Homeಮುಖಪುಟ‘ಹೊಸ ಗೌಪ್ಯತಾ ನೀತಿ’ - ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

- Advertisement -
- Advertisement -

ಫೇಸ್‌ಬುಕ್‌‌‌‌ ಒಡೆತನದ ವಾಟ್ಸಾಪ್ ಭಾರತದಲ್ಲಿ ತನ್ನ ವಿವಾದಾತ್ಮಕ ಹೊಸ ನಿಯಮಗಳು ಮತ್ತು ಷರತ್ತುಗಳನ್ನು ಸ್ವೀಕರಿಸದ ಬಳಕೆದಾರರ ಖಾತೆಗಳನ್ನು ಕ್ರಮೇಣ ಅಳಿಸಲಿದೆ ಎಂದು ಹೇಳಿದೆ. ಹೊಸ ಗೌಪ್ಯತೆಯ ನೀತಿಯ ಯಾವುದೇ ಮುಂದೂಡಿಕೆ ಇಲ್ಲ ಎಂದು ವಾಟ್ಸಾಪ್ ಪರ ವಕೀಲರಾದ ಅರವಿಂದ ದತಾರ್ ಮತ್ತು ಕಪಿಲ್ ಸಿಬಲ್ ಸೋಮವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಬಳಕೆದಾರರನ್ನು ಮನವೊಲಿಸುವ ಮೂಲಕ ತಮ್ಮ ನೀತಿಯನ್ನು ಒಪ್ಪಲು ವಾಟ್ಸಪ್‌ ಪ್ರಯತ್ನಿಸುತ್ತಿದೆ. ಅಂತಿಮವಾಗಿ ಹೊಸ ನಿಯಮಗಳನ್ನು ಪಾಲಿಸದ ಬಳಕೆದಾರರ ಖಾತೆಗಳನ್ನು ವಾಟ್ಸಪ್‌ ಅಳಿಸಬಹುದು ಎಂದು ಅವರು ಹೇಳಿದ್ದಾರೆ. ನಿಯಮಗಳಿಗೆ ಒಪ್ಪದ ಖಾತೆಗಳನ್ನು ಈಗಿನಿಂದಲೇ ಅಳಿಸಲಾಗದಿದ್ದರೂ, ಮಾರ್ಗಸೂಚಿಗಳನ್ನು ಸ್ವೀಕರಿಸದಿದ್ದರೆ ಅವುಗಳನ್ನು ಅಂತಿಮವಾಗಿ ತೆಗೆದುಹಾಕಲಾಗುತ್ತದೆ ಎಂದು ಕಪಿಲ್‌ ಸಿಬಲ್ ಹೇಳಿದ್ದಾರೆ.

ಈ ಹಿಂದೆ ವಾಟ್ಸಪ್‌ ಭಾರತದಲ್ಲಿ ತನ್ನ ಗೌಪ್ಯತೆ ನೀತಿಯಯನ್ನು ರದ್ದುಗೊಳಿಸಿದೆ ಅಥವಾ ಮುಂದೂಡಿದೆ ಎಂದು ವರದಿಯಾಗಿದ್ದವು, ಆದರೆ ಕಂಪೆನಿಯು ಅದನ್ನು ರದ್ದು ಮಾಡಿಲ್ಲ ಎಂದು ಈಗಿನ ಬೆಳವಣಿಗೆಯಿಂದ ತಿಳಿಯುತ್ತಿದೆ.

ಇದನ್ನೂ ಓದಿ: ಮೂಡಿಗೆರೆ ದಲಿತ ಯುವಕನ ಮೇಲೆ ಪಿಎಸ್‌ಐ ದೌರ್ಜನ್ಯ ಆರೋಪ: ಹಿರಿಯ ಅಧಿಕಾರಿಗಳಿಗೆ ದೂರು

ವಾಟ್ಸಪ್‌ನ ಹೊಸ ನಿಯಮವು ಚಾಟ್ ಮಾಹಿತಿ ಮತ್ತು ಬ್ಯುಸಿನೆಸ್‌ ಖಾತೆಗಳ ಬಳಕೆಗೆ ಇರುವ ಹೊಸ ನಿಯಮವಾಗಿದೆ. ಇದು ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ದೇಶಾದ್ಯಂತ ವ್ಯಾಪಕ ಟೀಕೆಗಳನ್ನು ಹುಟ್ಟುಹಾಕಿದೆ. ಆದಾಗ್ಯೂ, ಮುಂದಿನ ವಾರಗಳಲ್ಲಿ ಗೌಪ್ಯತೆ ನೀತಿ ನವೀಕರಣದ ಕುರಿತು ಜ್ಞಾಪನೆಗಳನ್ನು ಕಂಪೆನಿಯು ಬಳಕೆದಾರರಿಗೆ ಕಳುಹಿಸಲಿದೆ. ಜೊತೆಗೆ ಇದರಿಂದಾಗಿ ವಾಟ್ಸಪ್‌ ಬಳಕೆದಾರರ ಗೌಪ್ಯತೆಯ ಉಲ್ಲಂಘನೆ ಆಗುವುದಿಲ್ಲ ಎಂದು ಕಂಪೆನಿ ಹೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ‘ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ದೇಶದ ಮಾಹಿತಿ ತಂತ್ರಜ್ಞಾನ ಕಾಯ್ದೆ 2020 ಅನ್ನು ಉಲ್ಲಂಘಿಸಿದೆ ಮತ್ತು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರಿಂದ ಉತ್ತರವನ್ನು ಕೋರಲಾಗಿದೆ’ ಎಂದು ದೆಹಲಿ ಹೈಕೋರ್ಟ್‌ಗೆ ಹೇಳಿದರು. ಹೊಸ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರವು ಪ್ರಯತ್ನಿಸಿತಾದರೂ, ವಾಟ್ಸಾಪ್ ಅದನ್ನು ವಿರೋಧಿಸಿದೆ.

ಡೇಟಾ ಅನಾಲಿಟಿಕ್ಸ್ ಸಂಸ್ಥೆ ಸೆನ್ಸರ್ ಟವರ್ ಪ್ರಕಾರ, ಜನವರಿ-ಏಪ್ರಿಲ್ ಅವಧಿಯಲ್ಲಿ ವಾಟ್ಸಪ್‌ ತನ್ನ ಹೊಸ ಗೌಪ್ಯತೆ ನೀತಿಯಲ್ಲಿ ಬದಲಾವಣೆಗಳನ್ನು ಘೋಷಿಸಿದ ನಂತರ ಜಾಗತಿಕವಾಗಿ ವಾಟ್ಸಾಪ್ ಡೌನ್‌ಲೋಡ್ 43% ದಷ್ಟು ಕುಸಿದು ಜಾಗತಿಕವಾಗಿ 172.3 ಮಿಲಿಯನ್‌ಗೆ ತಲುಪಿದೆ. ಪ್ರತಿಸ್ಪರ್ಧಿ ಮೆಸೇಜಿಂಗ್ ಅಪ್ಲಿಕೇಶನ್‌ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಮ್ ಈ ಅವಧಿಯಲ್ಲಿ ಹೊಸ ಬಳಕೆದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದೆ. ಇವುಗಳ ಡೌನ್‌ಲೋಡ್‌ಗಳು ಕ್ರಮವಾಗಿ 64.4 ಮಿಲಿಯನ್ (1,192%) ಮತ್ತು 161 ಮಿಲಿಯನ್ (98%) ಏರಿಕೆಯಾಗಿದೆ.

ಇದನ್ನೂ ಓದಿ: ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...