Homeಮುಖಪುಟವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

ವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಲೇಆಫ್‌ನಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಲ್ಲದ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಇದನ್ನೂ ಓದಿರಿ: ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಉದ್ಯೋಗಕ್ಕಾಗಿ ಹುಡುಕಾಡುತ್ತಾ ಕಷ್ಟದಲ್ಲಿರುವ ಜನರನ್ನು ವಂಚಿಸಲು ಈ ವಂಚಕರು ಸಕ್ರಿಯವಾಗಿದ್ದಾರೆ.

ವಂಚಕರು ನಿಮ್ಮನ್ನು ಹೇಗೆ ಸಂಪರ್ಕಿಸುತ್ತಾರೆ?

ನಿಮಗೆ ಉದ್ಯೋಗವಕಾಶವಿದೆ ಎಂಬ ಸಂದೇಶದೊಂದಿಗೆ ವಾಟ್ಸ್‌ಅಪ್‌, ಫೇಸ್‌ಬುಕ್‌, ಲಿಂಕ್ಡ್‌ಇನ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ವಂಚಕರ ತಂತ್ರವೇನು?

ಯೂಟ್ಯೂಬ್‌ ವಿಡಿಯೊಗಳನ್ನು ಲೈಕ್ ಮಾಡಿದರೆ ಒಂದು ಲೈಕ್‌ಗೆ ತಲಾ 50 ರೂಪಾಯಿ ನೀಡುತ್ತೇವೆ ಎಂಬ ಕೀಳುಮಟ್ಟದ ಟಾಸ್ಕ್‌‌ ನೀಡುವ ಮೂಲಕ ನಿಮ್ಮನ್ನು ಆಕರ್ಷಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...