Homeಮುಖಪುಟವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

ವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಲೇಆಫ್‌ನಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಲ್ಲದ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಇದನ್ನೂ ಓದಿರಿ: ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಉದ್ಯೋಗಕ್ಕಾಗಿ ಹುಡುಕಾಡುತ್ತಾ ಕಷ್ಟದಲ್ಲಿರುವ ಜನರನ್ನು ವಂಚಿಸಲು ಈ ವಂಚಕರು ಸಕ್ರಿಯವಾಗಿದ್ದಾರೆ.

ವಂಚಕರು ನಿಮ್ಮನ್ನು ಹೇಗೆ ಸಂಪರ್ಕಿಸುತ್ತಾರೆ?

ನಿಮಗೆ ಉದ್ಯೋಗವಕಾಶವಿದೆ ಎಂಬ ಸಂದೇಶದೊಂದಿಗೆ ವಾಟ್ಸ್‌ಅಪ್‌, ಫೇಸ್‌ಬುಕ್‌, ಲಿಂಕ್ಡ್‌ಇನ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ.

ವಂಚಕರ ತಂತ್ರವೇನು?

ಯೂಟ್ಯೂಬ್‌ ವಿಡಿಯೊಗಳನ್ನು ಲೈಕ್ ಮಾಡಿದರೆ ಒಂದು ಲೈಕ್‌ಗೆ ತಲಾ 50 ರೂಪಾಯಿ ನೀಡುತ್ತೇವೆ ಎಂಬ ಕೀಳುಮಟ್ಟದ ಟಾಸ್ಕ್‌‌ ನೀಡುವ ಮೂಲಕ ನಿಮ್ಮನ್ನು ಆಕರ್ಷಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...