Homeಮುಖಪುಟಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ- ವಾಟ್ಸಾಪ್

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿತ್ತು.

ಇದನ್ನೂ ಓದಿ: ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ವಾಟ್ಸ್ಆ್ಯಪ್ ಹೊಸ ನೀತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಹೇಳಿಕೆ ಬಿಡುಗಡೆ ಮಾಡಿದ್ದ ವಾಟ್ಸಾಪ್, “ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ಟ್ವೀಟ್ ಮಾಡಿತ್ತು.

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಶುಕ್ರವಾರ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

“ಪ್ರತಿಯೊಬ್ಬರೂ ಇಂದು ವಾಟ್ಸಾಪ್‌ನಲ್ಲಿ ವ್ಯವಹಾರವನ್ನು ಹೊಂದಿಲ್ಲ. ಆದರೆ, ಭವಿಷ್ಯದಲ್ಲಿ ಹೆಚ್ಚಿನ ಜನರು ವಾಟ್ಸಾಪ್‌ ಮೂಲಕ ವ್ಯವಹರಿಸಲು ಮುಂದಾಗಲಿದ್ದಾರೆ ಎಂಬುದಾಗಿ ನಾವು ಭಾವಿಸುತ್ತೇವೆ” ಎಂದು ವಾಟ್ಸಾಪ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...