Homeಮುಖಪುಟಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

- Advertisement -
- Advertisement -

ಜನರಿಗೆ ವಾಟ್ಸಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆಗಳನ್ನು ನೀಡಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ನವೆಂಬರ್ 8ರ ಶುಕ್ರವಾರದಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ವಾಟ್ಸಾಪ್ ಮೂಲಕ ನಾಗರಿಕರಿಗೆ ಎಲ್ಲಾ ರೀತಿಯ ಸೇವೆಗಳನ್ನು ಒದಗಿಸಲು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಾಟ್ಸಾಪ್ ಮೂಲಕ ಕನಿಷ್ಠ 100 ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ರಿಯಲ್ ಟೈಮ್ ಗವರ್ನೆನ್ಸ್ (ಆರ್‌ಟಿಜಿ) ಸಚಿವ ನಾರಾ ಲೋಕೇಶ್ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. “ಇನ್ನೂ 90 ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರಗಳನ್ನು ಕ್ಯೂಆರ್ ಕೋಡ್ ಮೂಲಕ ಪಡೆಯುವಂತೆ ನೋಡಿಕೊಳ್ಳಲು ಕ್ರಮಗಳು ಸಹ ನಡೆಯುತ್ತಿವೆ” ಎಂದು ಅವರು ತಿಳಿಸಿದ್ದಾರೆ. ಆಂಧ್ರಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಜಿಟಲ್ ಸಹಿಯೊಂದಿಗೆ ಭೌತಿಕ ಪ್ರಮಾಣಪತ್ರಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳಿದ್ದರೂ, ಹೆಚ್ಚಿನ ಅಧಿಕಾರಿಗಳಿಗೆ ಈ ನಿಯಮದ ಬಗ್ಗೆ ತಿಳಿದಿಲ್ಲ, ಹೀಗಾಗಿ ವಿದ್ಯಾರ್ಥಿಗಳು ಭೌತಿಕ ಪ್ರಮಾಣಪತ್ರಗಳನ್ನು ಸಲ್ಲಿಸಲು ಒತ್ತಾಯಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ 40 ಲಕ್ಷ ಜನರ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ನಾಯ್ಡು ಅವರಿಗೆ ತಿಳಿಸಿದಾಗ, ತಕ್ಷಣವೇ ಡೇಟಾವನ್ನು ಸಂಗ್ರಹಿಸಿ ಅದನ್ನು ಪರಸ್ಪರ ಜೋಡಿಸಲು ಕ್ರಮಕೈಗೊಳ್ಳುವಂತೆ ಅವರು ಅವರಿಗೆ ಸೂಚಿಸಿದ್ದಾರೆ. ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ಮೂಲಕ ರಾಜ್ಯದ ಎಲ್ಲಾ ಮನೆಗಳನ್ನು ಇಂಟರ್‌ಲಿಂಕ್ ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಡೀ ದತ್ತಾಂಶವನ್ನು ಒಂದಕ್ಕೊಂದು ಜೋಡಿಸುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ಮೂಡುತ್ತದೆ, ಹೀಗಾಗಿ ಭ್ರಷ್ಟಾಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಸಿಎಂ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಅಧಿಕಾರಿಗಳು ದತ್ತಾಂಶ ಏಕೀಕರಣದ ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಮತ್ತು ಸಾಧ್ಯವಾದಷ್ಟು ಬೇಗ ಅದನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯೂ ಆಧಾರ್ ಪಡೆಯುವಂತೆ ನೋಡಿಕೊಳ್ಳಬೇಕು ಮತ್ತು ನವಜಾತ ಶಿಶುವಿಗೂ ಆಧಾರ್ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರವು 40 ವಿವಿಧ ಇಲಾಖೆಗಳನ್ನು ಹೊಂದಿದ್ದು, ಸರ್ಕಾರದ 128 ವಿವಿಧ ವಿಭಾಗಗಳಲ್ಲಿ 178 ಡೇಟಾ ಕ್ಷೇತ್ರಗಳಿಂದ 500 ಟಿಬಿ ಡೇಟಾ ಲಭ್ಯವಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ರಿಯಲ್ ಟೈಮ್ ಗವರ್ನೆನ್ಸ್ ಮುಖ್ಯ ದತ್ತಾಂಶ ಸಂಪನ್ಮೂಲವಾಗಬೇಕು ಎಂದು ಒತ್ತಿ ಹೇಳಿದ ಅವರು, ಎಲ್ಲಾ ಇಲಾಖೆಗಳ ಡೇಟಾವನ್ನು ಪರಸ್ಪರ ಲಿಂಕ್ ಮಾಡಲು ಮತ್ತು ಈ ಡೇಟಾದ ಮೂಲಕ ಸಾಮಾನ್ಯ ವೇದಿಕೆಗೆ ತರಬೇಕು. ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ವಿಶ್ಲೇಷಿಸಬೇಕು ಎಂದು ಅಧಿಕಾರಿಗಳಿಗೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರ ಗಡಿ ದಾಟಿದ ಆರೋಪ; ಮತ್ತೆ 23 ತಮಿಳು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಸಮುದ್ರ ಗಡಿ ದಾಟಿದ ಆರೋಪ; ಮತ್ತೆ 23 ತಮಿಳು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...