ್ತು ಇತರ ಹಲವಾರು ಹೋರಾಟಗಾರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಸಿ ಬಳಿಯುವ ದೊಡ್ಡ ಪಿತೂರಿಯ ಭಾಗವಾಗಿ ನಡೆಸಲಾಗಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಹಾಗೂ ಉಮರ್‌ ಖಾಲಿದ್ ಸೇರಿದಂತೆ ಇತರರು ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಉದ್ದೇಶಗಳನ್ನು ಹೊಂದಿದ್ದು, ಸರ್ಕಾರವನ್ನು ಅಸ್ಥಿರಗೊಳಿಸಲು “ನಾಗರಿಕ ಅಸಹಕಾರದ ಮುಖಭಾವ” ವನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ನವೆಂಬರ್ 2020 ರಲ್ಲಿ ಸಲ್ಲಿಸಲಾದ 200 ಪುಟಗಳ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ದೆಹಲಿ ಗಲಭೆಯನ್ನು “ಕೂತಲ್ಲಿಂದಲೆ ನಿಯಂತ್ರಿಸಿದರು” ಎಂದು ಪೊಲೀಸರು ನಿರ್ದಿಷ್ಟವಾಗಿ ಆರೋಪಿಸಿದ್ದಾರೆ. ಈ ಗಲಭೆ ವೇಳೆ ಉಮರ್ ಖಾಲಿದ್ ಅರು “ರಹಸ್ಯ ಸಭೆ” ನಡೆಸಿದ್ದಾರೆ, ಅಲ್ಲಿ ಅವರು ಗಲಭೆ ನಡೆಸಲು ವಿವರಗಳನ್ನು ವಿವರಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾರ್ಚ್ 4 ರಂದು ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂಓದಿ:  ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...