Homeಮುಖಪುಟಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

- Advertisement -
- Advertisement -

ವಾಟ್ಸಾಪ್‌ ತನ್ನ ಹೊಸ ಗೌಪ್ಯತಾ ನೀತಿಗಾಗಿ ಕುತಂತ್ರದೊಂದಿಗೆ ಒಪ್ಪಿಗೆ ಪಡೆಯುವ ಮೂಲಕ ಬಳಕೆದಾರ ವಿರೋಧಿ ನಡೆಯಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಹೊಸ ಅಫಿಡವಿಟ್‌ ಅನ್ನು ದೆಹಲಿ ಹೈಕೋಟ್‌ಗೆ ಸಲ್ಲಿಸಿದೆ.

ವಾಟ್ಸಾಪ್ ತನ್ನ ಸಂದೇಹ ಪಡದ ಬಳಕೆದಾರ ಮುಂದೆ ‘ತನ್ನ ಡಿಜಿಟಲ್ ಪರಾಕ್ರಮವನ್ನು’ ಬಿಚ್ಚಿಟ್ಟಿದ್ದು, ಅದರ ನೋಟಿಫಿಕೇಷನ್‌ಗಳನ್ನು ನಿಯಮಿತವಾಗಿ ಕಳುಹಿಸುವ ಮೂಲಕ ಹೊಸ 2021 ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದೆ ಎಂದು ಹೈಕೋರ್ಟ್ ಮುಂದೆ ಸಲ್ಲಿಸಿದ ಅಫಿಡವಿಟ್‌‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

ವಾಟ್ಸಪ್‌ನ ಗೇಮ್‌ ಪ್ಲಾನ್‌ ಸ್ಪಷ್ಟವಾಗಿದ್ದು, ವೈಯಕ್ತಿಕ ಯೋಜನೆ ಸಂರಕ್ಷಣೆ (ಪಿಡಿಪಿ) ಮಸೂದೆಯು ಕಾನೂನು ಆಗುವ ಮೊದಲು ಹೊಸ ಗೌಪ್ಯತಾ ನೀತಿಗೆ ಬದ್ಧವಾಗಿರುವ ತನ್ನ ಬಳಕೆದಾರರ ಸಂಪೂರ್ಣ ಮೂಲವನ್ನು ವರ್ಗಾಯಿಸಲು ಅದು ಉದ್ದೇಶಿಸಿದೆ ಎಂದು ಕೇಂದ್ರವು ಆರೋಪಿಸಿದೆ.

ಪ್ರಸ್ತುತ ವಾಟ್ಸಪ್‌ ತನ್ನ ಬಳಕೆದಾರರಿಗೆ ಕಳುಹಿಸುತ್ತಿರುವ ನೋಟಿಫಿಕೇಷನ್‌ ಅಸ್ತಿತ್ವದಲ್ಲಿರುವುದಾಗಿರಲಿ ಅಥವಾ ಹೊಸದಾಗಿರಲಿ ಅದು 24/03/2021 ರ ದಿನಾಂಕದಂದು ‘ಭಾರತದ ಸ್ಪರ್ಧಾ ಆಯೋಗ’ದ ಆದೇಶದ ಪ್ರಾಥಮಿಕ ಅಭಿಪ್ರಾಯಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರವು ಕೋರ್ಟ್‌ಗೆ ತಿಳಿಸಿದೆ.

ಹೊಸ ಗೌಪ್ಯತಾ ನೀತಿಗೆ ಸಂಬಂಧಿಸಿದ ನೋಟಿಫಿಕೇಷನ್‌ಳನ್ನು ಅಸ್ತಿತ್ವದಲ್ಲಿರುವ ಬಳಕೆದಾರಿಗೆ ಕಳುಹಿಸಬಾರದು ಮತ್ತು ದೈನಂದಿನ ಆಧಾರದ ಮೇಲೆ ಎಷ್ಟು ನೋಟಿಫಿಕೇಷನ್‌ಗಳನ್ನು ಕಳುಹಿಸಲಾಗುತ್ತಿದೆ ಎಂದು ದಾಖಲಿಸಲು ಮಧ್ಯಂತರ ನಿರ್ದೇಶನವನ್ನು ನೀಡಬೇಕೆಂದು ಕೇಂದ್ರವು ದೆಹಲಿ ಹೈಕೋರ್ಟ್‌ಗೆ ಒತ್ತಾಯಿಸಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

ವಾಟ್ಸಾಪ್ ಹೊಸ ಗೌಪ್ಯತಾ ನೀತಿಯ ವಿರುದ್ಧ ಹಲವಾರು ಅರ್ಜಿಗಳನ್ನು ಸಲ್ಲಿಕೆಯಾದ ನಂತರ ಕೇಂದ್ರವು ಈ ಅಫಿಡವಿಟ್ ಸಲ್ಲಿಸಿದೆ. ಡಾ. ಸೀಮಾ ಸಿಂಗ್, ಮೇಘನ್ ಮತ್ತು ವಿಕ್ರಮ್ ಸಿಂಗ್ ಅವರು ವಾಟ್ಸಾಪ್ ತನ್ನ ನೀತಿಯನ್ನು ಹಿಂತೆಗೆದುಕೊಳ್ಳುವಂತೆ ಅಥವಾ ಜನವರಿ 4 ರ ಗೌಪ್ಯತಾ ನೀತಿಯಿಂದ ಹೊರಗುಳಿಯುವ ಆಯ್ಕೆಯನ್ನು ನೀಡುವಂತೆ ಆದೇಶಿಸುವಂತೆ ಭಾರತದ ಒಕ್ಕೂಟಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ ವಾಟ್ಸಪ್‌ ತನ್ನ ಹೊಸ ನೀತಿಯನ್ನು ಸ್ವೀಕರಿಸಲು ಯಾರನ್ನೂ ಒತ್ತಾಯಿಸುತ್ತಿಲ್ಲ ಮತ್ತು ಅದರ ಗೌಪ್ಯತಾ ನೀತಿ ಕಡ್ಡಾಯವಲ್ಲ ಎಂದು ವಾಟ್ಸಾಪ್ ತನ್ನ ಉತ್ತರದಲ್ಲಿ ತಿಳಿಸಿದೆ.

ವಾಟ್ಸಪ್‌ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ, “2021 ರ ಹೊಸ ಗೌಪ್ಯತಾ ನೀತಿಯು ಖಾಸಗಿ ವ್ಯಕ್ತಿಗಳ(private parties) ನಡುವಿನ ಒಪ್ಪಂದವಾಗಿದ್ದು, ಬಳಕೆದಾರರು ಸ್ವೀಕರಿಸಲು ಅಥವಾ ತಿರಸ್ಕರಿಸಲು ಮುಕ್ತರಾಗಿದ್ದಾರೆ ಎಂದು ತಿಳಿಸಿದೆ. ಹೊಸ ಗೌಪ್ಯತಾ ನೀತಿಯನ್ನು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ವಾಟ್ಸಾಪ್ ದೆಹಲಿ ಹೈಕೋರ್ಟ್‌ಗೆ ಒತ್ತಾಯಿಸಿದೆ. ವಿಚಾರಣೆಯನ್ನು ಜುಲೈ 22 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...