Homeಕರ್ನಾಟಕಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

ಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

- Advertisement -
- Advertisement -

ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಅಧಿಕೃತ ವಾಟ್ಸಾಪ್ ನಂಬರ್‌ನಿಂದ ಹಿಂದೂ ದೇವರುಗಳನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ವಾಟ್ಸಾಪ್‌ ಸಂದೇಶವೊಂದು ಕೆಲ ಗ್ರೂಪ್‌ಗಳಲ್ಲಿ ಫಾರ್ವಾಡ್ ಆಗಿ ವಿವಾದ ಭುಗಿಲೆದ್ದಿದೆ.

ಮಗಳನ್ನೇ ಮದುವೆಯಾದ ಬ್ರಹ್ಮ ನಮಗೆ ದೇವರು, 16 ಸಾವಿರ ಹೆಂಡಂದಿರನ್ನು ಮದುವೆಯಾದ ದನಕಾಯುವ ಕೃಷ್ಣ ದೇವರು, ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ರಾಮ ನಮಗೆ ದೇವರು… ಹೀಗೆ ಉದ್ದದ ವಾಟ್ಸಾಪ್ ಸಂದೇಶವೊಂದನ್ನು ಫಾರ್ವಾಡ್ ಮಾಡಲಾಗಿದೆ.

ಸುದ್ದಿ ಮಾಧ್ಯಮಗಳಲ್ಲಿ ಈ ಸಂದೇಶ ಪ್ರಕಟಗೊಂಡು ಮುರುಗೇಶ್ ನಿರಾಣಿಯವರು ವಿರುದ್ಧ ಹಲವರು ಕಿಡಿ ಕಾರಿದ್ದಾರೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹಿಂದೂ ದೇವರುಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ‌ ಮೂಲಕ ಗಮನಕ್ಕೆ ಬಂತು‌. ಇದು ನಿಜವಾಗಿದ್ದರೆ, ಬಹಳ ಕೆಟ್ಟ ನಡೆ-ನುಡಿ ಎಂದು ಹೇಳಬೇಕಾಗುತ್ತದೆ. ದೇವರು ಮತ್ತು ಧರ್ಮ ಅವರವರ ನಂಬಿಕೆ, ಅದನ್ನು ನಾವು ಗೌರವಿಸಬೇಕು ಅವಹೇಳನ ಮಾಡಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ದೇವರು ಧರ್ಮದ ಹೆಸರಲ್ಲಿ ಮುಗ್ಧರ ಶೋಷಣೆ, ಮೂಢನಂಬಿಕೆಯ ಆಚರಣೆ ಮಾಡುವುದು ತಪ್ಪು. ರಾಜಕೀಯ ಇಲ್ಲವೇ ಇನ್ನಾವುದೋ ಸ್ವಾರ್ಥಸಾಧನೆಗಾಗಿ ದೇವರು- ಧರ್ಮವನ್ನು ದುರ್ಬಳಕೆ ಮಾಡುವುದುಕೂಡಾ ತಪ್ಪು ಆದರೆ.. ದೇವರನ್ನು ಗೇಲಿ-ಅವಹೇಳನ ಮಾಡುವುದು ವಿಕೃತಿ. ಇದನ್ನು ಯಾರು ಮಾಡಿದರೂ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕ್ಷಮೆಯಾಚಿಸಿದ ನಿರಾಣಿ

ವಿವಾದ ಭುಗಿಲೇಳುತ್ತಲೇ ಎಚ್ಚೆತ್ತುಕೊಂಡ ಮುರುಗೇಶ್ ನಿರಾಣಿಯವರು ವಿಡಿಯೋ ಒಂದನ್ನು ಮಾಡಿ ಕ್ಷಮೆ ಕೇಳಿದ್ದಾರೆ. “ಸಂದೇಶವೊಂದು ಫಾರ್ವಾಡ್‌ ಆಗಿರುವ ನಂಬರ್ ನನ್ನದೇ ಆಗಿದೆ. ಆ ಮೊಬೈಲ್ ನಂಬರ್ ಅನ್ನು ಸಾರ್ವಜನಿಕ ಸಂಪರ್ಕಕ್ಕಾಗಿ ನನ್ನ ಪಿಎ ಮತ್ತು ಗನ್ ಮ್ಯಾನ್ ಬಳಸುತ್ತಾರೆ. ನಿನ್ನೆ ರಾತ್ರಿ ಆ ಮೊಬೈಲ್ ನನ್ನ ಪಿಎ ಬಳಿಯಿತ್ತು. ಇಂದು ಬೆಳಿಗ್ಗೆ ಬಂದ ಸಂದೇಶವೊಂದನ್ನು ಅಜಾಗರೂಕತೆಯಿಂದ ಫಾರ್ವಾಡ್ ಆಗಿ ಅವಾಂತರ ಸೃಷ್ಠಿಯಾಗಿದೆ. ತಪ್ಪು ಯಾರೇ ಮಾಡಿದರೂ ಸಹ ತಪ್ಪು. ಈ ತಪ್ಪಿಗಾಗಿ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಅವರು ಉದ್ದೇಶ ಪೂರ್ವಕವಾಗಿ ಆ ಸಂದೇಶವನ್ನು ಫಾರ್ವಾಡ್ ಮಾಡಿಲ್ಲ. ಇದಕ್ಕಾಗಿ ನಾಡಿನ ಜನತೆಯಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ” ಎಂದು ನಿರಾಣಿ ತಿಳಿಸಿದ್ದಾರೆ.

ನಾನು ಸರ್ವಧರ್ಮ ಸಹಿಷ್ಣುವಾಗಿದ್ದೇನೆ. ಧರ್ಮ ನಂಬಿಕೆಗಳ ಬಗ್ಗೆ ಹಗುರವಾಗಿ ಎಂದೂ ಮಾತನಾಡಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...