Homeಅಂತರಾಷ್ಟ್ರೀಯWhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ಭಾರತೀಯ ಬುದ್ಧಿಜೀವಿಗಳ ವಿರುದ್ಧ ಗೂಢಚರ್ಯೆಗೆ ಇಸ್ರೇಲಿ ಸ್ಪೈವೇರ್ ಉಪಯೋಗ: ದೃಢಪಡಿಸಿದ WhatsApp!

- Advertisement -
- Advertisement -

ನಿರೂಪಣೆ: ನಿಖಿಲ್ ಕೋಲ್ಪೆ

ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್) ಬಳಸಲಾಗಿತ್ತು ಎಂದು ಫೇಸ್‌ಬುಕ್ ಮಾಲಕತ್ವದ ವಾಟ್ಸ್ಆಪ್ ದೃಢಪಡಿಸಿದೆ. ಮೇ 2019ರ ತನಕ ಅವರ ಮೊಬೈಲ್ ಫೋನ್‌ಗಳು ಕಣ್ಗಾವಲಲ್ಲಿದ್ದವು ಎಂದು ಅದು ಕನಿಷ್ಟ ಎರಡು ಡಜನ್ ಬಳಕೆದಾರರನ್ನು ಎಚ್ಚರಿಸಿತ್ತು.

ಭಾರತೀಯರೂ ಸೇರಿದಂತೆ ಪ್ರಪಂಚದ ವಿವಿಧ ಭಾಗಗಳ 1,400ರಷ್ಟು ಬಳಕೆದಾರರ ಮೇಲೆ ಇಸ್ರೇಲಿನ ಪಿಗಾಸಸ್ (Pegasus) ಎಂಬ ಸ್ಪೈವೇರ್ ಬಳಸಿ ಅದೇ ದೇಶದ ಎನ್ಎಸ್‌ಓ ಗುಂಪು ಗುಪ್ತಚರ್ಯೆ ನಡೆಸಿತ್ತು ಎಂದು ವಾಟ್ಸ್ಆಪ್ ಸಂಸ್ಥೆಯು ಯುಎಸ್ಎಯ ಸಾನ್‌ಫ್ರಾನ್ಸಿಸ್ಕೋ ಫೆಡರಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಆದರೆ, ಭಾರತದಲ್ಲಿ ಗುಪ್ತಚರ್ಯೆಗೆ ಒಳಾಗಿರುವವರ ಗುರುತು ಮತ್ತು ನಿರ್ದಿಷ್ಟ ಸಂಖ್ಯೆಯನ್ನು ಬಹಿರಂಗಪಡಿಸಲು ವಾಟ್ಸ್ಆಪ್ ನಿರಾಕರಿಸಿದೆ. ಆದರೆ, ಈ ವಿಷಯ ತನಗೆ ಗೊತ್ತಿದ್ದು, ಅವರನ್ನು ತಾನು ಈ ವಿಷಯದಲ್ಲಿ ಸಂಪರ್ಕಿಸಿ ಎಚ್ಚರಿಸಿರುವುದಾಗಿ ಅದು ಹೇಳಿದೆ. ವಾಟ್ಸ್ಆಪ್ ವಕ್ತಾರರ ಪ್ರಕಾರ ಇಂತವರ ಸಂಖ್ಯೆ ಕಡೆಗಣಿಸುವಂತದ್ದೇನಲ್ಲ.

ಡಾ. ಆನಂದ್‌ ತೇಲ್‌ತುಂಬ್ಡೆ

ಆದರೂ ಭೀಮಾ ಕೋರೆಗಾಂವ್‌ ಹೋರಾಟದ ಆರೋಪಿ ಖ್ಯಾತ ದಲಿತ ಲೇಖಕ ಡಾ. ಆನಂದ್‌ ತೇಲ್‌ತುಂಬ್ಡೆ, ವಕೀಲ ನಿಹಾಲ್‌ ಸಿಂಹ, ಅಂಕಿತ್‌ ಗ್ರೇವಾಲ್‌, ಡೇಗ್ರಿ ಪ್ರಸಾದ್‌ ಚೌಹಾಣ್, ಬುಡಕಟ್ಟು ಹೋರಾಟಗಾರ್ತಿ ಬೇಲಾ ಭಾಟಿಯಾರವರ ವಾಟ್ಸಾಪ್‌ ಸಂದೇಶಗಳನ್ನು ಗೂಢಚರ್ಯೆ ಪರಿಶೀಲಿಸಿದೆ ಎಂದು ಹೇಳಲಾಗುತ್ತಿದೆ.
 
ಪಿಗಾಸಸ್ ಕಾರ್ಯವಿಧಾನ

ಗುಪ್ತಚರ್ಯೆಗೆ ಗುರಿಯಾಗುವವರ ಮೇಲೆ ಕಣ್ಗಾವಲು ಇಡಲು ಅವರು ಒಂದು ನಿರ್ದಿಷ್ಟ ಮತ್ತು ವಿಶಿಷ್ಟವಾಗಿ ನಿರ್ಮಿಸಲಾದ ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಮಾಡುವಂತೆ ಪಿಗಾಸಸ್ ಅಪರೇಟರ್ ಮನವೊಲಿಸಬೇಕಾಗುತ್ತದೆ ಇಲ್ಲವೇ ವಂಚಿಸಬೇಕಾಗುತ್ತದೆ. ಒಮ್ಮೆ ಈ ಲಿಂಕ್ ಕ್ಲಿಕ್ ಮಾಡಿದರೆ, ಪಿಗಾಸಸ್ ಸ್ಪೈವೇರ್ ಗೊತ್ತಾಗದಂತೆ ಮೊಬೈಲ್ ಒಳಗೆ ಸೇರಿಕೊಳ್ಳುತ್ತದೆ. ಮೊಬೈಲ್‌ನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಮೂಲಕ ಪಿಗಾಸಸ್ ಇನ್ಸ್ಟಾಲ್ ಆಗುತ್ತದೆ. ಇದು ಗ್ರಾಹಕರಿಗೆ ಗೊತ್ತಾಗುವುದು ಬಿಡಿ, ಅದು ಅವರ ಅನುಮತಿಯನ್ನೂ ಕೇಳುವುದಿಲ್ಲ.

ಒಮ್ಮೆ ಇದು ನಡೆದ ಬಳಿಕ ಪಿಗಾಸಸ್ ತನ್ನ ಅಪರೇಟರ್ ಕಮಾಂಡ್ ಮತ್ತು ಕಂಟ್ರೋಲ್ ಸರ್ವರ್‌ಗಳನ್ನು (ನಿಯಂತ್ರಣ ವ್ಯವಸ್ಥೆಗಳು) ಸಂಪರ್ಕಿಸಲು ಆರಂಭಿಸುತ್ತದೆ. ಅದು ನಿಯಂತ್ರಕರ ಆದೇಶ ಪಾಲಿಸುತ್ತಾ, ಗುಪ್ತಚರ್ಯೆಗೆ ಒಳಗಾದವರ ಪಾಸ್‌ವರ್ಡ್, ಕಾಂಟ್ಯಾಕ್ಟ್ ಲಿಸ್ಟ್,  ಖಾಸಗಿ ಮಾಹಿತಿ, ಕ್ಯಾಲೆಂಡರ್ ಟಿಪ್ಪಣಿಗಳು, ಟೈಕ್ಸ್ಟ್ ಮೇಸೇಜ್‌ಗಳು, ಜನಪ್ರಿಯ ಮೆಸೇಜ್ ಸಾಫ್ಟ್ವೇರ್‌ಗಳಿಂದ ಮಾಡುವ ಕರೆಗಳು ಇತ್ಯಾದಿಗಳನ್ನು ಕಳುಹಿಸಿಕೊಡುತ್ತದೆ.

ಅಷ್ಟು ಮಾತ್ರವಲ್ಲದೆ, ಪಿಗಾಸಸ್ ಅಪರೇಟರ್ ಫೋನಿನ ಕ್ಯಾಮೆರಾ ಮತ್ತು ಮೈಕ್ರೋಫೋನನ್ನು ಆನ್ ಮಾಡಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ಗಮನಿಸಿ ರೆಕಾರ್ಡ್ ಮಾಡಬಹುದು. ವಾಟ್ಸ್ಆಪ್ ನ್ಯಾಯಾಲಯಕ್ಕೆ ಸಲ್ಲಿಸಿದ ಇನ್ನಷ್ಟು ಮಾಹಿತಿ ದಂಗುಬಡಿಸುವಂತಿದೆ. ಇತ್ತೀಚಿನ ತಂತ್ರಜ್ಞಾನದಲ್ಲಿ ಫೋನ್ ಮಾಲಕರು ‘ಎಕ್ಸ್‌ಪ್ಲಾಯ್ಟ್ ಲಿಂಕ್’ ಮೇಲೆ ಕ್ಲಿಕ್ ಕೂಡಾ ಮಾಡಬೇಕಾಗಿಲ್ಲ. ವಾಟ್ಸ್ಆಪ್ ಮೂಲಕ ಕಳಿಸಿದ ಒಂದು ಮಿಸ್ಡ್ ವಿಡಿಯೋ ಕಾಲ್ ಮೂಲಕ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಕೂಡಾ ಈ ಸ್ಪೈವೇರನ್ನು ಫೋನಿನೊಳಗೆ ನುಗ್ಗಿಸಬಹುದು.

ಈ ರೀತಿಯ ವಂಚನೆಯು ಯುಎಸ್‌ಎ ಮತ್ತು ಕ್ಯಾಲಿಫೋರ್ನಿಯಾದ ಕಾನೂನುಗಳು, ವಾಟ್ಸ್ಆಪ್ ಸೇವಾ ಶರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಾಟ್ಸ್ಆಪ್, ಇಸ್ರೇಲಿನ ಎನ್‌ಎಸ್‌ಓ ಮತ್ತು ಕ್ಯೂ ಸೈಬರ್ ಟೆಕ್ನಾಲಜಿ ಸಂಸ್ಥೆಗಳ ಮೇಲೆ ಹೂಡಿರುವ ದಾವೆಯಲ್ಲಿ ಹೇಳಿದೆ.

ಇದನ್ನು ಅಲ್ಲಗೆಳೆದಿರುವ ಎನ್ಎಸ್ಓ, ಈ ಸ್ಪೈವೇರನ್ನು ಖಾಸಗಿ ವ್ಯಕ್ತಿಗಳ ಮೇಲೆ ಗುಪ್ತಚರ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ ಮತ್ತು ಅದು ಮಾರಾಟದ ವೇಳೆ ಪತ್ರಕರ್ತರು, ಮಾನವಹಕ್ಕು ಕಾರ್ಯಕರ್ತರು ಮುಂತಾದವರ ವಿರುದ್ಧ ಗುಪ್ತಚರ್ಯೆಗೆ ಪರವಾನಿಗೆಯನ್ನೂ ನೀಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದೆ. ಇದು ಹೌದಾದರೆ, ಭಾರತ ಸರಕಾರ ಸಹಿತ ಅದರ ಬಳಕೆದಾರರು ಪರವಾನಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದಾಗುತ್ತದೆ.

ತಾನು ಈ ಕುರಿತು ಭಾರತದ ಗೃಹ ಕಾರ್ಯದರ್ಶಿ ಎ.ಕೆ. ಭಲ್ಲಾ ಮತ್ತು ಇಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಎ.ಪಿ. ಸಾವ್ನಿ ಅವರಿಗೆ ಮಾಡಿದ ಕರೆ, ಸಂದೇಶ, ಇ-ಮೈಲ್ ಯಾವುದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ಹೇಳುತ್ತದೆ.

ಕೆನಡಾ ಮೂಲದ ಸೈಬರ್ ಭದ್ರತಾ ಗುಂಪಾದ ‘ಸಿಟಿಜನ್’ ಲ್ಯಾಬ್’ 2018ರ ಸೆಪ್ಟೆಂಬರ್‌ನಲ್ಲಿಯೇ ತನ್ನ ವರದಿಯ ಮೂಲಕ ಪಿಗಾಸಸ್ ಕುರಿತು ಎಚ್ಚರಿಕೆ ನೀಡಿತ್ತು. ಅರಬ್ ಮಾನವಹಕ್ಕು ಕಾರ್ಯಕರ್ತರ ದೂರಿನ ಬಳಿಕ ಈ ವರದಿ ಬಿಡುಗಡೆಯಾಗಿತ್ತು.

ಇನ್ನೊಂದು ವಿಷಯವೆಂದರೆ, ಎನ್‌ಎಸ್ಓ ಸಂಸ್ಥೆಯು ಸರಕಾರಗಳು ಅಲ್ಲದೆ ಬೇರೆಯವರಿಗೆ ತನ್ನ ಉತ್ಪನ್ನ ಅಥವಾ ಸೇವೆಯನ್ನು ಮಾರುವುದಿಲ್ಲ. ಇತ್ತೀಚೆಗೆ ಸೌದಿ ಅರೇಬಿಯಾದ ಪತ್ರಕರ್ತ ಜಮಾಲ್ ಖಷೋಗ್ಗಿಯವರನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಸೌದಿ ಉಪ ರಾಯಭಾರ ಕಚೇರಿಯಲ್ಲಿ ಕೊಲೆ ಮಾಡಲಾದ ಬಳಿಕ ಈ ಸಂಸ್ಥೆಯು ಸೌದಿಯೊಂದಿಗೆ ತನ್ನ ಒಪ್ಪಂದವನ್ನು ರದ್ದುಪಡಿಸಿತ್ತು. ಖಷೋಗ್ಗಿಯ ಕೊಲೆಗೆ ಮುನ್ನ ಅವರ ಇರವನ್ನು ಪತ್ತೆಹಚ್ಚಲು ತನ್ನ ಸ್ಪೈವೇರನ್ನು ಸೌದಿ ಸರಕಾರ ಬಳಸಿತ್ತು ಎಂಬುದೇ ಇದಕ್ಕೆ ಕಾರಣ. ಸಂಸ್ಥೆಯು ಈ ಕುರಿತು ಇಷ್ಟು ಕಟ್ಟುನಿಟ್ಟಾಗಿರುವುದೇ ಹೌದಾದಲ್ಲಿ, ಮೋದಿ ಸರಕಾರವು ಸೌದಿಯಂತೆಯೇ ತನ್ನದೇ ಪ್ರಜೆಗಳ ಮೇಲೆ ಗುಪ್ತಚರ್ಯೆಗೆ ಈ ಸ್ಪೈವೇರನ್ನು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳನ್ನು ಬಗ್ಗುಬಡಿಯುತ್ತಿದೆಯೇ ಎಂಬ ಸಂಶಯ ಏಳುತ್ತದೆ.

ಮಾಹಿತಿ: ವಿವಿಧ ಮೂಲಗಳಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...