Homeಅಂತರಾಷ್ಟ್ರೀಯWhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ಭಾರತೀಯ ಬುದ್ಧಿಜೀವಿಗಳ ವಿರುದ್ಧ ಗೂಢಚರ್ಯೆಗೆ ಇಸ್ರೇಲಿ ಸ್ಪೈವೇರ್ ಉಪಯೋಗ: ದೃಢಪಡಿಸಿದ WhatsApp!

- Advertisement -
- Advertisement -

ನಿರೂಪಣೆ: ನಿಖಿಲ್ ಕೋಲ್ಪೆ

ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್) ಬಳಸಲಾಗಿತ್ತು ಎಂದು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆಪ್ ದೃಢಪಡಿಸಿದೆ. ಮೇ 2019ರ ತನಕ ಅವರ ಮೊಬೈಲ್ ಫೋನ್‌ಗಳು ಕಣ್ಗಾವಲಲ್ಲಿದ್ದವು ಎಂದು ಅದು ಕನಿಷ್ಟ ಎರಡು ಡಜನ್ ಬಳಕೆದಾರರನ್ನು ಎಚ್ಚರಿಸಿತ್ತು.

ಭಾರತೀಯರೂ ಸೇರಿದಂತೆ ಪ್ರಪಂಚದ ವಿವಿಧ ಭಾಗಗಳ 1,400ರಷ್ಟು ಬಳಕೆದಾರರ ಮೇಲೆ ಇಸ್ರೇಲಿನ ಪಿಗಾಸಸ್ (Pegasus) ಎಂಬ ಸ್ಪೈವೇರ್ ಬಳಸಿ ಅದೇ ದೇಶದ ಎನ್ಎಸ್‌ಓ ಗುಂಪು ಗುಪ್ತಚರ್ಯೆ ನಡೆಸಿತ್ತು ಎಂದು ವಾಟ್ಸ್ಆಪ್ ಸಂಸ್ಥೆಯು ಯುಎಸ್ಎಯ ಸಾನ್‌ಫ್ರಾನ್ಸಿಸ್ಕೋ ಫೆಡರಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಆದರೆ, ಭಾರತದಲ್ಲಿ ಗುಪ್ತಚರ್ಯೆಗೆ ಒಳಾಗಿರುವವರ ಗುರುತು ಮತ್ತು ನಿರ್ದಿಷ್ಟ ಸಂಖ್ಯೆಯನ್ನು ಬಹಿರಂಗಪಡಿಸಲು ವಾಟ್ಸ್ಆಪ್ ನಿರಾಕರಿಸಿದೆ. ಆದರೆ, ಈ ವಿಷಯ ತನಗೆ ಗೊತ್ತಿದ್ದು, ಅವರನ್ನು ತಾನು ಈ ವಿಷಯದಲ್ಲಿ ಸಂಪರ್ಕಿಸಿ ಎಚ್ಚರಿಸಿರುವುದಾಗಿ ಅದು ಹೇಳಿದೆ. ವಾಟ್ಸ್ಆಪ್ ವಕ್ತಾರರ ಪ್ರಕಾರ ಇಂತವರ ಸಂಖ್ಯೆ ಕಡೆಗಣಿಸುವಂತದ್ದೇನಲ್ಲ.

ಡಾ. ಆನಂದ್‌ ತೇಲ್‌ತುಂಬ್ಡೆ

ಆದರೂ ಭೀಮಾ ಕೋರೆಗಾಂವ್‌ ಹೋರಾಟದ ಆರೋಪಿ ಖ್ಯಾತ ದಲಿತ ಲೇಖಕ ಡಾ. ಆನಂದ್‌ ತೇಲ್‌ತುಂಬ್ಡೆ, ವಕೀಲ ನಿಹಾಲ್‌ ಸಿಂಹ, ಅಂಕಿತ್‌ ಗ್ರೇವಾಲ್‌, ಡೇಗ್ರಿ ಪ್ರಸಾದ್‌ ಚೌಹಾಣ್, ಬುಡಕಟ್ಟು ಹೋರಾಟಗಾರ್ತಿ ಬೇಲಾ ಭಾಟಿಯಾರವರ ವಾಟ್ಸಾಪ್‌ ಸಂದೇಶಗಳನ್ನು ಗೂಢಚರ್ಯೆ ಪರಿಶೀಲಿಸಿದೆ ಎಂದು ಹೇಳಲಾಗುತ್ತಿದೆ.
 
ಪಿಗಾಸಸ್ ಕಾರ್ಯವಿಧಾನ

ಗುಪ್ತಚರ್ಯೆಗೆ ಗುರಿಯಾಗುವವರ ಮೇಲೆ ಕಣ್ಗಾವಲು ಇಡಲು ಅವರು ಒಂದು ನಿರ್ದಿಷ್ಟ ಮತ್ತು ವಿಶಿಷ್ಟವಾಗಿ ನಿರ್ಮಿಸಲಾದ ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಮಾಡುವಂತೆ ಪಿಗಾಸಸ್ ಅಪರೇಟರ್ ಮನವೊಲಿಸಬೇಕಾಗುತ್ತದೆ ಇಲ್ಲವೇ ವಂಚಿಸಬೇಕಾಗುತ್ತದೆ. ಒಮ್ಮೆ ಈ ಲಿಂಕ್ ಕ್ಲಿಕ್ ಮಾಡಿದರೆ, ಪಿಗಾಸಸ್ ಸ್ಪೈವೇರ್ ಗೊತ್ತಾಗದಂತೆ ಮೊಬೈಲ್ ಒಳಗೆ ಸೇರಿಕೊಳ್ಳುತ್ತದೆ. ಮೊಬೈಲ್‌ನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಮೂಲಕ ಪಿಗಾಸಸ್ ಇನ್ಸ್ಟಾಲ್ ಆಗುತ್ತದೆ. ಇದು ಗ್ರಾಹಕರಿಗೆ ಗೊತ್ತಾಗುವುದು ಬಿಡಿ, ಅದು ಅವರ ಅನುಮತಿಯನ್ನೂ ಕೇಳುವುದಿಲ್ಲ.

ಒಮ್ಮೆ ಇದು ನಡೆದ ಬಳಿಕ ಪಿಗಾಸಸ್ ತನ್ನ ಅಪರೇಟರ್ ಕಮಾಂಡ್ ಮತ್ತು ಕಂಟ್ರೋಲ್ ಸರ್ವರ್‌ಗಳನ್ನು (ನಿಯಂತ್ರಣ ವ್ಯವಸ್ಥೆಗಳು) ಸಂಪರ್ಕಿಸಲು ಆರಂಭಿಸುತ್ತದೆ. ಅದು ನಿಯಂತ್ರಕರ ಆದೇಶ ಪಾಲಿಸುತ್ತಾ, ಗುಪ್ತಚರ್ಯೆಗೆ ಒಳಗಾದವರ ಪಾಸ್‌ವರ್ಡ್, ಕಾಂಟ್ಯಾಕ್ಟ್ ಲಿಸ್ಟ್,  ಖಾಸಗಿ ಮಾಹಿತಿ, ಕ್ಯಾಲೆಂಡರ್ ಟಿಪ್ಪಣಿಗಳು, ಟೈಕ್ಸ್ಟ್ ಮೇಸೇಜ್‌ಗಳು, ಜನಪ್ರಿಯ ಮೆಸೇಜ್ ಸಾಫ್ಟ್ವೇರ್‌ಗಳಿಂದ ಮಾಡುವ ಕರೆಗಳು ಇತ್ಯಾದಿಗಳನ್ನು ಕಳುಹಿಸಿಕೊಡುತ್ತದೆ.

ಅಷ್ಟು ಮಾತ್ರವಲ್ಲದೆ, ಪಿಗಾಸಸ್ ಅಪರೇಟರ್ ಫೋನಿನ ಕ್ಯಾಮೆರಾ ಮತ್ತು ಮೈಕ್ರೋಫೋನನ್ನು ಆನ್ ಮಾಡಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ಗಮನಿಸಿ ರೆಕಾರ್ಡ್ ಮಾಡಬಹುದು. ವಾಟ್ಸ್ಆಪ್ ನ್ಯಾಯಾಲಯಕ್ಕೆ ಸಲ್ಲಿಸಿದ ಇನ್ನಷ್ಟು ಮಾಹಿತಿ ದಂಗುಬಡಿಸುವಂತಿದೆ. ಇತ್ತೀಚಿನ ತಂತ್ರಜ್ಞಾನದಲ್ಲಿ ಫೋನ್ ಮಾಲಕರು ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಕೂಡಾ ಮಾಡಬೇಕಾಗಿಲ್ಲ. ವಾಟ್ಸ್ಆಪ್ ಮೂಲಕ ಕಳಿಸಿದ ಒಂದು ಮಿಸ್ಡ್ ವಿಡಿಯೋ ಕಾಲ್ ಮೂಲಕ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಕೂಡಾ ಈ ಸ್ಪೈವೇರನ್ನು ಫೋನಿನೊಳಗೆ ನುಗ್ಗಿಸಬಹುದು.

ಈ ರೀತಿಯ ವಂಚನೆಯು ಯುಎಸ್‌ಎ ಮತ್ತು ಕ್ಯಾಲಿಫೋರ್ನಿಯಾದ ಕಾನೂನುಗಳು, ವಾಟ್ಸ್ಆಪ್ ಸೇವಾ ಶರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸ್ಆಪ್, ಇಸ್ರೇಲಿನ ಎನ್‌ಎಸ್‌ಓ ಮತ್ತು ಕ್ಯೂ ಸೈಬರ್ ಟೆಕ್ನಾಲಜಿ ಸಂಸ್ಥೆಗಳ ಮೇಲೆ ಹೂಡಿರುವ ದಾವೆಯಲ್ಲಿ ಹೇಳಿದೆ.

ಇದನ್ನು ಅಲ್ಲಗೆಳೆದಿರುವ ಎನ್ಎಸ್ಓ, ಈ ಸ್ಪೈವೇರನ್ನು ಖಾಸಗಿ ವ್ಯಕ್ತಿಗಳ ಮೇಲೆ ಗುಪ್ತಚರ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ ಮತ್ತು ಅದು ಮಾರಾಟದ ವೇಳೆ ಪತ್ರಕರ್ತರು, ಮಾನವಹಕ್ಕು ಕಾರ್ಯಕರ್ತರು ಮುಂತಾದವರ ವಿರುದ್ಧ ಗುಪ್ತಚರ್ಯೆಗೆ ಪರವಾನಿಗೆಯನ್ನೂ ನೀಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದೆ. ಇದು ಹೌದಾದರೆ, ಭಾರತ ಸರಕಾರ ಸಹಿತ ಅದರ ಬಳಕೆದಾರರು ಪರವಾನಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದಾಗುತ್ತದೆ.

ತಾನು ಈ ಕುರಿತು ಭಾರತದ ಗೃಹ ಕಾರ್ಯದರ್ಶಿ ಎ.ಕೆ. ಭಲ್ಲಾ ಮತ್ತು ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಎ.ಪಿ. ಸಾವ್ನಿ ಅವರಿಗೆ ಮಾಡಿದ ಕರೆ, ಸಂದೇಶ, ಇ-ಮೈಲ್ ಯಾವುದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ಹೇಳುತ್ತದೆ.

ಕೆನಡಾ ಮೂಲದ ಸೈಬರ್ ಭದ್ರತಾ ಗುಂಪಾದ ‘ಸಿಟಿಜನ್’ ಲ್ಯಾಬ್’ 2018ರ ಸೆಪ್ಟೆಂಬರ್‌ನಲ್ಲಿಯೇ ತನ್ನ ವರದಿಯ ಮೂಲಕ ಪಿಗಾಸಸ್ ಕುರಿತು ಎಚ್ಚರಿಕೆ ನೀಡಿತ್ತು. ಅರಬ್ ಮಾನವಹಕ್ಕು ಕಾರ್ಯಕರ್ತರ ದೂರಿನ ಬಳಿಕ ಈ ವರದಿ ಬಿಡುಗಡೆಯಾಗಿತ್ತು.

ಇನ್ನೊಂದು ವಿಷಯವೆಂದರೆ, ಎನ್‌ಎಸ್ಓ ಸಂಸ್ಥೆಯು ಸರಕಾರಗಳು ಅಲ್ಲದೆ ಬೇರೆಯವರಿಗೆ ತನ್ನ ಉತ್ಪನ್ನ ಅಥವಾ ಸೇವೆಯನ್ನು ಮಾರುವುದಿಲ್ಲ. ಇತ್ತೀಚೆಗೆ ಸೌದಿ ಅರೇಬಿಯಾದ ಪತ್ರಕರ್ತ ಜಮಾಲ್ ಖಷೋಗ್ಗಿಯವರನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಸೌದಿ ಉಪ ರಾಯಭಾರ ಕಚೇರಿಯಲ್ಲಿ ಕೊಲೆ ಮಾಡಲಾದ ಬಳಿಕ ಈ ಸಂಸ್ಥೆಯು ಸೌದಿಯೊಂದಿಗೆ ತನ್ನ ಒಪ್ಪಂದವನ್ನು ರದ್ದುಪಡಿಸಿತ್ತು. ಖಷೋಗ್ಗಿಯ ಕೊಲೆಗೆ ಮುನ್ನ ಅವರ ಇರವನ್ನು ಪತ್ತೆಹಚ್ಚಲು ತನ್ನ ಸ್ಪೈವೇರನ್ನು ಸೌದಿ ಸರಕಾರ ಬಳಸಿತ್ತು ಎಂಬುದೇ ಇದಕ್ಕೆ ಕಾರಣ. ಸಂಸ್ಥೆಯು ಈ ಕುರಿತು ಇಷ್ಟು ಕಟ್ಟುನಿಟ್ಟಾಗಿರುವುದೇ ಹೌದಾದಲ್ಲಿ, ಮೋದಿ ಸರಕಾರವು ಸೌದಿಯಂತೆಯೇ ತನ್ನದೇ ಪ್ರಜೆಗಳ ಮೇಲೆ ಗುಪ್ತಚರ್ಯೆಗೆ ಈ ಸ್ಪೈವೇರನ್ನು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳನ್ನು ಬಗ್ಗುಬಡಿಯುತ್ತಿದೆಯೇ ಎಂಬ ಸಂಶಯ ಏಳುತ್ತದೆ.

ಮಾಹಿತಿ: ವಿವಿಧ ಮೂಲಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...