Homeಮುಖಪುಟಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ- ವಾಟ್ಸಾಪ್

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿತ್ತು.

ಇದನ್ನೂ ಓದಿ: ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ವಾಟ್ಸ್ಆ್ಯಪ್ ಹೊಸ ನೀತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಹೇಳಿಕೆ ಬಿಡುಗಡೆ ಮಾಡಿದ್ದ ವಾಟ್ಸಾಪ್, “ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ಟ್ವೀಟ್ ಮಾಡಿತ್ತು.

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಶುಕ್ರವಾರ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

“ಪ್ರತಿಯೊಬ್ಬರೂ ಇಂದು ವಾಟ್ಸಾಪ್‌ನಲ್ಲಿ ವ್ಯವಹಾರವನ್ನು ಹೊಂದಿಲ್ಲ. ಆದರೆ, ಭವಿಷ್ಯದಲ್ಲಿ ಹೆಚ್ಚಿನ ಜನರು ವಾಟ್ಸಾಪ್‌ ಮೂಲಕ ವ್ಯವಹರಿಸಲು ಮುಂದಾಗಲಿದ್ದಾರೆ ಎಂಬುದಾಗಿ ನಾವು ಭಾವಿಸುತ್ತೇವೆ” ಎಂದು ವಾಟ್ಸಾಪ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...