Homeಮುಖಪುಟವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ - ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

- Advertisement -
- Advertisement -

ತನ್ನ ಹೊಸ ವಿವಾದಾತ್ಮಕ ಗೌಪ್ಯತಾ ನೀತಿಯನ್ನು ಕೈಬಿಡುವಂತೆ ಸರ್ಕಾರವು ವಾಟ್ಸಪ್‌ಗೆ ಆದೇಶ ನೀಡಿದೆ ಎಂದು ವರದಿಯಾಗಿದೆ. ವಾಟ್ಸಪ್‌ನ ಈ ಬದಲಾವಣೆಗಳು ಭಾರತೀಯ ನಾಗರಿಕರ ಹಿತಾಸಕ್ತಿಗಳ ಸಂರಕ್ಷಿತ ಮೌಲ್ಯಗಳನ್ನು ಹಾಳುಮಾಡುವುದರ ಜೊತೆಗೆ ಗೌಪ್ಯತೆ, ದತ್ತಾಂಶ ಸುರಕ್ಷತೆ, ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಮೇ 18 ರಂದು ವಾಟ್ಸಾಪ್‌ಗೆ ಬರೆದ ಪತ್ರದಲ್ಲಿ ಈ ಮೇಲಿನ ಹೇಳಿಕೆಯನ್ನು ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್‌ ಆನ್‌ಲೈನ್‌ ವರದಿ ಮಾಡಿದೆ. ಸಚಿವಾಲಯದ ಪತ್ರಕ್ಕೆ ಏಳು ದಿನಗಳಲ್ಲಿ ತೃಪ್ತಿದಾಯಕ ಪ್ರತಿಕ್ರಿಯೆ ಬರದಿದ್ದರೆ ಕಾನೂನಿನ ಪ್ರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸಚಿವಾಲಯವು ಈ ವಿಷಯದ ಬಗ್ಗೆ ಕಠಿಣವಾದ ನಿಲುವನ್ನು ತೆಗೆದುಕೊಂಡಿದ್ದು, ಭಾರತೀಯ ಬಳಕೆದಾರರ ಮೇಲೆ “ಅನ್ಯಾಯದ” ನಿಯಮಗಳು ಮತ್ತು ಷರತ್ತುಗಳನ್ನು ಹೇರುವ ವಾಟ್ಸಪ್‌ನ ಈ ನವೀಕರಣ(ಅಪ್‌ಡೇಟ್‌) ಸಮಸ್ಯಾತ್ಮಕ ಮಾತ್ರವಲ್ಲದೆ ಬೇಜವಾಬ್ದಾರಿತನದಿಂದಲೂ ಕೂಡಿದೆ ಎಂದು ಮೂಲಗಳು ತಿಳಿಸಿವೆ.

ಸಮಸ್ಯೆಯನ್ನು ಬಗೆಹರಿಸಲು ಕಂಪನಿಯು ಸರ್ಕಾರದೊಂದಿಗೆ ನಿರಂತರವಾಗಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಎಂದು ವಾಟ್ಸಾಪ್ ವಕ್ತಾರರು ತಿಳಿಸಿದ್ದಾರೆ. “ಭವಿಷ್ಯದಲ್ಲಿ ಬ್ಯುಸಿನೆಸ್‌ ವಾಟ್ಸಪ್‌ನ ಹೊಸ ಆಯ್ಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು ನಮ್ಮ ಗುರಿಯಾಗಿದೆ. ಈ ಅಪ್‌ಡೇಟ್‌ನಿಂದಾಗಿ ಮೇ 15 ರಂದು ಯಾವುದೇ ಖಾತೆಗಳನ್ನು ಅಳಿಸಲಾಗಿಲ್ಲ ಮತ್ತು ಭಾರತದಲ್ಲಿ ಯಾರೂ ವಾಟ್ಸಾಪ್‌ನ ಕಾರ್ಯವನ್ನು ಕಳೆದುಕೊಂಡಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

“… ಈ ಅಪ್‌ಡೇಟ್‌‌ ನಿಂದಾಗಿ ಯಾವುದೆ ವ್ಯಕ್ತಿಯ ವೈಯಕ್ತಿಕ ಸಂದೇಶಗಳ ಗೌಪ್ಯತೆಯು ಉಲ್ಲಂಘನೆಯಾಗುವುದಿಲ್ಲ ಎಂದು ನಾವು ಮೊದಲೆ ಹೇಳಿದ್ದೆವು, ಈಗಲೂ ಅದನ್ನೇ ದೃಡೀಕರಿಸುತ್ತೇವೆ. ಜನರ ವೈಯಕ್ತಿಕ ಸಂದೇಶಗಳು ಮತ್ತು ಖಾಸಗಿ ಮಾಹಿತಿಯನ್ನು ನಾವು ಹೇಗೆ ರಕ್ಷಿಸುತ್ತೇವೆ ಎಂಬುದನ್ನು ವಿವರಿಸಲು ನಾವು ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತೇವೆ” ಎಂದು ವಾಟ್ಸಪ್‌ ವಕ್ತಾರರು ತಿಳಿಸಿದ್ದಾರೆ.

ಆದರೆ ಐಟಿ ಸಚಿವಾಲಯದ ಮೂಲಗಳು, “ಭಾರತೀಯ ನಾಗರಿಕರ ಹಿತಾಸಕ್ತಿಗಳನ್ನು ಕಾಪಾಡುವ ತನ್ನ ಸಾರ್ವಭೌಮ ಜವಾಬ್ದಾರಿಯನ್ನು ನಿರ್ವಹಿಸಲು, ಭಾರತದ ಕಾನೂನಿನ ಅಡಿಯಲ್ಲಿ ಸರ್ಕಾರವು ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತದೆ” ಎಂದು ತಿಳಿಸಿವೆ.

ಇದನ್ನೂ ಓದಿ: ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...