Homeಮುಖಪುಟಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

- Advertisement -
- Advertisement -

ವಾಟ್ಸಾಪ್‌ ತನ್ನ ಹೊಸ ಗೌಪ್ಯತಾ ನೀತಿಗಾಗಿ ಕುತಂತ್ರದೊಂದಿಗೆ ಒಪ್ಪಿಗೆ ಪಡೆಯುವ ಮೂಲಕ ಬಳಕೆದಾರ ವಿರೋಧಿ ನಡೆಯಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಹೊಸ ಅಫಿಡವಿಟ್‌ ಅನ್ನು ದೆಹಲಿ ಹೈಕೋಟ್‌ಗೆ ಸಲ್ಲಿಸಿದೆ.

ವಾಟ್ಸಾಪ್ ತನ್ನ ಸಂದೇಹ ಪಡದ ಬಳಕೆದಾರ ಮುಂದೆ ‘ತನ್ನ ಡಿಜಿಟಲ್ ಪರಾಕ್ರಮವನ್ನು’ ಬಿಚ್ಚಿಟ್ಟಿದ್ದು, ಅದರ ನೋಟಿಫಿಕೇಷನ್‌ಗಳನ್ನು ನಿಯಮಿತವಾಗಿ ಕಳುಹಿಸುವ ಮೂಲಕ ಹೊಸ 2021 ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದೆ ಎಂದು ಹೈಕೋರ್ಟ್ ಮುಂದೆ ಸಲ್ಲಿಸಿದ ಅಫಿಡವಿಟ್‌‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

ವಾಟ್ಸಪ್‌ನ ಗೇಮ್‌ ಪ್ಲಾನ್‌ ಸ್ಪಷ್ಟವಾಗಿದ್ದು, ವೈಯಕ್ತಿಕ ಯೋಜನೆ ಸಂರಕ್ಷಣೆ (ಪಿಡಿಪಿ) ಮಸೂದೆಯು ಕಾನೂನು ಆಗುವ ಮೊದಲು ಹೊಸ ಗೌಪ್ಯತಾ ನೀತಿಗೆ ಬದ್ಧವಾಗಿರುವ ತನ್ನ ಬಳಕೆದಾರರ ಸಂಪೂರ್ಣ ಮೂಲವನ್ನು ವರ್ಗಾಯಿಸಲು ಅದು ಉದ್ದೇಶಿಸಿದೆ ಎಂದು ಕೇಂದ್ರವು ಆರೋಪಿಸಿದೆ.

ಪ್ರಸ್ತುತ ವಾಟ್ಸಪ್‌ ತನ್ನ ಬಳಕೆದಾರರಿಗೆ ಕಳುಹಿಸುತ್ತಿರುವ ನೋಟಿಫಿಕೇಷನ್‌ ಅಸ್ತಿತ್ವದಲ್ಲಿರುವುದಾಗಿರಲಿ ಅಥವಾ ಹೊಸದಾಗಿರಲಿ ಅದು 24/03/2021 ರ ದಿನಾಂಕದಂದು ‘ಭಾರತದ ಸ್ಪರ್ಧಾ ಆಯೋಗ’ದ ಆದೇಶದ ಪ್ರಾಥಮಿಕ ಅಭಿಪ್ರಾಯಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರವು ಕೋರ್ಟ್‌ಗೆ ತಿಳಿಸಿದೆ.

ಹೊಸ ಗೌಪ್ಯತಾ ನೀತಿಗೆ ಸಂಬಂಧಿಸಿದ ನೋಟಿಫಿಕೇಷನ್‌ಳನ್ನು ಅಸ್ತಿತ್ವದಲ್ಲಿರುವ ಬಳಕೆದಾರಿಗೆ ಕಳುಹಿಸಬಾರದು ಮತ್ತು ದೈನಂದಿನ ಆಧಾರದ ಮೇಲೆ ಎಷ್ಟು ನೋಟಿಫಿಕೇಷನ್‌ಗಳನ್ನು ಕಳುಹಿಸಲಾಗುತ್ತಿದೆ ಎಂದು ದಾಖಲಿಸಲು ಮಧ್ಯಂತರ ನಿರ್ದೇಶನವನ್ನು ನೀಡಬೇಕೆಂದು ಕೇಂದ್ರವು ದೆಹಲಿ ಹೈಕೋರ್ಟ್‌ಗೆ ಒತ್ತಾಯಿಸಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

ವಾಟ್ಸಾಪ್ ಹೊಸ ಗೌಪ್ಯತಾ ನೀತಿಯ ವಿರುದ್ಧ ಹಲವಾರು ಅರ್ಜಿಗಳನ್ನು ಸಲ್ಲಿಕೆಯಾದ ನಂತರ ಕೇಂದ್ರವು ಈ ಅಫಿಡವಿಟ್ ಸಲ್ಲಿಸಿದೆ. ಡಾ. ಸೀಮಾ ಸಿಂಗ್, ಮೇಘನ್ ಮತ್ತು ವಿಕ್ರಮ್ ಸಿಂಗ್ ಅವರು ವಾಟ್ಸಾಪ್ ತನ್ನ ನೀತಿಯನ್ನು ಹಿಂತೆಗೆದುಕೊಳ್ಳುವಂತೆ ಅಥವಾ ಜನವರಿ 4 ರ ಗೌಪ್ಯತಾ ನೀತಿಯಿಂದ ಹೊರಗುಳಿಯುವ ಆಯ್ಕೆಯನ್ನು ನೀಡುವಂತೆ ಆದೇಶಿಸುವಂತೆ ಭಾರತದ ಒಕ್ಕೂಟಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ ವಾಟ್ಸಪ್‌ ತನ್ನ ಹೊಸ ನೀತಿಯನ್ನು ಸ್ವೀಕರಿಸಲು ಯಾರನ್ನೂ ಒತ್ತಾಯಿಸುತ್ತಿಲ್ಲ ಮತ್ತು ಅದರ ಗೌಪ್ಯತಾ ನೀತಿ ಕಡ್ಡಾಯವಲ್ಲ ಎಂದು ವಾಟ್ಸಾಪ್ ತನ್ನ ಉತ್ತರದಲ್ಲಿ ತಿಳಿಸಿದೆ.

ವಾಟ್ಸಪ್‌ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ, “2021 ರ ಹೊಸ ಗೌಪ್ಯತಾ ನೀತಿಯು ಖಾಸಗಿ ವ್ಯಕ್ತಿಗಳ(private parties) ನಡುವಿನ ಒಪ್ಪಂದವಾಗಿದ್ದು, ಬಳಕೆದಾರರು ಸ್ವೀಕರಿಸಲು ಅಥವಾ ತಿರಸ್ಕರಿಸಲು ಮುಕ್ತರಾಗಿದ್ದಾರೆ ಎಂದು ತಿಳಿಸಿದೆ. ಹೊಸ ಗೌಪ್ಯತಾ ನೀತಿಯನ್ನು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ವಾಟ್ಸಾಪ್ ದೆಹಲಿ ಹೈಕೋರ್ಟ್‌ಗೆ ಒತ್ತಾಯಿಸಿದೆ. ವಿಚಾರಣೆಯನ್ನು ಜುಲೈ 22 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...