Homeಮುಖಪುಟವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

ವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಲೇಆಫ್‌ನಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಲ್ಲದ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಇದನ್ನೂ ಓದಿರಿ: ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಉದ್ಯೋಗಕ್ಕಾಗಿ ಹುಡುಕಾಡುತ್ತಾ ಕಷ್ಟದಲ್ಲಿರುವ ಜನರನ್ನು ವಂಚಿಸಲು ಈ ವಂಚಕರು ಸಕ್ರಿಯವಾಗಿದ್ದಾರೆ.

ವಂಚಕರು ನಿಮ್ಮನ್ನು ಹೇಗೆ ಸಂಪರ್ಕಿಸುತ್ತಾರೆ?

ನಿಮಗೆ ಉದ್ಯೋಗವಕಾಶವಿದೆ ಎಂಬ ಸಂದೇಶದೊಂದಿಗೆ ವಾಟ್ಸ್‌ಅಪ್‌, ಫೇಸ್‌ಬುಕ್‌, ಲಿಂಕ್ಡ್‌ಇನ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ವಂಚಕರ ತಂತ್ರವೇನು?

ಯೂಟ್ಯೂಬ್‌ ವಿಡಿಯೊಗಳನ್ನು ಲೈಕ್ ಮಾಡಿದರೆ ಒಂದು ಲೈಕ್‌ಗೆ ತಲಾ 50 ರೂಪಾಯಿ ನೀಡುತ್ತೇವೆ ಎಂಬ ಕೀಳುಮಟ್ಟದ ಟಾಸ್ಕ್‌‌ ನೀಡುವ ಮೂಲಕ ನಿಮ್ಮನ್ನು ಆಕರ್ಷಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...