Homeಮುಖಪುಟವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

ವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಲೇಆಫ್‌ನಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಲ್ಲದ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಇದನ್ನೂ ಓದಿರಿ: ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಉದ್ಯೋಗಕ್ಕಾಗಿ ಹುಡುಕಾಡುತ್ತಾ ಕಷ್ಟದಲ್ಲಿರುವ ಜನರನ್ನು ವಂಚಿಸಲು ಈ ವಂಚಕರು ಸಕ್ರಿಯವಾಗಿದ್ದಾರೆ.

ವಂಚಕರು ನಿಮ್ಮನ್ನು ಹೇಗೆ ಸಂಪರ್ಕಿಸುತ್ತಾರೆ?

ನಿಮಗೆ ಉದ್ಯೋಗವಕಾಶವಿದೆ ಎಂಬ ಸಂದೇಶದೊಂದಿಗೆ ವಾಟ್ಸ್‌ಅಪ್‌, ಫೇಸ್‌ಬುಕ್‌, ಲಿಂಕ್ಡ್‌ಇನ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ವಂಚಕರ ತಂತ್ರವೇನು?

ಯೂಟ್ಯೂಬ್‌ ವಿಡಿಯೊಗಳನ್ನು ಲೈಕ್ ಮಾಡಿದರೆ ಒಂದು ಲೈಕ್‌ಗೆ ತಲಾ 50 ರೂಪಾಯಿ ನೀಡುತ್ತೇವೆ ಎಂಬ ಕೀಳುಮಟ್ಟದ ಟಾಸ್ಕ್‌‌ ನೀಡುವ ಮೂಲಕ ನಿಮ್ಮನ್ನು ಆಕರ್ಷಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...