Homeಮುಖಪುಟಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ- ವಾಟ್ಸಾಪ್

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿತ್ತು.

ಇದನ್ನೂ ಓದಿ: ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ವಾಟ್ಸ್ಆ್ಯಪ್ ಹೊಸ ನೀತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಹೇಳಿಕೆ ಬಿಡುಗಡೆ ಮಾಡಿದ್ದ ವಾಟ್ಸಾಪ್, “ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ಟ್ವೀಟ್ ಮಾಡಿತ್ತು.

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಶುಕ್ರವಾರ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

“ಪ್ರತಿಯೊಬ್ಬರೂ ಇಂದು ವಾಟ್ಸಾಪ್‌ನಲ್ಲಿ ವ್ಯವಹಾರವನ್ನು ಹೊಂದಿಲ್ಲ. ಆದರೆ, ಭವಿಷ್ಯದಲ್ಲಿ ಹೆಚ್ಚಿನ ಜನರು ವಾಟ್ಸಾಪ್‌ ಮೂಲಕ ವ್ಯವಹರಿಸಲು ಮುಂದಾಗಲಿದ್ದಾರೆ ಎಂಬುದಾಗಿ ನಾವು ಭಾವಿಸುತ್ತೇವೆ” ಎಂದು ವಾಟ್ಸಾಪ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...