Homeಮುಖಪುಟವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ - ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

- Advertisement -
- Advertisement -

ತನ್ನ ಹೊಸ ವಿವಾದಾತ್ಮಕ ಗೌಪ್ಯತಾ ನೀತಿಯನ್ನು ಕೈಬಿಡುವಂತೆ ಸರ್ಕಾರವು ವಾಟ್ಸಪ್‌ಗೆ ಆದೇಶ ನೀಡಿದೆ ಎಂದು ವರದಿಯಾಗಿದೆ. ವಾಟ್ಸಪ್‌ನ ಈ ಬದಲಾವಣೆಗಳು ಭಾರತೀಯ ನಾಗರಿಕರ ಹಿತಾಸಕ್ತಿಗಳ ಸಂರಕ್ಷಿತ ಮೌಲ್ಯಗಳನ್ನು ಹಾಳುಮಾಡುವುದರ ಜೊತೆಗೆ ಗೌಪ್ಯತೆ, ದತ್ತಾಂಶ ಸುರಕ್ಷತೆ, ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಮೇ 18 ರಂದು ವಾಟ್ಸಾಪ್‌ಗೆ ಬರೆದ ಪತ್ರದಲ್ಲಿ ಈ ಮೇಲಿನ ಹೇಳಿಕೆಯನ್ನು ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್‌ ಆನ್‌ಲೈನ್‌ ವರದಿ ಮಾಡಿದೆ. ಸಚಿವಾಲಯದ ಪತ್ರಕ್ಕೆ ಏಳು ದಿನಗಳಲ್ಲಿ ತೃಪ್ತಿದಾಯಕ ಪ್ರತಿಕ್ರಿಯೆ ಬರದಿದ್ದರೆ ಕಾನೂನಿನ ಪ್ರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸಚಿವಾಲಯವು ಈ ವಿಷಯದ ಬಗ್ಗೆ ಕಠಿಣವಾದ ನಿಲುವನ್ನು ತೆಗೆದುಕೊಂಡಿದ್ದು, ಭಾರತೀಯ ಬಳಕೆದಾರರ ಮೇಲೆ “ಅನ್ಯಾಯದ” ನಿಯಮಗಳು ಮತ್ತು ಷರತ್ತುಗಳನ್ನು ಹೇರುವ ವಾಟ್ಸಪ್‌ನ ಈ ನವೀಕರಣ(ಅಪ್‌ಡೇಟ್‌) ಸಮಸ್ಯಾತ್ಮಕ ಮಾತ್ರವಲ್ಲದೆ ಬೇಜವಾಬ್ದಾರಿತನದಿಂದಲೂ ಕೂಡಿದೆ ಎಂದು ಮೂಲಗಳು ತಿಳಿಸಿವೆ.

ಸಮಸ್ಯೆಯನ್ನು ಬಗೆಹರಿಸಲು ಕಂಪನಿಯು ಸರ್ಕಾರದೊಂದಿಗೆ ನಿರಂತರವಾಗಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಎಂದು ವಾಟ್ಸಾಪ್ ವಕ್ತಾರರು ತಿಳಿಸಿದ್ದಾರೆ. “ಭವಿಷ್ಯದಲ್ಲಿ ಬ್ಯುಸಿನೆಸ್‌ ವಾಟ್ಸಪ್‌ನ ಹೊಸ ಆಯ್ಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು ನಮ್ಮ ಗುರಿಯಾಗಿದೆ. ಈ ಅಪ್‌ಡೇಟ್‌ನಿಂದಾಗಿ ಮೇ 15 ರಂದು ಯಾವುದೇ ಖಾತೆಗಳನ್ನು ಅಳಿಸಲಾಗಿಲ್ಲ ಮತ್ತು ಭಾರತದಲ್ಲಿ ಯಾರೂ ವಾಟ್ಸಾಪ್‌ನ ಕಾರ್ಯವನ್ನು ಕಳೆದುಕೊಂಡಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

“… ಈ ಅಪ್‌ಡೇಟ್‌‌ ನಿಂದಾಗಿ ಯಾವುದೆ ವ್ಯಕ್ತಿಯ ವೈಯಕ್ತಿಕ ಸಂದೇಶಗಳ ಗೌಪ್ಯತೆಯು ಉಲ್ಲಂಘನೆಯಾಗುವುದಿಲ್ಲ ಎಂದು ನಾವು ಮೊದಲೆ ಹೇಳಿದ್ದೆವು, ಈಗಲೂ ಅದನ್ನೇ ದೃಡೀಕರಿಸುತ್ತೇವೆ. ಜನರ ವೈಯಕ್ತಿಕ ಸಂದೇಶಗಳು ಮತ್ತು ಖಾಸಗಿ ಮಾಹಿತಿಯನ್ನು ನಾವು ಹೇಗೆ ರಕ್ಷಿಸುತ್ತೇವೆ ಎಂಬುದನ್ನು ವಿವರಿಸಲು ನಾವು ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತೇವೆ” ಎಂದು ವಾಟ್ಸಪ್‌ ವಕ್ತಾರರು ತಿಳಿಸಿದ್ದಾರೆ.

ಆದರೆ ಐಟಿ ಸಚಿವಾಲಯದ ಮೂಲಗಳು, “ಭಾರತೀಯ ನಾಗರಿಕರ ಹಿತಾಸಕ್ತಿಗಳನ್ನು ಕಾಪಾಡುವ ತನ್ನ ಸಾರ್ವಭೌಮ ಜವಾಬ್ದಾರಿಯನ್ನು ನಿರ್ವಹಿಸಲು, ಭಾರತದ ಕಾನೂನಿನ ಅಡಿಯಲ್ಲಿ ಸರ್ಕಾರವು ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತದೆ” ಎಂದು ತಿಳಿಸಿವೆ.

ಇದನ್ನೂ ಓದಿ: ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...