Homeಮುಖಪುಟಗೌಪ್ಯತೆಯ ಬದ್ಧತೆ ಮುರಿಯಲು ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ: ನ್ಯಾಯಾಲಯಕ್ಕೆ ತಿಳಿಸಿದ ವಾಟ್ಸಾಪ್

ಗೌಪ್ಯತೆಯ ಬದ್ಧತೆ ಮುರಿಯಲು ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ: ನ್ಯಾಯಾಲಯಕ್ಕೆ ತಿಳಿಸಿದ ವಾಟ್ಸಾಪ್

- Advertisement -
- Advertisement -

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಡ್ ಎನ್‌ಕ್ರಿಪ್ಶನ್‌) ಯಿಂದ ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು. ಈ ನಿಯಮವನ್ನು ಉಲ್ಲಂಘಿಸಲು ಒತ್ತಾಯಿಸಿದರೆ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಗೊಳಿಸುವುದಾಗಿ ಮೆಟಾ ಒಡೆತನದ ವಾಟ್ಸಾಪ್‌ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಯಂತ್ರಿಸುವ ‘ಮಾಹಿತಿ ತಂತ್ರಜ್ಞಾನ ನಿಯಮ ನಿಯಮಗಳು-2021’ ಅನ್ನು ಪ್ರಶ್ನಿಸಿ 2021ರಲ್ಲಿ ವಾಟ್ಸಾಪ್‌ ನ್ಯಾಯಾಲಯದ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ನಡೆಸುತ್ತಿದೆ. “ಬಳಕೆದಾರರ ಖಾಸಗಿತನವನ್ನು ಉಲ್ಲಂಘಿಸುವಂತೆ ಒತ್ತಾಯಿಸಿದರೆ ಭಾರತ ತೊರೆಯುತ್ತೇವೆ” ಎಂದು ವಾಟ್ಸಾಪ್‌ ಕಂಪನಿಯ ವಕೀಲ ತೇಜಸ್‌ ಕರಿಯಾ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ 400 ಮಿಲಿಯನ್‌ಗೂ ಹೆಚ್ಚು ಬಳಕೆದಾರರನ್ನು ವಾಟ್ಸಾಪ್ ಹೊಂದಿದೆ. ವಾಟ್ಸಾಪ್ ಒದಗಿಸುವ ಗೌಪ್ಯತೆ ವೈಶಿಷ್ಟ್ಯಗಳ ಕಾರಣದಿಂದಾಗಿಯೇ ಜನರು ಅದನ್ನು ಹೆಚ್ಚಾಗಿ ನಂಬಿದ್ದಾರೆ ಮತ್ತು ಬಳಸುತ್ತಿದ್ದಾರೆ.
ಬಳಕೆದಾರರ ಗೌಪ್ಯತೆಯನ್ನು ದುರ್ಬಲಗೊಳಿಸುವ ಯಾವುದೇ ನಿಯಮಗಳು ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸಾಪ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ಗೌಪ್ಯತೆಯನ್ನು ಉಲ್ಲಂಘಿಸುವ ನಿಯಮಗಳು ಜಗತ್ತಿನಲ್ಲಿ ಎಲ್ಲೂ ಇಲ್ಲ. ಬ್ರೆಝಿಲ್‌ನಲ್ಲಿಯೂ ಇಂತಹ ನಿಯಮಗಳಿಲ್ಲ. ಹೊಸ ನಿಯಮದ ಪ್ರಕಾರ ನಾವು ಎಲ್ಲಾ ಸಂದೇಶಗಳನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಸರ್ಕಾರ ಯಾವ ಸಂದೇಶವನ್ನು ಡೀಕ್ರಿಪ್ಟ್ ಮಾಡಲು ಹೇಳುತ್ತದೆ ಎಂದು ನಮಗೆ ಗೊತ್ತಿಲ್ಲ. ಸರ್ಕಾರದ ನಿಯಮ ಪಾಲಿಸುವುದಾದರೆ, ನಾವು ಹಲವಾರು ವರ್ಷಗಳವರೆಗೆ ಲಕ್ಷಾಂತರ ಸಂದೇಶಗಳನ್ನು ಸಂಗ್ರಹಿಸಿಡಬೇಕಾಗುತ್ತದೆ ಎಂದು ವಾಟ್ಸಾಪ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಇಲ್ಲಿ ಎರಡು ವಿಚಾರಗಳಿವೆ. ಒಂದು, ಬಳಕೆದಾರರ ಖಾಸಗಿತನ, ಗೌಪ್ಯತೆ. ಎರಡು, ಸರ್ಕಾರವು ಬಳಕೆದಾರರ ಸಂದೇಶಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕನ್ನು ಹೊಂದಿದೆ. ಉದಾಹರಣೆಗೆ, ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬ ಆರೋಪದ ಮೇಲೆ ಆತನನ್ನು ಹಿಡಿಯಲು, ಆತ ಕಳುಹಿಸುವ ಸಂದೇಶಗಳಿಗಾಗಿ ಸರ್ಕಾರವು ನಮ್ಮ ಮೇಲೆ ಒತ್ತಡ ಹೇರುತ್ತದೆ. ನಾವು ಬಳಕೆದಾರ ಮತ್ತು ಸರ್ಕಾರಗಳ ನಡುವೆ ಸಿಲುಕಿದ್ದೇವೆ. ಒಂದು ಸೂಚನೆಗಾಗಿ ನಾವು ನಮ್ಮ ಗೌಪ್ಯತೆಯ ನಿಲುವನ್ನು ಮುರಿಯಬೇಕೆ? ಈ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯವು ಪರಿಶೀಲಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಈ ನಿಯಮ ರೂಪಿಸಲು ಸರ್ಕಾರಕ್ಕೆ ಅವಕಾಶವಿಲ್ಲ” ಎಂದು ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ : ‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...