Homeಅಂತರಾಷ್ಟ್ರೀಯWhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ಭಾರತೀಯ ಬುದ್ಧಿಜೀವಿಗಳ ವಿರುದ್ಧ ಗೂಢಚರ್ಯೆಗೆ ಇಸ್ರೇಲಿ ಸ್ಪೈವೇರ್ ಉಪಯೋಗ: ದೃಢಪಡಿಸಿದ WhatsApp!

- Advertisement -
- Advertisement -

ನಿರೂಪಣೆ: ನಿಖಿಲ್ ಕೋಲ್ಪೆ

ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್) ಬಳಸಲಾಗಿತ್ತು ಎಂದು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆಪ್ ದೃಢಪಡಿಸಿದೆ. ಮೇ 2019ರ ತನಕ ಅವರ ಮೊಬೈಲ್ ಫೋನ್‌ಗಳು ಕಣ್ಗಾವಲಲ್ಲಿದ್ದವು ಎಂದು ಅದು ಕನಿಷ್ಟ ಎರಡು ಡಜನ್ ಬಳಕೆದಾರರನ್ನು ಎಚ್ಚರಿಸಿತ್ತು.

ಭಾರತೀಯರೂ ಸೇರಿದಂತೆ ಪ್ರಪಂಚದ ವಿವಿಧ ಭಾಗಗಳ 1,400ರಷ್ಟು ಬಳಕೆದಾರರ ಮೇಲೆ ಇಸ್ರೇಲಿನ ಪಿಗಾಸಸ್ (Pegasus) ಎಂಬ ಸ್ಪೈವೇರ್ ಬಳಸಿ ಅದೇ ದೇಶದ ಎನ್ಎಸ್‌ಓ ಗುಂಪು ಗುಪ್ತಚರ್ಯೆ ನಡೆಸಿತ್ತು ಎಂದು ವಾಟ್ಸ್ಆಪ್ ಸಂಸ್ಥೆಯು ಯುಎಸ್ಎಯ ಸಾನ್‌ಫ್ರಾನ್ಸಿಸ್ಕೋ ಫೆಡರಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಆದರೆ, ಭಾರತದಲ್ಲಿ ಗುಪ್ತಚರ್ಯೆಗೆ ಒಳಾಗಿರುವವರ ಗುರುತು ಮತ್ತು ನಿರ್ದಿಷ್ಟ ಸಂಖ್ಯೆಯನ್ನು ಬಹಿರಂಗಪಡಿಸಲು ವಾಟ್ಸ್ಆಪ್ ನಿರಾಕರಿಸಿದೆ. ಆದರೆ, ಈ ವಿಷಯ ತನಗೆ ಗೊತ್ತಿದ್ದು, ಅವರನ್ನು ತಾನು ಈ ವಿಷಯದಲ್ಲಿ ಸಂಪರ್ಕಿಸಿ ಎಚ್ಚರಿಸಿರುವುದಾಗಿ ಅದು ಹೇಳಿದೆ. ವಾಟ್ಸ್ಆಪ್ ವಕ್ತಾರರ ಪ್ರಕಾರ ಇಂತವರ ಸಂಖ್ಯೆ ಕಡೆಗಣಿಸುವಂತದ್ದೇನಲ್ಲ.

ಡಾ. ಆನಂದ್‌ ತೇಲ್‌ತುಂಬ್ಡೆ

ಆದರೂ ಭೀಮಾ ಕೋರೆಗಾಂವ್‌ ಹೋರಾಟದ ಆರೋಪಿ ಖ್ಯಾತ ದಲಿತ ಲೇಖಕ ಡಾ. ಆನಂದ್‌ ತೇಲ್‌ತುಂಬ್ಡೆ, ವಕೀಲ ನಿಹಾಲ್‌ ಸಿಂಹ, ಅಂಕಿತ್‌ ಗ್ರೇವಾಲ್‌, ಡೇಗ್ರಿ ಪ್ರಸಾದ್‌ ಚೌಹಾಣ್, ಬುಡಕಟ್ಟು ಹೋರಾಟಗಾರ್ತಿ ಬೇಲಾ ಭಾಟಿಯಾರವರ ವಾಟ್ಸಾಪ್‌ ಸಂದೇಶಗಳನ್ನು ಗೂಢಚರ್ಯೆ ಪರಿಶೀಲಿಸಿದೆ ಎಂದು ಹೇಳಲಾಗುತ್ತಿದೆ.
 
ಪಿಗಾಸಸ್ ಕಾರ್ಯವಿಧಾನ

ಗುಪ್ತಚರ್ಯೆಗೆ ಗುರಿಯಾಗುವವರ ಮೇಲೆ ಕಣ್ಗಾವಲು ಇಡಲು ಅವರು ಒಂದು ನಿರ್ದಿಷ್ಟ ಮತ್ತು ವಿಶಿಷ್ಟವಾಗಿ ನಿರ್ಮಿಸಲಾದ ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಮಾಡುವಂತೆ ಪಿಗಾಸಸ್ ಅಪರೇಟರ್ ಮನವೊಲಿಸಬೇಕಾಗುತ್ತದೆ ಇಲ್ಲವೇ ವಂಚಿಸಬೇಕಾಗುತ್ತದೆ. ಒಮ್ಮೆ ಈ ಲಿಂಕ್ ಕ್ಲಿಕ್ ಮಾಡಿದರೆ, ಪಿಗಾಸಸ್ ಸ್ಪೈವೇರ್ ಗೊತ್ತಾಗದಂತೆ ಮೊಬೈಲ್ ಒಳಗೆ ಸೇರಿಕೊಳ್ಳುತ್ತದೆ. ಮೊಬೈಲ್‌ನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಮೂಲಕ ಪಿಗಾಸಸ್ ಇನ್ಸ್ಟಾಲ್ ಆಗುತ್ತದೆ. ಇದು ಗ್ರಾಹಕರಿಗೆ ಗೊತ್ತಾಗುವುದು ಬಿಡಿ, ಅದು ಅವರ ಅನುಮತಿಯನ್ನೂ ಕೇಳುವುದಿಲ್ಲ.

ಒಮ್ಮೆ ಇದು ನಡೆದ ಬಳಿಕ ಪಿಗಾಸಸ್ ತನ್ನ ಅಪರೇಟರ್ ಕಮಾಂಡ್ ಮತ್ತು ಕಂಟ್ರೋಲ್ ಸರ್ವರ್‌ಗಳನ್ನು (ನಿಯಂತ್ರಣ ವ್ಯವಸ್ಥೆಗಳು) ಸಂಪರ್ಕಿಸಲು ಆರಂಭಿಸುತ್ತದೆ. ಅದು ನಿಯಂತ್ರಕರ ಆದೇಶ ಪಾಲಿಸುತ್ತಾ, ಗುಪ್ತಚರ್ಯೆಗೆ ಒಳಗಾದವರ ಪಾಸ್‌ವರ್ಡ್, ಕಾಂಟ್ಯಾಕ್ಟ್ ಲಿಸ್ಟ್,  ಖಾಸಗಿ ಮಾಹಿತಿ, ಕ್ಯಾಲೆಂಡರ್ ಟಿಪ್ಪಣಿಗಳು, ಟೈಕ್ಸ್ಟ್ ಮೇಸೇಜ್‌ಗಳು, ಜನಪ್ರಿಯ ಮೆಸೇಜ್ ಸಾಫ್ಟ್ವೇರ್‌ಗಳಿಂದ ಮಾಡುವ ಕರೆಗಳು ಇತ್ಯಾದಿಗಳನ್ನು ಕಳುಹಿಸಿಕೊಡುತ್ತದೆ.

ಅಷ್ಟು ಮಾತ್ರವಲ್ಲದೆ, ಪಿಗಾಸಸ್ ಅಪರೇಟರ್ ಫೋನಿನ ಕ್ಯಾಮೆರಾ ಮತ್ತು ಮೈಕ್ರೋಫೋನನ್ನು ಆನ್ ಮಾಡಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ಗಮನಿಸಿ ರೆಕಾರ್ಡ್ ಮಾಡಬಹುದು. ವಾಟ್ಸ್ಆಪ್ ನ್ಯಾಯಾಲಯಕ್ಕೆ ಸಲ್ಲಿಸಿದ ಇನ್ನಷ್ಟು ಮಾಹಿತಿ ದಂಗುಬಡಿಸುವಂತಿದೆ. ಇತ್ತೀಚಿನ ತಂತ್ರಜ್ಞಾನದಲ್ಲಿ ಫೋನ್ ಮಾಲಕರು ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಕೂಡಾ ಮಾಡಬೇಕಾಗಿಲ್ಲ. ವಾಟ್ಸ್ಆಪ್ ಮೂಲಕ ಕಳಿಸಿದ ಒಂದು ಮಿಸ್ಡ್ ವಿಡಿಯೋ ಕಾಲ್ ಮೂಲಕ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಕೂಡಾ ಈ ಸ್ಪೈವೇರನ್ನು ಫೋನಿನೊಳಗೆ ನುಗ್ಗಿಸಬಹುದು.

ಈ ರೀತಿಯ ವಂಚನೆಯು ಯುಎಸ್‌ಎ ಮತ್ತು ಕ್ಯಾಲಿಫೋರ್ನಿಯಾದ ಕಾನೂನುಗಳು, ವಾಟ್ಸ್ಆಪ್ ಸೇವಾ ಶರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸ್ಆಪ್, ಇಸ್ರೇಲಿನ ಎನ್‌ಎಸ್‌ಓ ಮತ್ತು ಕ್ಯೂ ಸೈಬರ್ ಟೆಕ್ನಾಲಜಿ ಸಂಸ್ಥೆಗಳ ಮೇಲೆ ಹೂಡಿರುವ ದಾವೆಯಲ್ಲಿ ಹೇಳಿದೆ.

ಇದನ್ನು ಅಲ್ಲಗೆಳೆದಿರುವ ಎನ್ಎಸ್ಓ, ಈ ಸ್ಪೈವೇರನ್ನು ಖಾಸಗಿ ವ್ಯಕ್ತಿಗಳ ಮೇಲೆ ಗುಪ್ತಚರ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ ಮತ್ತು ಅದು ಮಾರಾಟದ ವೇಳೆ ಪತ್ರಕರ್ತರು, ಮಾನವಹಕ್ಕು ಕಾರ್ಯಕರ್ತರು ಮುಂತಾದವರ ವಿರುದ್ಧ ಗುಪ್ತಚರ್ಯೆಗೆ ಪರವಾನಿಗೆಯನ್ನೂ ನೀಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದೆ. ಇದು ಹೌದಾದರೆ, ಭಾರತ ಸರಕಾರ ಸಹಿತ ಅದರ ಬಳಕೆದಾರರು ಪರವಾನಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದಾಗುತ್ತದೆ.

ತಾನು ಈ ಕುರಿತು ಭಾರತದ ಗೃಹ ಕಾರ್ಯದರ್ಶಿ ಎ.ಕೆ. ಭಲ್ಲಾ ಮತ್ತು ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಎ.ಪಿ. ಸಾವ್ನಿ ಅವರಿಗೆ ಮಾಡಿದ ಕರೆ, ಸಂದೇಶ, ಇ-ಮೈಲ್ ಯಾವುದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ಹೇಳುತ್ತದೆ.

ಕೆನಡಾ ಮೂಲದ ಸೈಬರ್ ಭದ್ರತಾ ಗುಂಪಾದ ‘ಸಿಟಿಜನ್’ ಲ್ಯಾಬ್’ 2018ರ ಸೆಪ್ಟೆಂಬರ್‌ನಲ್ಲಿಯೇ ತನ್ನ ವರದಿಯ ಮೂಲಕ ಪಿಗಾಸಸ್ ಕುರಿತು ಎಚ್ಚರಿಕೆ ನೀಡಿತ್ತು. ಅರಬ್ ಮಾನವಹಕ್ಕು ಕಾರ್ಯಕರ್ತರ ದೂರಿನ ಬಳಿಕ ಈ ವರದಿ ಬಿಡುಗಡೆಯಾಗಿತ್ತು.

ಇನ್ನೊಂದು ವಿಷಯವೆಂದರೆ, ಎನ್‌ಎಸ್ಓ ಸಂಸ್ಥೆಯು ಸರಕಾರಗಳು ಅಲ್ಲದೆ ಬೇರೆಯವರಿಗೆ ತನ್ನ ಉತ್ಪನ್ನ ಅಥವಾ ಸೇವೆಯನ್ನು ಮಾರುವುದಿಲ್ಲ. ಇತ್ತೀಚೆಗೆ ಸೌದಿ ಅರೇಬಿಯಾದ ಪತ್ರಕರ್ತ ಜಮಾಲ್ ಖಷೋಗ್ಗಿಯವರನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಸೌದಿ ಉಪ ರಾಯಭಾರ ಕಚೇರಿಯಲ್ಲಿ ಕೊಲೆ ಮಾಡಲಾದ ಬಳಿಕ ಈ ಸಂಸ್ಥೆಯು ಸೌದಿಯೊಂದಿಗೆ ತನ್ನ ಒಪ್ಪಂದವನ್ನು ರದ್ದುಪಡಿಸಿತ್ತು. ಖಷೋಗ್ಗಿಯ ಕೊಲೆಗೆ ಮುನ್ನ ಅವರ ಇರವನ್ನು ಪತ್ತೆಹಚ್ಚಲು ತನ್ನ ಸ್ಪೈವೇರನ್ನು ಸೌದಿ ಸರಕಾರ ಬಳಸಿತ್ತು ಎಂಬುದೇ ಇದಕ್ಕೆ ಕಾರಣ. ಸಂಸ್ಥೆಯು ಈ ಕುರಿತು ಇಷ್ಟು ಕಟ್ಟುನಿಟ್ಟಾಗಿರುವುದೇ ಹೌದಾದಲ್ಲಿ, ಮೋದಿ ಸರಕಾರವು ಸೌದಿಯಂತೆಯೇ ತನ್ನದೇ ಪ್ರಜೆಗಳ ಮೇಲೆ ಗುಪ್ತಚರ್ಯೆಗೆ ಈ ಸ್ಪೈವೇರನ್ನು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳನ್ನು ಬಗ್ಗುಬಡಿಯುತ್ತಿದೆಯೇ ಎಂಬ ಸಂಶಯ ಏಳುತ್ತದೆ.

ಮಾಹಿತಿ: ವಿವಿಧ ಮೂಲಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...