Homeಅಂತರಾಷ್ಟ್ರೀಯWhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ಭಾರತೀಯ ಬುದ್ಧಿಜೀವಿಗಳ ವಿರುದ್ಧ ಗೂಢಚರ್ಯೆಗೆ ಇಸ್ರೇಲಿ ಸ್ಪೈವೇರ್ ಉಪಯೋಗ: ದೃಢಪಡಿಸಿದ WhatsApp!

- Advertisement -
- Advertisement -

ನಿರೂಪಣೆ: ನಿಖಿಲ್ ಕೋಲ್ಪೆ

ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್) ಬಳಸಲಾಗಿತ್ತು ಎಂದು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆಪ್ ದೃಢಪಡಿಸಿದೆ. ಮೇ 2019ರ ತನಕ ಅವರ ಮೊಬೈಲ್ ಫೋನ್‌ಗಳು ಕಣ್ಗಾವಲಲ್ಲಿದ್ದವು ಎಂದು ಅದು ಕನಿಷ್ಟ ಎರಡು ಡಜನ್ ಬಳಕೆದಾರರನ್ನು ಎಚ್ಚರಿಸಿತ್ತು.

ಭಾರತೀಯರೂ ಸೇರಿದಂತೆ ಪ್ರಪಂಚದ ವಿವಿಧ ಭಾಗಗಳ 1,400ರಷ್ಟು ಬಳಕೆದಾರರ ಮೇಲೆ ಇಸ್ರೇಲಿನ ಪಿಗಾಸಸ್ (Pegasus) ಎಂಬ ಸ್ಪೈವೇರ್ ಬಳಸಿ ಅದೇ ದೇಶದ ಎನ್ಎಸ್‌ಓ ಗುಂಪು ಗುಪ್ತಚರ್ಯೆ ನಡೆಸಿತ್ತು ಎಂದು ವಾಟ್ಸ್ಆಪ್ ಸಂಸ್ಥೆಯು ಯುಎಸ್ಎಯ ಸಾನ್‌ಫ್ರಾನ್ಸಿಸ್ಕೋ ಫೆಡರಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಆದರೆ, ಭಾರತದಲ್ಲಿ ಗುಪ್ತಚರ್ಯೆಗೆ ಒಳಾಗಿರುವವರ ಗುರುತು ಮತ್ತು ನಿರ್ದಿಷ್ಟ ಸಂಖ್ಯೆಯನ್ನು ಬಹಿರಂಗಪಡಿಸಲು ವಾಟ್ಸ್ಆಪ್ ನಿರಾಕರಿಸಿದೆ. ಆದರೆ, ಈ ವಿಷಯ ತನಗೆ ಗೊತ್ತಿದ್ದು, ಅವರನ್ನು ತಾನು ಈ ವಿಷಯದಲ್ಲಿ ಸಂಪರ್ಕಿಸಿ ಎಚ್ಚರಿಸಿರುವುದಾಗಿ ಅದು ಹೇಳಿದೆ. ವಾಟ್ಸ್ಆಪ್ ವಕ್ತಾರರ ಪ್ರಕಾರ ಇಂತವರ ಸಂಖ್ಯೆ ಕಡೆಗಣಿಸುವಂತದ್ದೇನಲ್ಲ.

ಡಾ. ಆನಂದ್‌ ತೇಲ್‌ತುಂಬ್ಡೆ

ಆದರೂ ಭೀಮಾ ಕೋರೆಗಾಂವ್‌ ಹೋರಾಟದ ಆರೋಪಿ ಖ್ಯಾತ ದಲಿತ ಲೇಖಕ ಡಾ. ಆನಂದ್‌ ತೇಲ್‌ತುಂಬ್ಡೆ, ವಕೀಲ ನಿಹಾಲ್‌ ಸಿಂಹ, ಅಂಕಿತ್‌ ಗ್ರೇವಾಲ್‌, ಡೇಗ್ರಿ ಪ್ರಸಾದ್‌ ಚೌಹಾಣ್, ಬುಡಕಟ್ಟು ಹೋರಾಟಗಾರ್ತಿ ಬೇಲಾ ಭಾಟಿಯಾರವರ ವಾಟ್ಸಾಪ್‌ ಸಂದೇಶಗಳನ್ನು ಗೂಢಚರ್ಯೆ ಪರಿಶೀಲಿಸಿದೆ ಎಂದು ಹೇಳಲಾಗುತ್ತಿದೆ.
 
ಪಿಗಾಸಸ್ ಕಾರ್ಯವಿಧಾನ

ಗುಪ್ತಚರ್ಯೆಗೆ ಗುರಿಯಾಗುವವರ ಮೇಲೆ ಕಣ್ಗಾವಲು ಇಡಲು ಅವರು ಒಂದು ನಿರ್ದಿಷ್ಟ ಮತ್ತು ವಿಶಿಷ್ಟವಾಗಿ ನಿರ್ಮಿಸಲಾದ ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಮಾಡುವಂತೆ ಪಿಗಾಸಸ್ ಅಪರೇಟರ್ ಮನವೊಲಿಸಬೇಕಾಗುತ್ತದೆ ಇಲ್ಲವೇ ವಂಚಿಸಬೇಕಾಗುತ್ತದೆ. ಒಮ್ಮೆ ಈ ಲಿಂಕ್ ಕ್ಲಿಕ್ ಮಾಡಿದರೆ, ಪಿಗಾಸಸ್ ಸ್ಪೈವೇರ್ ಗೊತ್ತಾಗದಂತೆ ಮೊಬೈಲ್ ಒಳಗೆ ಸೇರಿಕೊಳ್ಳುತ್ತದೆ. ಮೊಬೈಲ್‌ನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಮೂಲಕ ಪಿಗಾಸಸ್ ಇನ್ಸ್ಟಾಲ್ ಆಗುತ್ತದೆ. ಇದು ಗ್ರಾಹಕರಿಗೆ ಗೊತ್ತಾಗುವುದು ಬಿಡಿ, ಅದು ಅವರ ಅನುಮತಿಯನ್ನೂ ಕೇಳುವುದಿಲ್ಲ.

ಒಮ್ಮೆ ಇದು ನಡೆದ ಬಳಿಕ ಪಿಗಾಸಸ್ ತನ್ನ ಅಪರೇಟರ್ ಕಮಾಂಡ್ ಮತ್ತು ಕಂಟ್ರೋಲ್ ಸರ್ವರ್‌ಗಳನ್ನು (ನಿಯಂತ್ರಣ ವ್ಯವಸ್ಥೆಗಳು) ಸಂಪರ್ಕಿಸಲು ಆರಂಭಿಸುತ್ತದೆ. ಅದು ನಿಯಂತ್ರಕರ ಆದೇಶ ಪಾಲಿಸುತ್ತಾ, ಗುಪ್ತಚರ್ಯೆಗೆ ಒಳಗಾದವರ ಪಾಸ್‌ವರ್ಡ್, ಕಾಂಟ್ಯಾಕ್ಟ್ ಲಿಸ್ಟ್,  ಖಾಸಗಿ ಮಾಹಿತಿ, ಕ್ಯಾಲೆಂಡರ್ ಟಿಪ್ಪಣಿಗಳು, ಟೈಕ್ಸ್ಟ್ ಮೇಸೇಜ್‌ಗಳು, ಜನಪ್ರಿಯ ಮೆಸೇಜ್ ಸಾಫ್ಟ್ವೇರ್‌ಗಳಿಂದ ಮಾಡುವ ಕರೆಗಳು ಇತ್ಯಾದಿಗಳನ್ನು ಕಳುಹಿಸಿಕೊಡುತ್ತದೆ.

ಅಷ್ಟು ಮಾತ್ರವಲ್ಲದೆ, ಪಿಗಾಸಸ್ ಅಪರೇಟರ್ ಫೋನಿನ ಕ್ಯಾಮೆರಾ ಮತ್ತು ಮೈಕ್ರೋಫೋನನ್ನು ಆನ್ ಮಾಡಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ಗಮನಿಸಿ ರೆಕಾರ್ಡ್ ಮಾಡಬಹುದು. ವಾಟ್ಸ್ಆಪ್ ನ್ಯಾಯಾಲಯಕ್ಕೆ ಸಲ್ಲಿಸಿದ ಇನ್ನಷ್ಟು ಮಾಹಿತಿ ದಂಗುಬಡಿಸುವಂತಿದೆ. ಇತ್ತೀಚಿನ ತಂತ್ರಜ್ಞಾನದಲ್ಲಿ ಫೋನ್ ಮಾಲಕರು ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಕೂಡಾ ಮಾಡಬೇಕಾಗಿಲ್ಲ. ವಾಟ್ಸ್ಆಪ್ ಮೂಲಕ ಕಳಿಸಿದ ಒಂದು ಮಿಸ್ಡ್ ವಿಡಿಯೋ ಕಾಲ್ ಮೂಲಕ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಕೂಡಾ ಈ ಸ್ಪೈವೇರನ್ನು ಫೋನಿನೊಳಗೆ ನುಗ್ಗಿಸಬಹುದು.

ಈ ರೀತಿಯ ವಂಚನೆಯು ಯುಎಸ್‌ಎ ಮತ್ತು ಕ್ಯಾಲಿಫೋರ್ನಿಯಾದ ಕಾನೂನುಗಳು, ವಾಟ್ಸ್ಆಪ್ ಸೇವಾ ಶರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸ್ಆಪ್, ಇಸ್ರೇಲಿನ ಎನ್‌ಎಸ್‌ಓ ಮತ್ತು ಕ್ಯೂ ಸೈಬರ್ ಟೆಕ್ನಾಲಜಿ ಸಂಸ್ಥೆಗಳ ಮೇಲೆ ಹೂಡಿರುವ ದಾವೆಯಲ್ಲಿ ಹೇಳಿದೆ.

ಇದನ್ನು ಅಲ್ಲಗೆಳೆದಿರುವ ಎನ್ಎಸ್ಓ, ಈ ಸ್ಪೈವೇರನ್ನು ಖಾಸಗಿ ವ್ಯಕ್ತಿಗಳ ಮೇಲೆ ಗುಪ್ತಚರ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ ಮತ್ತು ಅದು ಮಾರಾಟದ ವೇಳೆ ಪತ್ರಕರ್ತರು, ಮಾನವಹಕ್ಕು ಕಾರ್ಯಕರ್ತರು ಮುಂತಾದವರ ವಿರುದ್ಧ ಗುಪ್ತಚರ್ಯೆಗೆ ಪರವಾನಿಗೆಯನ್ನೂ ನೀಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದೆ. ಇದು ಹೌದಾದರೆ, ಭಾರತ ಸರಕಾರ ಸಹಿತ ಅದರ ಬಳಕೆದಾರರು ಪರವಾನಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದಾಗುತ್ತದೆ.

ತಾನು ಈ ಕುರಿತು ಭಾರತದ ಗೃಹ ಕಾರ್ಯದರ್ಶಿ ಎ.ಕೆ. ಭಲ್ಲಾ ಮತ್ತು ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಎ.ಪಿ. ಸಾವ್ನಿ ಅವರಿಗೆ ಮಾಡಿದ ಕರೆ, ಸಂದೇಶ, ಇ-ಮೈಲ್ ಯಾವುದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ಹೇಳುತ್ತದೆ.

ಕೆನಡಾ ಮೂಲದ ಸೈಬರ್ ಭದ್ರತಾ ಗುಂಪಾದ ‘ಸಿಟಿಜನ್’ ಲ್ಯಾಬ್’ 2018ರ ಸೆಪ್ಟೆಂಬರ್‌ನಲ್ಲಿಯೇ ತನ್ನ ವರದಿಯ ಮೂಲಕ ಪಿಗಾಸಸ್ ಕುರಿತು ಎಚ್ಚರಿಕೆ ನೀಡಿತ್ತು. ಅರಬ್ ಮಾನವಹಕ್ಕು ಕಾರ್ಯಕರ್ತರ ದೂರಿನ ಬಳಿಕ ಈ ವರದಿ ಬಿಡುಗಡೆಯಾಗಿತ್ತು.

ಇನ್ನೊಂದು ವಿಷಯವೆಂದರೆ, ಎನ್‌ಎಸ್ಓ ಸಂಸ್ಥೆಯು ಸರಕಾರಗಳು ಅಲ್ಲದೆ ಬೇರೆಯವರಿಗೆ ತನ್ನ ಉತ್ಪನ್ನ ಅಥವಾ ಸೇವೆಯನ್ನು ಮಾರುವುದಿಲ್ಲ. ಇತ್ತೀಚೆಗೆ ಸೌದಿ ಅರೇಬಿಯಾದ ಪತ್ರಕರ್ತ ಜಮಾಲ್ ಖಷೋಗ್ಗಿಯವರನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಸೌದಿ ಉಪ ರಾಯಭಾರ ಕಚೇರಿಯಲ್ಲಿ ಕೊಲೆ ಮಾಡಲಾದ ಬಳಿಕ ಈ ಸಂಸ್ಥೆಯು ಸೌದಿಯೊಂದಿಗೆ ತನ್ನ ಒಪ್ಪಂದವನ್ನು ರದ್ದುಪಡಿಸಿತ್ತು. ಖಷೋಗ್ಗಿಯ ಕೊಲೆಗೆ ಮುನ್ನ ಅವರ ಇರವನ್ನು ಪತ್ತೆಹಚ್ಚಲು ತನ್ನ ಸ್ಪೈವೇರನ್ನು ಸೌದಿ ಸರಕಾರ ಬಳಸಿತ್ತು ಎಂಬುದೇ ಇದಕ್ಕೆ ಕಾರಣ. ಸಂಸ್ಥೆಯು ಈ ಕುರಿತು ಇಷ್ಟು ಕಟ್ಟುನಿಟ್ಟಾಗಿರುವುದೇ ಹೌದಾದಲ್ಲಿ, ಮೋದಿ ಸರಕಾರವು ಸೌದಿಯಂತೆಯೇ ತನ್ನದೇ ಪ್ರಜೆಗಳ ಮೇಲೆ ಗುಪ್ತಚರ್ಯೆಗೆ ಈ ಸ್ಪೈವೇರನ್ನು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳನ್ನು ಬಗ್ಗುಬಡಿಯುತ್ತಿದೆಯೇ ಎಂಬ ಸಂಶಯ ಏಳುತ್ತದೆ.

ಮಾಹಿತಿ: ವಿವಿಧ ಮೂಲಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...