Homeಮುಖಪುಟವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

ವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಲೇಆಫ್‌ನಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಲ್ಲದ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಇದನ್ನೂ ಓದಿರಿ: ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಉದ್ಯೋಗಕ್ಕಾಗಿ ಹುಡುಕಾಡುತ್ತಾ ಕಷ್ಟದಲ್ಲಿರುವ ಜನರನ್ನು ವಂಚಿಸಲು ಈ ವಂಚಕರು ಸಕ್ರಿಯವಾಗಿದ್ದಾರೆ.

ವಂಚಕರು ನಿಮ್ಮನ್ನು ಹೇಗೆ ಸಂಪರ್ಕಿಸುತ್ತಾರೆ?

ನಿಮಗೆ ಉದ್ಯೋಗವಕಾಶವಿದೆ ಎಂಬ ಸಂದೇಶದೊಂದಿಗೆ ವಾಟ್ಸ್‌ಅಪ್‌, ಫೇಸ್‌ಬುಕ್‌, ಲಿಂಕ್ಡ್‌ಇನ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ವಂಚಕರ ತಂತ್ರವೇನು?

ಯೂಟ್ಯೂಬ್‌ ವಿಡಿಯೊಗಳನ್ನು ಲೈಕ್ ಮಾಡಿದರೆ ಒಂದು ಲೈಕ್‌ಗೆ ತಲಾ 50 ರೂಪಾಯಿ ನೀಡುತ್ತೇವೆ ಎಂಬ ಕೀಳುಮಟ್ಟದ ಟಾಸ್ಕ್‌‌ ನೀಡುವ ಮೂಲಕ ನಿಮ್ಮನ್ನು ಆಕರ್ಷಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...