Homeಮುಖಪುಟ‘ಹೊಸ ಗೌಪ್ಯತಾ ನೀತಿ’ - ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

- Advertisement -
- Advertisement -

ಫೇಸ್‌ಬುಕ್‌‌‌‌ ಒಡೆತನದ ವಾಟ್ಸಾಪ್ ಭಾರತದಲ್ಲಿ ತನ್ನ ವಿವಾದಾತ್ಮಕ ಹೊಸ ನಿಯಮಗಳು ಮತ್ತು ಷರತ್ತುಗಳನ್ನು ಸ್ವೀಕರಿಸದ ಬಳಕೆದಾರರ ಖಾತೆಗಳನ್ನು ಕ್ರಮೇಣ ಅಳಿಸಲಿದೆ ಎಂದು ಹೇಳಿದೆ. ಹೊಸ ಗೌಪ್ಯತೆಯ ನೀತಿಯ ಯಾವುದೇ ಮುಂದೂಡಿಕೆ ಇಲ್ಲ ಎಂದು ವಾಟ್ಸಾಪ್ ಪರ ವಕೀಲರಾದ ಅರವಿಂದ ದತಾರ್ ಮತ್ತು ಕಪಿಲ್ ಸಿಬಲ್ ಸೋಮವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಬಳಕೆದಾರರನ್ನು ಮನವೊಲಿಸುವ ಮೂಲಕ ತಮ್ಮ ನೀತಿಯನ್ನು ಒಪ್ಪಲು ವಾಟ್ಸಪ್‌ ಪ್ರಯತ್ನಿಸುತ್ತಿದೆ. ಅಂತಿಮವಾಗಿ ಹೊಸ ನಿಯಮಗಳನ್ನು ಪಾಲಿಸದ ಬಳಕೆದಾರರ ಖಾತೆಗಳನ್ನು ವಾಟ್ಸಪ್‌ ಅಳಿಸಬಹುದು ಎಂದು ಅವರು ಹೇಳಿದ್ದಾರೆ. ನಿಯಮಗಳಿಗೆ ಒಪ್ಪದ ಖಾತೆಗಳನ್ನು ಈಗಿನಿಂದಲೇ ಅಳಿಸಲಾಗದಿದ್ದರೂ, ಮಾರ್ಗಸೂಚಿಗಳನ್ನು ಸ್ವೀಕರಿಸದಿದ್ದರೆ ಅವುಗಳನ್ನು ಅಂತಿಮವಾಗಿ ತೆಗೆದುಹಾಕಲಾಗುತ್ತದೆ ಎಂದು ಕಪಿಲ್‌ ಸಿಬಲ್ ಹೇಳಿದ್ದಾರೆ.

ಈ ಹಿಂದೆ ವಾಟ್ಸಪ್‌ ಭಾರತದಲ್ಲಿ ತನ್ನ ಗೌಪ್ಯತೆ ನೀತಿಯಯನ್ನು ರದ್ದುಗೊಳಿಸಿದೆ ಅಥವಾ ಮುಂದೂಡಿದೆ ಎಂದು ವರದಿಯಾಗಿದ್ದವು, ಆದರೆ ಕಂಪೆನಿಯು ಅದನ್ನು ರದ್ದು ಮಾಡಿಲ್ಲ ಎಂದು ಈಗಿನ ಬೆಳವಣಿಗೆಯಿಂದ ತಿಳಿಯುತ್ತಿದೆ.

ಇದನ್ನೂ ಓದಿ: ಮೂಡಿಗೆರೆ ದಲಿತ ಯುವಕನ ಮೇಲೆ ಪಿಎಸ್‌ಐ ದೌರ್ಜನ್ಯ ಆರೋಪ: ಹಿರಿಯ ಅಧಿಕಾರಿಗಳಿಗೆ ದೂರು

ವಾಟ್ಸಪ್‌ನ ಹೊಸ ನಿಯಮವು ಚಾಟ್ ಮಾಹಿತಿ ಮತ್ತು ಬ್ಯುಸಿನೆಸ್‌ ಖಾತೆಗಳ ಬಳಕೆಗೆ ಇರುವ ಹೊಸ ನಿಯಮವಾಗಿದೆ. ಇದು ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ದೇಶಾದ್ಯಂತ ವ್ಯಾಪಕ ಟೀಕೆಗಳನ್ನು ಹುಟ್ಟುಹಾಕಿದೆ. ಆದಾಗ್ಯೂ, ಮುಂದಿನ ವಾರಗಳಲ್ಲಿ ಗೌಪ್ಯತೆ ನೀತಿ ನವೀಕರಣದ ಕುರಿತು ಜ್ಞಾಪನೆಗಳನ್ನು ಕಂಪೆನಿಯು ಬಳಕೆದಾರರಿಗೆ ಕಳುಹಿಸಲಿದೆ. ಜೊತೆಗೆ ಇದರಿಂದಾಗಿ ವಾಟ್ಸಪ್‌ ಬಳಕೆದಾರರ ಗೌಪ್ಯತೆಯ ಉಲ್ಲಂಘನೆ ಆಗುವುದಿಲ್ಲ ಎಂದು ಕಂಪೆನಿ ಹೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ‘ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ದೇಶದ ಮಾಹಿತಿ ತಂತ್ರಜ್ಞಾನ ಕಾಯ್ದೆ 2020 ಅನ್ನು ಉಲ್ಲಂಘಿಸಿದೆ ಮತ್ತು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರಿಂದ ಉತ್ತರವನ್ನು ಕೋರಲಾಗಿದೆ’ ಎಂದು ದೆಹಲಿ ಹೈಕೋರ್ಟ್‌ಗೆ ಹೇಳಿದರು. ಹೊಸ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರವು ಪ್ರಯತ್ನಿಸಿತಾದರೂ, ವಾಟ್ಸಾಪ್ ಅದನ್ನು ವಿರೋಧಿಸಿದೆ.

ಡೇಟಾ ಅನಾಲಿಟಿಕ್ಸ್ ಸಂಸ್ಥೆ ಸೆನ್ಸರ್ ಟವರ್ ಪ್ರಕಾರ, ಜನವರಿ-ಏಪ್ರಿಲ್ ಅವಧಿಯಲ್ಲಿ ವಾಟ್ಸಪ್‌ ತನ್ನ ಹೊಸ ಗೌಪ್ಯತೆ ನೀತಿಯಲ್ಲಿ ಬದಲಾವಣೆಗಳನ್ನು ಘೋಷಿಸಿದ ನಂತರ ಜಾಗತಿಕವಾಗಿ ವಾಟ್ಸಾಪ್ ಡೌನ್‌ಲೋಡ್ 43% ದಷ್ಟು ಕುಸಿದು ಜಾಗತಿಕವಾಗಿ 172.3 ಮಿಲಿಯನ್‌ಗೆ ತಲುಪಿದೆ. ಪ್ರತಿಸ್ಪರ್ಧಿ ಮೆಸೇಜಿಂಗ್ ಅಪ್ಲಿಕೇಶನ್‌ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಮ್ ಈ ಅವಧಿಯಲ್ಲಿ ಹೊಸ ಬಳಕೆದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದೆ. ಇವುಗಳ ಡೌನ್‌ಲೋಡ್‌ಗಳು ಕ್ರಮವಾಗಿ 64.4 ಮಿಲಿಯನ್ (1,192%) ಮತ್ತು 161 ಮಿಲಿಯನ್ (98%) ಏರಿಕೆಯಾಗಿದೆ.

ಇದನ್ನೂ ಓದಿ: ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...