Homeಅಂತರಾಷ್ಟ್ರೀಯWhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ಭಾರತೀಯ ಬುದ್ಧಿಜೀವಿಗಳ ವಿರುದ್ಧ ಗೂಢಚರ್ಯೆಗೆ ಇಸ್ರೇಲಿ ಸ್ಪೈವೇರ್ ಉಪಯೋಗ: ದೃಢಪಡಿಸಿದ WhatsApp!

- Advertisement -
- Advertisement -

ನಿರೂಪಣೆ: ನಿಖಿಲ್ ಕೋಲ್ಪೆ

ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್) ಬಳಸಲಾಗಿತ್ತು ಎಂದು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆಪ್ ದೃಢಪಡಿಸಿದೆ. ಮೇ 2019ರ ತನಕ ಅವರ ಮೊಬೈಲ್ ಫೋನ್‌ಗಳು ಕಣ್ಗಾವಲಲ್ಲಿದ್ದವು ಎಂದು ಅದು ಕನಿಷ್ಟ ಎರಡು ಡಜನ್ ಬಳಕೆದಾರರನ್ನು ಎಚ್ಚರಿಸಿತ್ತು.

ಭಾರತೀಯರೂ ಸೇರಿದಂತೆ ಪ್ರಪಂಚದ ವಿವಿಧ ಭಾಗಗಳ 1,400ರಷ್ಟು ಬಳಕೆದಾರರ ಮೇಲೆ ಇಸ್ರೇಲಿನ ಪಿಗಾಸಸ್ (Pegasus) ಎಂಬ ಸ್ಪೈವೇರ್ ಬಳಸಿ ಅದೇ ದೇಶದ ಎನ್ಎಸ್‌ಓ ಗುಂಪು ಗುಪ್ತಚರ್ಯೆ ನಡೆಸಿತ್ತು ಎಂದು ವಾಟ್ಸ್ಆಪ್ ಸಂಸ್ಥೆಯು ಯುಎಸ್ಎಯ ಸಾನ್‌ಫ್ರಾನ್ಸಿಸ್ಕೋ ಫೆಡರಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಆದರೆ, ಭಾರತದಲ್ಲಿ ಗುಪ್ತಚರ್ಯೆಗೆ ಒಳಾಗಿರುವವರ ಗುರುತು ಮತ್ತು ನಿರ್ದಿಷ್ಟ ಸಂಖ್ಯೆಯನ್ನು ಬಹಿರಂಗಪಡಿಸಲು ವಾಟ್ಸ್ಆಪ್ ನಿರಾಕರಿಸಿದೆ. ಆದರೆ, ಈ ವಿಷಯ ತನಗೆ ಗೊತ್ತಿದ್ದು, ಅವರನ್ನು ತಾನು ಈ ವಿಷಯದಲ್ಲಿ ಸಂಪರ್ಕಿಸಿ ಎಚ್ಚರಿಸಿರುವುದಾಗಿ ಅದು ಹೇಳಿದೆ. ವಾಟ್ಸ್ಆಪ್ ವಕ್ತಾರರ ಪ್ರಕಾರ ಇಂತವರ ಸಂಖ್ಯೆ ಕಡೆಗಣಿಸುವಂತದ್ದೇನಲ್ಲ.

ಡಾ. ಆನಂದ್‌ ತೇಲ್‌ತುಂಬ್ಡೆ

ಆದರೂ ಭೀಮಾ ಕೋರೆಗಾಂವ್‌ ಹೋರಾಟದ ಆರೋಪಿ ಖ್ಯಾತ ದಲಿತ ಲೇಖಕ ಡಾ. ಆನಂದ್‌ ತೇಲ್‌ತುಂಬ್ಡೆ, ವಕೀಲ ನಿಹಾಲ್‌ ಸಿಂಹ, ಅಂಕಿತ್‌ ಗ್ರೇವಾಲ್‌, ಡೇಗ್ರಿ ಪ್ರಸಾದ್‌ ಚೌಹಾಣ್, ಬುಡಕಟ್ಟು ಹೋರಾಟಗಾರ್ತಿ ಬೇಲಾ ಭಾಟಿಯಾರವರ ವಾಟ್ಸಾಪ್‌ ಸಂದೇಶಗಳನ್ನು ಗೂಢಚರ್ಯೆ ಪರಿಶೀಲಿಸಿದೆ ಎಂದು ಹೇಳಲಾಗುತ್ತಿದೆ.
 
ಪಿಗಾಸಸ್ ಕಾರ್ಯವಿಧಾನ

ಗುಪ್ತಚರ್ಯೆಗೆ ಗುರಿಯಾಗುವವರ ಮೇಲೆ ಕಣ್ಗಾವಲು ಇಡಲು ಅವರು ಒಂದು ನಿರ್ದಿಷ್ಟ ಮತ್ತು ವಿಶಿಷ್ಟವಾಗಿ ನಿರ್ಮಿಸಲಾದ ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಮಾಡುವಂತೆ ಪಿಗಾಸಸ್ ಅಪರೇಟರ್ ಮನವೊಲಿಸಬೇಕಾಗುತ್ತದೆ ಇಲ್ಲವೇ ವಂಚಿಸಬೇಕಾಗುತ್ತದೆ. ಒಮ್ಮೆ ಈ ಲಿಂಕ್ ಕ್ಲಿಕ್ ಮಾಡಿದರೆ, ಪಿಗಾಸಸ್ ಸ್ಪೈವೇರ್ ಗೊತ್ತಾಗದಂತೆ ಮೊಬೈಲ್ ಒಳಗೆ ಸೇರಿಕೊಳ್ಳುತ್ತದೆ. ಮೊಬೈಲ್‌ನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಮೂಲಕ ಪಿಗಾಸಸ್ ಇನ್ಸ್ಟಾಲ್ ಆಗುತ್ತದೆ. ಇದು ಗ್ರಾಹಕರಿಗೆ ಗೊತ್ತಾಗುವುದು ಬಿಡಿ, ಅದು ಅವರ ಅನುಮತಿಯನ್ನೂ ಕೇಳುವುದಿಲ್ಲ.

ಒಮ್ಮೆ ಇದು ನಡೆದ ಬಳಿಕ ಪಿಗಾಸಸ್ ತನ್ನ ಅಪರೇಟರ್ ಕಮಾಂಡ್ ಮತ್ತು ಕಂಟ್ರೋಲ್ ಸರ್ವರ್‌ಗಳನ್ನು (ನಿಯಂತ್ರಣ ವ್ಯವಸ್ಥೆಗಳು) ಸಂಪರ್ಕಿಸಲು ಆರಂಭಿಸುತ್ತದೆ. ಅದು ನಿಯಂತ್ರಕರ ಆದೇಶ ಪಾಲಿಸುತ್ತಾ, ಗುಪ್ತಚರ್ಯೆಗೆ ಒಳಗಾದವರ ಪಾಸ್‌ವರ್ಡ್, ಕಾಂಟ್ಯಾಕ್ಟ್ ಲಿಸ್ಟ್,  ಖಾಸಗಿ ಮಾಹಿತಿ, ಕ್ಯಾಲೆಂಡರ್ ಟಿಪ್ಪಣಿಗಳು, ಟೈಕ್ಸ್ಟ್ ಮೇಸೇಜ್‌ಗಳು, ಜನಪ್ರಿಯ ಮೆಸೇಜ್ ಸಾಫ್ಟ್ವೇರ್‌ಗಳಿಂದ ಮಾಡುವ ಕರೆಗಳು ಇತ್ಯಾದಿಗಳನ್ನು ಕಳುಹಿಸಿಕೊಡುತ್ತದೆ.

ಅಷ್ಟು ಮಾತ್ರವಲ್ಲದೆ, ಪಿಗಾಸಸ್ ಅಪರೇಟರ್ ಫೋನಿನ ಕ್ಯಾಮೆರಾ ಮತ್ತು ಮೈಕ್ರೋಫೋನನ್ನು ಆನ್ ಮಾಡಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ಗಮನಿಸಿ ರೆಕಾರ್ಡ್ ಮಾಡಬಹುದು. ವಾಟ್ಸ್ಆಪ್ ನ್ಯಾಯಾಲಯಕ್ಕೆ ಸಲ್ಲಿಸಿದ ಇನ್ನಷ್ಟು ಮಾಹಿತಿ ದಂಗುಬಡಿಸುವಂತಿದೆ. ಇತ್ತೀಚಿನ ತಂತ್ರಜ್ಞಾನದಲ್ಲಿ ಫೋನ್ ಮಾಲಕರು ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಕೂಡಾ ಮಾಡಬೇಕಾಗಿಲ್ಲ. ವಾಟ್ಸ್ಆಪ್ ಮೂಲಕ ಕಳಿಸಿದ ಒಂದು ಮಿಸ್ಡ್ ವಿಡಿಯೋ ಕಾಲ್ ಮೂಲಕ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಕೂಡಾ ಈ ಸ್ಪೈವೇರನ್ನು ಫೋನಿನೊಳಗೆ ನುಗ್ಗಿಸಬಹುದು.

ಈ ರೀತಿಯ ವಂಚನೆಯು ಯುಎಸ್‌ಎ ಮತ್ತು ಕ್ಯಾಲಿಫೋರ್ನಿಯಾದ ಕಾನೂನುಗಳು, ವಾಟ್ಸ್ಆಪ್ ಸೇವಾ ಶರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸ್ಆಪ್, ಇಸ್ರೇಲಿನ ಎನ್‌ಎಸ್‌ಓ ಮತ್ತು ಕ್ಯೂ ಸೈಬರ್ ಟೆಕ್ನಾಲಜಿ ಸಂಸ್ಥೆಗಳ ಮೇಲೆ ಹೂಡಿರುವ ದಾವೆಯಲ್ಲಿ ಹೇಳಿದೆ.

ಇದನ್ನು ಅಲ್ಲಗೆಳೆದಿರುವ ಎನ್ಎಸ್ಓ, ಈ ಸ್ಪೈವೇರನ್ನು ಖಾಸಗಿ ವ್ಯಕ್ತಿಗಳ ಮೇಲೆ ಗುಪ್ತಚರ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ ಮತ್ತು ಅದು ಮಾರಾಟದ ವೇಳೆ ಪತ್ರಕರ್ತರು, ಮಾನವಹಕ್ಕು ಕಾರ್ಯಕರ್ತರು ಮುಂತಾದವರ ವಿರುದ್ಧ ಗುಪ್ತಚರ್ಯೆಗೆ ಪರವಾನಿಗೆಯನ್ನೂ ನೀಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದೆ. ಇದು ಹೌದಾದರೆ, ಭಾರತ ಸರಕಾರ ಸಹಿತ ಅದರ ಬಳಕೆದಾರರು ಪರವಾನಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದಾಗುತ್ತದೆ.

ತಾನು ಈ ಕುರಿತು ಭಾರತದ ಗೃಹ ಕಾರ್ಯದರ್ಶಿ ಎ.ಕೆ. ಭಲ್ಲಾ ಮತ್ತು ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಎ.ಪಿ. ಸಾವ್ನಿ ಅವರಿಗೆ ಮಾಡಿದ ಕರೆ, ಸಂದೇಶ, ಇ-ಮೈಲ್ ಯಾವುದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ಹೇಳುತ್ತದೆ.

ಕೆನಡಾ ಮೂಲದ ಸೈಬರ್ ಭದ್ರತಾ ಗುಂಪಾದ ‘ಸಿಟಿಜನ್’ ಲ್ಯಾಬ್’ 2018ರ ಸೆಪ್ಟೆಂಬರ್‌ನಲ್ಲಿಯೇ ತನ್ನ ವರದಿಯ ಮೂಲಕ ಪಿಗಾಸಸ್ ಕುರಿತು ಎಚ್ಚರಿಕೆ ನೀಡಿತ್ತು. ಅರಬ್ ಮಾನವಹಕ್ಕು ಕಾರ್ಯಕರ್ತರ ದೂರಿನ ಬಳಿಕ ಈ ವರದಿ ಬಿಡುಗಡೆಯಾಗಿತ್ತು.

ಇನ್ನೊಂದು ವಿಷಯವೆಂದರೆ, ಎನ್‌ಎಸ್ಓ ಸಂಸ್ಥೆಯು ಸರಕಾರಗಳು ಅಲ್ಲದೆ ಬೇರೆಯವರಿಗೆ ತನ್ನ ಉತ್ಪನ್ನ ಅಥವಾ ಸೇವೆಯನ್ನು ಮಾರುವುದಿಲ್ಲ. ಇತ್ತೀಚೆಗೆ ಸೌದಿ ಅರೇಬಿಯಾದ ಪತ್ರಕರ್ತ ಜಮಾಲ್ ಖಷೋಗ್ಗಿಯವರನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಸೌದಿ ಉಪ ರಾಯಭಾರ ಕಚೇರಿಯಲ್ಲಿ ಕೊಲೆ ಮಾಡಲಾದ ಬಳಿಕ ಈ ಸಂಸ್ಥೆಯು ಸೌದಿಯೊಂದಿಗೆ ತನ್ನ ಒಪ್ಪಂದವನ್ನು ರದ್ದುಪಡಿಸಿತ್ತು. ಖಷೋಗ್ಗಿಯ ಕೊಲೆಗೆ ಮುನ್ನ ಅವರ ಇರವನ್ನು ಪತ್ತೆಹಚ್ಚಲು ತನ್ನ ಸ್ಪೈವೇರನ್ನು ಸೌದಿ ಸರಕಾರ ಬಳಸಿತ್ತು ಎಂಬುದೇ ಇದಕ್ಕೆ ಕಾರಣ. ಸಂಸ್ಥೆಯು ಈ ಕುರಿತು ಇಷ್ಟು ಕಟ್ಟುನಿಟ್ಟಾಗಿರುವುದೇ ಹೌದಾದಲ್ಲಿ, ಮೋದಿ ಸರಕಾರವು ಸೌದಿಯಂತೆಯೇ ತನ್ನದೇ ಪ್ರಜೆಗಳ ಮೇಲೆ ಗುಪ್ತಚರ್ಯೆಗೆ ಈ ಸ್ಪೈವೇರನ್ನು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳನ್ನು ಬಗ್ಗುಬಡಿಯುತ್ತಿದೆಯೇ ಎಂಬ ಸಂಶಯ ಏಳುತ್ತದೆ.

ಮಾಹಿತಿ: ವಿವಿಧ ಮೂಲಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...