Homeಅಂತರಾಷ್ಟ್ರೀಯWhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ಭಾರತೀಯ ಬುದ್ಧಿಜೀವಿಗಳ ವಿರುದ್ಧ ಗೂಢಚರ್ಯೆಗೆ ಇಸ್ರೇಲಿ ಸ್ಪೈವೇರ್ ಉಪಯೋಗ: ದೃಢಪಡಿಸಿದ WhatsApp!

- Advertisement -
- Advertisement -

ನಿರೂಪಣೆ: ನಿಖಿಲ್ ಕೋಲ್ಪೆ

ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್) ಬಳಸಲಾಗಿತ್ತು ಎಂದು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆಪ್ ದೃಢಪಡಿಸಿದೆ. ಮೇ 2019ರ ತನಕ ಅವರ ಮೊಬೈಲ್ ಫೋನ್‌ಗಳು ಕಣ್ಗಾವಲಲ್ಲಿದ್ದವು ಎಂದು ಅದು ಕನಿಷ್ಟ ಎರಡು ಡಜನ್ ಬಳಕೆದಾರರನ್ನು ಎಚ್ಚರಿಸಿತ್ತು.

ಭಾರತೀಯರೂ ಸೇರಿದಂತೆ ಪ್ರಪಂಚದ ವಿವಿಧ ಭಾಗಗಳ 1,400ರಷ್ಟು ಬಳಕೆದಾರರ ಮೇಲೆ ಇಸ್ರೇಲಿನ ಪಿಗಾಸಸ್ (Pegasus) ಎಂಬ ಸ್ಪೈವೇರ್ ಬಳಸಿ ಅದೇ ದೇಶದ ಎನ್ಎಸ್‌ಓ ಗುಂಪು ಗುಪ್ತಚರ್ಯೆ ನಡೆಸಿತ್ತು ಎಂದು ವಾಟ್ಸ್ಆಪ್ ಸಂಸ್ಥೆಯು ಯುಎಸ್ಎಯ ಸಾನ್‌ಫ್ರಾನ್ಸಿಸ್ಕೋ ಫೆಡರಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಆದರೆ, ಭಾರತದಲ್ಲಿ ಗುಪ್ತಚರ್ಯೆಗೆ ಒಳಾಗಿರುವವರ ಗುರುತು ಮತ್ತು ನಿರ್ದಿಷ್ಟ ಸಂಖ್ಯೆಯನ್ನು ಬಹಿರಂಗಪಡಿಸಲು ವಾಟ್ಸ್ಆಪ್ ನಿರಾಕರಿಸಿದೆ. ಆದರೆ, ಈ ವಿಷಯ ತನಗೆ ಗೊತ್ತಿದ್ದು, ಅವರನ್ನು ತಾನು ಈ ವಿಷಯದಲ್ಲಿ ಸಂಪರ್ಕಿಸಿ ಎಚ್ಚರಿಸಿರುವುದಾಗಿ ಅದು ಹೇಳಿದೆ. ವಾಟ್ಸ್ಆಪ್ ವಕ್ತಾರರ ಪ್ರಕಾರ ಇಂತವರ ಸಂಖ್ಯೆ ಕಡೆಗಣಿಸುವಂತದ್ದೇನಲ್ಲ.

ಡಾ. ಆನಂದ್‌ ತೇಲ್‌ತುಂಬ್ಡೆ

ಆದರೂ ಭೀಮಾ ಕೋರೆಗಾಂವ್‌ ಹೋರಾಟದ ಆರೋಪಿ ಖ್ಯಾತ ದಲಿತ ಲೇಖಕ ಡಾ. ಆನಂದ್‌ ತೇಲ್‌ತುಂಬ್ಡೆ, ವಕೀಲ ನಿಹಾಲ್‌ ಸಿಂಹ, ಅಂಕಿತ್‌ ಗ್ರೇವಾಲ್‌, ಡೇಗ್ರಿ ಪ್ರಸಾದ್‌ ಚೌಹಾಣ್, ಬುಡಕಟ್ಟು ಹೋರಾಟಗಾರ್ತಿ ಬೇಲಾ ಭಾಟಿಯಾರವರ ವಾಟ್ಸಾಪ್‌ ಸಂದೇಶಗಳನ್ನು ಗೂಢಚರ್ಯೆ ಪರಿಶೀಲಿಸಿದೆ ಎಂದು ಹೇಳಲಾಗುತ್ತಿದೆ.
 
ಪಿಗಾಸಸ್ ಕಾರ್ಯವಿಧಾನ

ಗುಪ್ತಚರ್ಯೆಗೆ ಗುರಿಯಾಗುವವರ ಮೇಲೆ ಕಣ್ಗಾವಲು ಇಡಲು ಅವರು ಒಂದು ನಿರ್ದಿಷ್ಟ ಮತ್ತು ವಿಶಿಷ್ಟವಾಗಿ ನಿರ್ಮಿಸಲಾದ ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಮಾಡುವಂತೆ ಪಿಗಾಸಸ್ ಅಪರೇಟರ್ ಮನವೊಲಿಸಬೇಕಾಗುತ್ತದೆ ಇಲ್ಲವೇ ವಂಚಿಸಬೇಕಾಗುತ್ತದೆ. ಒಮ್ಮೆ ಈ ಲಿಂಕ್ ಕ್ಲಿಕ್ ಮಾಡಿದರೆ, ಪಿಗಾಸಸ್ ಸ್ಪೈವೇರ್ ಗೊತ್ತಾಗದಂತೆ ಮೊಬೈಲ್ ಒಳಗೆ ಸೇರಿಕೊಳ್ಳುತ್ತದೆ. ಮೊಬೈಲ್‌ನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಮೂಲಕ ಪಿಗಾಸಸ್ ಇನ್ಸ್ಟಾಲ್ ಆಗುತ್ತದೆ. ಇದು ಗ್ರಾಹಕರಿಗೆ ಗೊತ್ತಾಗುವುದು ಬಿಡಿ, ಅದು ಅವರ ಅನುಮತಿಯನ್ನೂ ಕೇಳುವುದಿಲ್ಲ.

ಒಮ್ಮೆ ಇದು ನಡೆದ ಬಳಿಕ ಪಿಗಾಸಸ್ ತನ್ನ ಅಪರೇಟರ್ ಕಮಾಂಡ್ ಮತ್ತು ಕಂಟ್ರೋಲ್ ಸರ್ವರ್‌ಗಳನ್ನು (ನಿಯಂತ್ರಣ ವ್ಯವಸ್ಥೆಗಳು) ಸಂಪರ್ಕಿಸಲು ಆರಂಭಿಸುತ್ತದೆ. ಅದು ನಿಯಂತ್ರಕರ ಆದೇಶ ಪಾಲಿಸುತ್ತಾ, ಗುಪ್ತಚರ್ಯೆಗೆ ಒಳಗಾದವರ ಪಾಸ್‌ವರ್ಡ್, ಕಾಂಟ್ಯಾಕ್ಟ್ ಲಿಸ್ಟ್,  ಖಾಸಗಿ ಮಾಹಿತಿ, ಕ್ಯಾಲೆಂಡರ್ ಟಿಪ್ಪಣಿಗಳು, ಟೈಕ್ಸ್ಟ್ ಮೇಸೇಜ್‌ಗಳು, ಜನಪ್ರಿಯ ಮೆಸೇಜ್ ಸಾಫ್ಟ್ವೇರ್‌ಗಳಿಂದ ಮಾಡುವ ಕರೆಗಳು ಇತ್ಯಾದಿಗಳನ್ನು ಕಳುಹಿಸಿಕೊಡುತ್ತದೆ.

ಅಷ್ಟು ಮಾತ್ರವಲ್ಲದೆ, ಪಿಗಾಸಸ್ ಅಪರೇಟರ್ ಫೋನಿನ ಕ್ಯಾಮೆರಾ ಮತ್ತು ಮೈಕ್ರೋಫೋನನ್ನು ಆನ್ ಮಾಡಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ಗಮನಿಸಿ ರೆಕಾರ್ಡ್ ಮಾಡಬಹುದು. ವಾಟ್ಸ್ಆಪ್ ನ್ಯಾಯಾಲಯಕ್ಕೆ ಸಲ್ಲಿಸಿದ ಇನ್ನಷ್ಟು ಮಾಹಿತಿ ದಂಗುಬಡಿಸುವಂತಿದೆ. ಇತ್ತೀಚಿನ ತಂತ್ರಜ್ಞಾನದಲ್ಲಿ ಫೋನ್ ಮಾಲಕರು ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಕೂಡಾ ಮಾಡಬೇಕಾಗಿಲ್ಲ. ವಾಟ್ಸ್ಆಪ್ ಮೂಲಕ ಕಳಿಸಿದ ಒಂದು ಮಿಸ್ಡ್ ವಿಡಿಯೋ ಕಾಲ್ ಮೂಲಕ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಕೂಡಾ ಈ ಸ್ಪೈವೇರನ್ನು ಫೋನಿನೊಳಗೆ ನುಗ್ಗಿಸಬಹುದು.

ಈ ರೀತಿಯ ವಂಚನೆಯು ಯುಎಸ್‌ಎ ಮತ್ತು ಕ್ಯಾಲಿಫೋರ್ನಿಯಾದ ಕಾನೂನುಗಳು, ವಾಟ್ಸ್ಆಪ್ ಸೇವಾ ಶರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸ್ಆಪ್, ಇಸ್ರೇಲಿನ ಎನ್‌ಎಸ್‌ಓ ಮತ್ತು ಕ್ಯೂ ಸೈಬರ್ ಟೆಕ್ನಾಲಜಿ ಸಂಸ್ಥೆಗಳ ಮೇಲೆ ಹೂಡಿರುವ ದಾವೆಯಲ್ಲಿ ಹೇಳಿದೆ.

ಇದನ್ನು ಅಲ್ಲಗೆಳೆದಿರುವ ಎನ್ಎಸ್ಓ, ಈ ಸ್ಪೈವೇರನ್ನು ಖಾಸಗಿ ವ್ಯಕ್ತಿಗಳ ಮೇಲೆ ಗುಪ್ತಚರ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ ಮತ್ತು ಅದು ಮಾರಾಟದ ವೇಳೆ ಪತ್ರಕರ್ತರು, ಮಾನವಹಕ್ಕು ಕಾರ್ಯಕರ್ತರು ಮುಂತಾದವರ ವಿರುದ್ಧ ಗುಪ್ತಚರ್ಯೆಗೆ ಪರವಾನಿಗೆಯನ್ನೂ ನೀಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದೆ. ಇದು ಹೌದಾದರೆ, ಭಾರತ ಸರಕಾರ ಸಹಿತ ಅದರ ಬಳಕೆದಾರರು ಪರವಾನಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದಾಗುತ್ತದೆ.

ತಾನು ಈ ಕುರಿತು ಭಾರತದ ಗೃಹ ಕಾರ್ಯದರ್ಶಿ ಎ.ಕೆ. ಭಲ್ಲಾ ಮತ್ತು ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಎ.ಪಿ. ಸಾವ್ನಿ ಅವರಿಗೆ ಮಾಡಿದ ಕರೆ, ಸಂದೇಶ, ಇ-ಮೈಲ್ ಯಾವುದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ಹೇಳುತ್ತದೆ.

ಕೆನಡಾ ಮೂಲದ ಸೈಬರ್ ಭದ್ರತಾ ಗುಂಪಾದ ‘ಸಿಟಿಜನ್’ ಲ್ಯಾಬ್’ 2018ರ ಸೆಪ್ಟೆಂಬರ್‌ನಲ್ಲಿಯೇ ತನ್ನ ವರದಿಯ ಮೂಲಕ ಪಿಗಾಸಸ್ ಕುರಿತು ಎಚ್ಚರಿಕೆ ನೀಡಿತ್ತು. ಅರಬ್ ಮಾನವಹಕ್ಕು ಕಾರ್ಯಕರ್ತರ ದೂರಿನ ಬಳಿಕ ಈ ವರದಿ ಬಿಡುಗಡೆಯಾಗಿತ್ತು.

ಇನ್ನೊಂದು ವಿಷಯವೆಂದರೆ, ಎನ್‌ಎಸ್ಓ ಸಂಸ್ಥೆಯು ಸರಕಾರಗಳು ಅಲ್ಲದೆ ಬೇರೆಯವರಿಗೆ ತನ್ನ ಉತ್ಪನ್ನ ಅಥವಾ ಸೇವೆಯನ್ನು ಮಾರುವುದಿಲ್ಲ. ಇತ್ತೀಚೆಗೆ ಸೌದಿ ಅರೇಬಿಯಾದ ಪತ್ರಕರ್ತ ಜಮಾಲ್ ಖಷೋಗ್ಗಿಯವರನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಸೌದಿ ಉಪ ರಾಯಭಾರ ಕಚೇರಿಯಲ್ಲಿ ಕೊಲೆ ಮಾಡಲಾದ ಬಳಿಕ ಈ ಸಂಸ್ಥೆಯು ಸೌದಿಯೊಂದಿಗೆ ತನ್ನ ಒಪ್ಪಂದವನ್ನು ರದ್ದುಪಡಿಸಿತ್ತು. ಖಷೋಗ್ಗಿಯ ಕೊಲೆಗೆ ಮುನ್ನ ಅವರ ಇರವನ್ನು ಪತ್ತೆಹಚ್ಚಲು ತನ್ನ ಸ್ಪೈವೇರನ್ನು ಸೌದಿ ಸರಕಾರ ಬಳಸಿತ್ತು ಎಂಬುದೇ ಇದಕ್ಕೆ ಕಾರಣ. ಸಂಸ್ಥೆಯು ಈ ಕುರಿತು ಇಷ್ಟು ಕಟ್ಟುನಿಟ್ಟಾಗಿರುವುದೇ ಹೌದಾದಲ್ಲಿ, ಮೋದಿ ಸರಕಾರವು ಸೌದಿಯಂತೆಯೇ ತನ್ನದೇ ಪ್ರಜೆಗಳ ಮೇಲೆ ಗುಪ್ತಚರ್ಯೆಗೆ ಈ ಸ್ಪೈವೇರನ್ನು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳನ್ನು ಬಗ್ಗುಬಡಿಯುತ್ತಿದೆಯೇ ಎಂಬ ಸಂಶಯ ಏಳುತ್ತದೆ.

ಮಾಹಿತಿ: ವಿವಿಧ ಮೂಲಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...