Homeಮುಖಪುಟವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ - ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

- Advertisement -
- Advertisement -

ತನ್ನ ಹೊಸ ವಿವಾದಾತ್ಮಕ ಗೌಪ್ಯತಾ ನೀತಿಯನ್ನು ಕೈಬಿಡುವಂತೆ ಸರ್ಕಾರವು ವಾಟ್ಸಪ್‌ಗೆ ಆದೇಶ ನೀಡಿದೆ ಎಂದು ವರದಿಯಾಗಿದೆ. ವಾಟ್ಸಪ್‌ನ ಈ ಬದಲಾವಣೆಗಳು ಭಾರತೀಯ ನಾಗರಿಕರ ಹಿತಾಸಕ್ತಿಗಳ ಸಂರಕ್ಷಿತ ಮೌಲ್ಯಗಳನ್ನು ಹಾಳುಮಾಡುವುದರ ಜೊತೆಗೆ ಗೌಪ್ಯತೆ, ದತ್ತಾಂಶ ಸುರಕ್ಷತೆ, ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಮೇ 18 ರಂದು ವಾಟ್ಸಾಪ್‌ಗೆ ಬರೆದ ಪತ್ರದಲ್ಲಿ ಈ ಮೇಲಿನ ಹೇಳಿಕೆಯನ್ನು ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್‌ ಆನ್‌ಲೈನ್‌ ವರದಿ ಮಾಡಿದೆ. ಸಚಿವಾಲಯದ ಪತ್ರಕ್ಕೆ ಏಳು ದಿನಗಳಲ್ಲಿ ತೃಪ್ತಿದಾಯಕ ಪ್ರತಿಕ್ರಿಯೆ ಬರದಿದ್ದರೆ ಕಾನೂನಿನ ಪ್ರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸಚಿವಾಲಯವು ಈ ವಿಷಯದ ಬಗ್ಗೆ ಕಠಿಣವಾದ ನಿಲುವನ್ನು ತೆಗೆದುಕೊಂಡಿದ್ದು, ಭಾರತೀಯ ಬಳಕೆದಾರರ ಮೇಲೆ “ಅನ್ಯಾಯದ” ನಿಯಮಗಳು ಮತ್ತು ಷರತ್ತುಗಳನ್ನು ಹೇರುವ ವಾಟ್ಸಪ್‌ನ ಈ ನವೀಕರಣ(ಅಪ್‌ಡೇಟ್‌) ಸಮಸ್ಯಾತ್ಮಕ ಮಾತ್ರವಲ್ಲದೆ ಬೇಜವಾಬ್ದಾರಿತನದಿಂದಲೂ ಕೂಡಿದೆ ಎಂದು ಮೂಲಗಳು ತಿಳಿಸಿವೆ.

ಸಮಸ್ಯೆಯನ್ನು ಬಗೆಹರಿಸಲು ಕಂಪನಿಯು ಸರ್ಕಾರದೊಂದಿಗೆ ನಿರಂತರವಾಗಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಎಂದು ವಾಟ್ಸಾಪ್ ವಕ್ತಾರರು ತಿಳಿಸಿದ್ದಾರೆ. “ಭವಿಷ್ಯದಲ್ಲಿ ಬ್ಯುಸಿನೆಸ್‌ ವಾಟ್ಸಪ್‌ನ ಹೊಸ ಆಯ್ಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು ನಮ್ಮ ಗುರಿಯಾಗಿದೆ. ಈ ಅಪ್‌ಡೇಟ್‌ನಿಂದಾಗಿ ಮೇ 15 ರಂದು ಯಾವುದೇ ಖಾತೆಗಳನ್ನು ಅಳಿಸಲಾಗಿಲ್ಲ ಮತ್ತು ಭಾರತದಲ್ಲಿ ಯಾರೂ ವಾಟ್ಸಾಪ್‌ನ ಕಾರ್ಯವನ್ನು ಕಳೆದುಕೊಂಡಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

“… ಈ ಅಪ್‌ಡೇಟ್‌‌ ನಿಂದಾಗಿ ಯಾವುದೆ ವ್ಯಕ್ತಿಯ ವೈಯಕ್ತಿಕ ಸಂದೇಶಗಳ ಗೌಪ್ಯತೆಯು ಉಲ್ಲಂಘನೆಯಾಗುವುದಿಲ್ಲ ಎಂದು ನಾವು ಮೊದಲೆ ಹೇಳಿದ್ದೆವು, ಈಗಲೂ ಅದನ್ನೇ ದೃಡೀಕರಿಸುತ್ತೇವೆ. ಜನರ ವೈಯಕ್ತಿಕ ಸಂದೇಶಗಳು ಮತ್ತು ಖಾಸಗಿ ಮಾಹಿತಿಯನ್ನು ನಾವು ಹೇಗೆ ರಕ್ಷಿಸುತ್ತೇವೆ ಎಂಬುದನ್ನು ವಿವರಿಸಲು ನಾವು ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತೇವೆ” ಎಂದು ವಾಟ್ಸಪ್‌ ವಕ್ತಾರರು ತಿಳಿಸಿದ್ದಾರೆ.

ಆದರೆ ಐಟಿ ಸಚಿವಾಲಯದ ಮೂಲಗಳು, “ಭಾರತೀಯ ನಾಗರಿಕರ ಹಿತಾಸಕ್ತಿಗಳನ್ನು ಕಾಪಾಡುವ ತನ್ನ ಸಾರ್ವಭೌಮ ಜವಾಬ್ದಾರಿಯನ್ನು ನಿರ್ವಹಿಸಲು, ಭಾರತದ ಕಾನೂನಿನ ಅಡಿಯಲ್ಲಿ ಸರ್ಕಾರವು ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತದೆ” ಎಂದು ತಿಳಿಸಿವೆ.

ಇದನ್ನೂ ಓದಿ: ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...