Homeಕರ್ನಾಟಕಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

ಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

- Advertisement -
- Advertisement -

ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಅಧಿಕೃತ ವಾಟ್ಸಾಪ್ ನಂಬರ್‌ನಿಂದ ಹಿಂದೂ ದೇವರುಗಳನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ವಾಟ್ಸಾಪ್‌ ಸಂದೇಶವೊಂದು ಕೆಲ ಗ್ರೂಪ್‌ಗಳಲ್ಲಿ ಫಾರ್ವಾಡ್ ಆಗಿ ವಿವಾದ ಭುಗಿಲೆದ್ದಿದೆ.

ಮಗಳನ್ನೇ ಮದುವೆಯಾದ ಬ್ರಹ್ಮ ನಮಗೆ ದೇವರು, 16 ಸಾವಿರ ಹೆಂಡಂದಿರನ್ನು ಮದುವೆಯಾದ ದನಕಾಯುವ ಕೃಷ್ಣ ದೇವರು, ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ರಾಮ ನಮಗೆ ದೇವರು… ಹೀಗೆ ಉದ್ದದ ವಾಟ್ಸಾಪ್ ಸಂದೇಶವೊಂದನ್ನು ಫಾರ್ವಾಡ್ ಮಾಡಲಾಗಿದೆ.

ಸುದ್ದಿ ಮಾಧ್ಯಮಗಳಲ್ಲಿ ಈ ಸಂದೇಶ ಪ್ರಕಟಗೊಂಡು ಮುರುಗೇಶ್ ನಿರಾಣಿಯವರು ವಿರುದ್ಧ ಹಲವರು ಕಿಡಿ ಕಾರಿದ್ದಾರೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹಿಂದೂ ದೇವರುಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ‌ ಮೂಲಕ ಗಮನಕ್ಕೆ ಬಂತು‌. ಇದು ನಿಜವಾಗಿದ್ದರೆ, ಬಹಳ ಕೆಟ್ಟ ನಡೆ-ನುಡಿ ಎಂದು ಹೇಳಬೇಕಾಗುತ್ತದೆ. ದೇವರು ಮತ್ತು ಧರ್ಮ ಅವರವರ ನಂಬಿಕೆ, ಅದನ್ನು ನಾವು ಗೌರವಿಸಬೇಕು ಅವಹೇಳನ ಮಾಡಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ದೇವರು ಧರ್ಮದ ಹೆಸರಲ್ಲಿ ಮುಗ್ಧರ ಶೋಷಣೆ, ಮೂಢನಂಬಿಕೆಯ ಆಚರಣೆ ಮಾಡುವುದು ತಪ್ಪು. ರಾಜಕೀಯ ಇಲ್ಲವೇ ಇನ್ನಾವುದೋ ಸ್ವಾರ್ಥಸಾಧನೆಗಾಗಿ ದೇವರು- ಧರ್ಮವನ್ನು ದುರ್ಬಳಕೆ ಮಾಡುವುದುಕೂಡಾ ತಪ್ಪು ಆದರೆ.. ದೇವರನ್ನು ಗೇಲಿ-ಅವಹೇಳನ ಮಾಡುವುದು ವಿಕೃತಿ. ಇದನ್ನು ಯಾರು ಮಾಡಿದರೂ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕ್ಷಮೆಯಾಚಿಸಿದ ನಿರಾಣಿ

ವಿವಾದ ಭುಗಿಲೇಳುತ್ತಲೇ ಎಚ್ಚೆತ್ತುಕೊಂಡ ಮುರುಗೇಶ್ ನಿರಾಣಿಯವರು ವಿಡಿಯೋ ಒಂದನ್ನು ಮಾಡಿ ಕ್ಷಮೆ ಕೇಳಿದ್ದಾರೆ. “ಸಂದೇಶವೊಂದು ಫಾರ್ವಾಡ್‌ ಆಗಿರುವ ನಂಬರ್ ನನ್ನದೇ ಆಗಿದೆ. ಆ ಮೊಬೈಲ್ ನಂಬರ್ ಅನ್ನು ಸಾರ್ವಜನಿಕ ಸಂಪರ್ಕಕ್ಕಾಗಿ ನನ್ನ ಪಿಎ ಮತ್ತು ಗನ್ ಮ್ಯಾನ್ ಬಳಸುತ್ತಾರೆ. ನಿನ್ನೆ ರಾತ್ರಿ ಆ ಮೊಬೈಲ್ ನನ್ನ ಪಿಎ ಬಳಿಯಿತ್ತು. ಇಂದು ಬೆಳಿಗ್ಗೆ ಬಂದ ಸಂದೇಶವೊಂದನ್ನು ಅಜಾಗರೂಕತೆಯಿಂದ ಫಾರ್ವಾಡ್ ಆಗಿ ಅವಾಂತರ ಸೃಷ್ಠಿಯಾಗಿದೆ. ತಪ್ಪು ಯಾರೇ ಮಾಡಿದರೂ ಸಹ ತಪ್ಪು. ಈ ತಪ್ಪಿಗಾಗಿ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಅವರು ಉದ್ದೇಶ ಪೂರ್ವಕವಾಗಿ ಆ ಸಂದೇಶವನ್ನು ಫಾರ್ವಾಡ್ ಮಾಡಿಲ್ಲ. ಇದಕ್ಕಾಗಿ ನಾಡಿನ ಜನತೆಯಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ” ಎಂದು ನಿರಾಣಿ ತಿಳಿಸಿದ್ದಾರೆ.

ನಾನು ಸರ್ವಧರ್ಮ ಸಹಿಷ್ಣುವಾಗಿದ್ದೇನೆ. ಧರ್ಮ ನಂಬಿಕೆಗಳ ಬಗ್ಗೆ ಹಗುರವಾಗಿ ಎಂದೂ ಮಾತನಾಡಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...