Homeಮುಖಪುಟಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ- ವಾಟ್ಸಾಪ್

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿತ್ತು.

ಇದನ್ನೂ ಓದಿ: ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ವಾಟ್ಸ್ಆ್ಯಪ್ ಹೊಸ ನೀತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಹೇಳಿಕೆ ಬಿಡುಗಡೆ ಮಾಡಿದ್ದ ವಾಟ್ಸಾಪ್, “ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ಟ್ವೀಟ್ ಮಾಡಿತ್ತು.

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಶುಕ್ರವಾರ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

“ಪ್ರತಿಯೊಬ್ಬರೂ ಇಂದು ವಾಟ್ಸಾಪ್‌ನಲ್ಲಿ ವ್ಯವಹಾರವನ್ನು ಹೊಂದಿಲ್ಲ. ಆದರೆ, ಭವಿಷ್ಯದಲ್ಲಿ ಹೆಚ್ಚಿನ ಜನರು ವಾಟ್ಸಾಪ್‌ ಮೂಲಕ ವ್ಯವಹರಿಸಲು ಮುಂದಾಗಲಿದ್ದಾರೆ ಎಂಬುದಾಗಿ ನಾವು ಭಾವಿಸುತ್ತೇವೆ” ಎಂದು ವಾಟ್ಸಾಪ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...

ಮತಾಂತರ ವಿರೋಧಿ ಮಸೂದೆಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರಗಳನ್ನು ಗುರಿಯಾಗಿಸಿಕೊಂಡು ರಚಿಸಲಾದ 'ಧರ್ಮ ಸ್ವಾತಂತ್ರ್ಯ ಆಡಳಿತ, 2026' ಕರಡನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ. ಇದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5...

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...