Homeಕರ್ನಾಟಕಪ್ರಬಂಧ; ಎದೆಬಿರಿತು ಹಾಡುವ ನೆಲ: ಪ್ರೊ. ರಹಮತ್ ತರೀಕೆರೆ

ಪ್ರಬಂಧ; ಎದೆಬಿರಿತು ಹಾಡುವ ನೆಲ: ಪ್ರೊ. ರಹಮತ್ ತರೀಕೆರೆ

- Advertisement -
- Advertisement -

ಕಾವ್ಯದ ಪ್ರೇರಣೆಯನ್ನು ಕವಿಗಳ ಪ್ರತಿಭೆಯಲ್ಲಿ, ಅವರಿಗೆ ಇಂಬಾಗಿ ನಿಂತ ಪರಂಪರೆಯ ಕಸುವಿನಲ್ಲಿ, ಕವಿಯ ವಿಶಿಷ್ಟಾನುಭವದಲ್ಲಿ, ಅವರ ಕೈವಶವಾಗಿರುವ ಕಸುಬುದಾರಿಕೆಯಲ್ಲಿ ಹುಡುಕುವ ಪದ್ಧತಿಯಿದೆ. ಆದರೆ ಕವಿತೆ ಹುಟ್ಟುವ ಈ ಪ್ರೇರಣ ಮೂಲಗಳಲ್ಲಿ ಚಾರಿತ್ರಿಕ ಒತ್ತಡವೂ ಒಂದು. ಸಾಮಾನ್ಯವಾಗಿ ಉಸಿರುಗಟ್ಟುವ ಚಾರಿತ್ರಿಕ ಒತ್ತಡದಲ್ಲಿ ಹುಟ್ಟುವ ಎಲ್ಲ ಬರೆಹಗಳು, ತಮ್ಮ ಸಂವೇದನೆಯ ಪ್ರಾಮಾಣಿಕತೆಯಿಂದ ಸಹಜತೆಯಿಂದ ನಮ್ಮ ಎದೆಗೆ ತಾಕಿ ಸಂವಾದ ಮಾಡುವ ಗುಣವನ್ನು ಪಡೆಯುತ್ತವೆ. ಸಾಧಾರಣ ಕವಿಯು ಮೃತ್ಯುವಿನ ಅಂಚಿನಲ್ಲಿ ಕುರಿತು ಭಾವದಿಂದ ಧಗಧಗಿಸುವ ಕವಿತೆ ಬರೆದಿರುವ ನಿದರ್ಶನಗಳಿವೆ. ಕಾಫ್ಕಾನ ‘ರೂಪಾಂತರ’ ಕಾಮುನ ‘ಪ್ಲೇಗ್’ ಸಿದ್ಧಲಿಂಗಯ್ಯನವರ ‘ಹೊಲೆಮಾದಿಗರ ಹಾಡು’ ಟಿಪ್ಪುವನ್ನು ಕುರಿತ ಲಾವಣಿಗಳು ಹುಟ್ಟಿದ್ದು ಹೀಗೆ ಚಾರಿತ್ರಿಕ ಒತ್ತಡದಲ್ಲಿ. ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಬೇಂದ್ರೆಯವರ ‘ನರಬಲಿ’ ಕವಿತೆ ಹುಟ್ಟಿದ್ದು ಹೀಗೇ.

‘ಬಡವರು ಸತ್ತರೆ ಸುಡಲಿಕ್ಕೆ ಸೌದಿಲ್ಲೊ’ ಎಂಬ ಚೀತ್ಕಾರ ಕೇಳಿಸುವಂತಿರುವ ಜನಪದ ತ್ರಿಪದಿಯೂ ಸನ್ನಿವೇಶದ ಕೂಸು. ಪ್ಯಾಲಸ್ತೀನೀ ಕವಿತೆಗಳಲ್ಲಿ ತಮ್ಮ ನೆಲವನ್ನು ಉಳಿಸಿಕೊಳ್ಳುವುದು ಜೀವನ್ಮರಣದ ಪ್ರಶ್ನೆಯನ್ನಾಗಿ ಮಾಡಿಕೊಂಡು ನಡೆಸುತ್ತಿರುವ ಸೆಣಸಾಟವಿರುತ್ತದೆ. ಇದಕ್ಕಾಗಿ ತುಂಬಿದ ಅಣೆಕಟ್ಟಿಯಿಂದ ರಭಸವಾಗಿ ಧುಮ್ಮಿಕ್ಕುವ ಜಲದಂತೆ ಅಲ್ಲಿ ಭಾವದ ಆವೇಗವಿರುತ್ತದೆ. ಕುಮಾರವ್ಯಾಸನಲ್ಲಿ ಬರುವ ‘ಅರಸುರಾಕ್ಷಸ ಮಂತ್ರಿ ಮೊರೆವ ಹುಲಿ ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು’ ಎಂಬ ಸಾಲುಗಳು, ರಾಜಧರ್ಮದ ನಿರ್ಲಿಪ್ತ ಬೋಧೆಯ ಭಾಗವಾಗಿ ಅಳವಡಿಕೆಯಾಗಿವೆ. ಆದರೆ ಕವಿ ಅವನ್ನು ರಚಿಸುವಾಗ ತಾನು ಪಟ್ಟಿರುವ ಯಾವುದೊ ಆಳವಾದ ಸಂವೇದನೆಯನ್ನು ತುಂಬಿರಬಹುದು ಎಂಬಂತೆ ಅಲ್ಲಿ ವಿಷಾದವು ಮಡುಗಟ್ಟಿದೆ. ಎಂತಲೇ ಈ ಸಾಲುಗಳು ಬಿಕ್ಕಟ್ಟಿನಲ್ಲಿ ನಾಡು ಹಾಯುವಾಗೆಲ್ಲ ಬಳಕೆಗೊಳ್ಳುತ್ತ, ನಮಗಾಗೇ ಈಗ ರಚಿತವಾದವು ಎಂಬಂತೆ ಆವರ್ತನೆಗೊಳ್ಳುತ್ತಿವೆ. ತುರ್ತುಪರಿಸ್ಥಿತಿ ವಿರುದ್ಧ ಬಂದ ಕವಿತೆಗಳ ಸಂಕಲನದ (‘ಆಪತ್ಕಾಲೀನ ಕವಿತೆಗಳು’ ಸಂ. ಕಿ.ರಂ.ನಾಗರಾಜ), ಈ ಸಾಲುಗಳನ್ನು ಮೊದಲಿಗೇ ಉದ್ಧರಿಸಲಾಗಿದೆ.

ಇದೇ ಹೊತ್ತಲ್ಲಿ ಚಂಪಾ ಅವರು ಎಮರ್ಜನ್ಸಿಯ ಕಾಲದಲ್ಲಿ ಬರೆದ ಪದ್ಯವೊಂದು ನೆನಪಾಗುತ್ತಿದೆ. ಅದರ ಹೆಸರು ‘ಒಂದಾನೊಂದು ಕಾಲಕ್ಕೆ’. ಇದು ಕನ್ನಡದ ಶ್ರೇಷ್ಠ ಕವಿತೆಗಳ ಪಟ್ಟಿಯಲ್ಲಿ ಸಾಮಾನ್ಯವಾಗಿ ಗಣಿತವಾಗಿಲ್ಲ. ಆದರೆ ಸರಳವಾದ ಸಾದಾಸೀದಾ ಪದ್ಯವಾಗಿರುವ ಇದರೊಳಗೆ ತುಂಬಿಕೊಂಡಿರುವ ದುಗುಡ ಮತ್ತು ಉತ್ಕಟತೆಗಳು, ಸ್ವಾತಂತ್ರ್ಯದ ಬೇಡಿಕೆಯ ಭಾವವನ್ನು ನಮ್ಮ ಹೃದಯದೊಳಗೆ ಹುಗಿಸಿ ಕಂಪನ ಹುಟ್ಟಿಸುವಷ್ಟು ತೀವ್ರವಾಗಿವೆ. ‘ಓ ಎನ್ನ ದೇಶಬಾಂಧವರೇ’ (1977) ಸಂಕಲನದಲ್ಲಿರುವ ಆ ಕವಿತೆ ಹೀಗಿದೆ:

ಒಂದಾನೊಂದು ಕಾಲಕ್ಕೆ, ಗೆಳೆಯರೆ
ಈ ಬಾನಿಗೆ ಅಂಚೆಂಬುದು ಇರಲಿಲ್ಲ.
ಈ ನೆಲಕ್ಕೆ ಗಡಿಯೆಂಬುದು ಇರಲಿಲ್ಲ.
ನೀವು ಕೂಗಿದ್ದೇ ಆಗ ಕಾವ್ಯವಾಗಿತ್ತು.
ಕೇಳುವವರಿರಲಿಲ್ಲ
ನೀವು ಹಿಡಿದದ್ದೇ ಆಗ ಹಾದಿಯಾಗಿತ್ತು
ತುಳಿಯುವವರಿರಲಿಲ್ಲ
ನಿಮ್ಮ ಬಾಯಿಗೆ ಈಗ ಬಟ್ಟೆ ತುರುಕಿದ್ದಾರೆ.
ನಿಮ್ಮ ಕಾಲಿಗೆ ಈಗ ಬೇಡಿ ಬಿಗಿದಿದ್ದಾರೆ
ನೀವೀಗ ಸ್ವಲ್ಪ ಝಾಡಿಸಿದರೆ ಕಾಲು,
ಬೇಡಿ ಹರಿಯಲಿಕ್ಕಿಲ್ಲ; ಆದರೆ
ಬಾನಲ್ಲಿ ಹಾಲುಹಾದಿ ಮೂಡುತ್ತದೆ.
ಮೌನ ಮುರಿಯಲು ಸ್ವಲ್ಪ ಹೆಣಗಿದರೆ ನೀವು
ಶಬ್ದ ಹೊರಡಲಿಕ್ಕಿಲ್ಲ; ಆದರೆ
ನೆಲವೇ ಎದೆ ಬಿರಿತು ಹಾಡುತ್ತದೆ.

ಕವನವು ‘ಒಂದಾನೊಂದು ಕಾಲಕ್ಕೆ’ ಎಂಬ ಪದದ ಮೂಲಕ ಚರಿತ್ರೆಯಲ್ಲಿದ್ದ ಸ್ವತಂತ್ರ ಅವಸ್ಥೆಯನ್ನು ಸೂಚಿಸುವ ಮೂಲಕ ಆರಂಭವಾಗುತ್ತದೆ. ಆಗ ಇದ್ದ ಸ್ವಾತಂತ್ರ್ಯವನ್ನು ಗಡಿಯಿಲ್ಲದ ನೆಲ, ಅಂಚಿಲ್ಲದ ಬಾನು, ಕೂಗಿದರೂ ಕಾವ್ಯವಾಗುವ ಮತ್ತು ಹಿಡಿದಿದ್ದೇ ಹಾದಿಯಾಗುವ ಮುಕ್ತತೆಯ ಚಿತ್ರಗಳ ಮೂಲಕ ಮುಂದಿಡಲಾಗುತ್ತದೆ. ಚರಿತ್ರೆ ಬಲ್ಲವರಿಗೆ ತಿಳಿದಿದೆ, ಎಲ್ಲ ಕಾಲಕ್ಕೂ ಸ್ವಾತಂತ್ರ್ಯ ಕಸಿದುಕೊಳ್ಳುವ ಶಕ್ತಿಗಳು ಇದ್ದವು. ಅವುಗಳ ವಿರುದ್ಧ ದನಿಯೆತ್ತಿ ಸತ್ತವರೂ ಗೆದ್ದವರೂ ಕೂಡ ಇದ್ದರು. ಸ್ವಾತಂತ್ರ್ಯ ಹರಣ ಮತ್ತು ಪಡೆಯುವುದಕ್ಕೆ ಮಾಡುವ ಸಂಘರ್ಷ, ಅದಕ್ಕಾಗಿ ಪಡೆಯುವ ಮರಣ, ಗೆಲುವುಗಳು ನಿರಂತರವಾಗಿರುತ್ತವೆ. ಆದರೆ ಗತದಲ್ಲಿ ಸ್ವಾತಂತ್ರ್ಯವಿತ್ತು ಎಂದು ಕವಿತೆ ಪ್ರಕೃತಿಯ ಚಿತ್ರಗಳ ಮೂಲಕ ತುಸು ಉತ್ಪ್ರೇಕ್ಷೆಯಲ್ಲಿ ಹೇಳುತ್ತಿರುವುದು ವರ್ತಮಾನದಲ್ಲಿ ಅದಿಲ್ಲ ಎಂದು ವಾಸ್ತವವನ್ನು ಸೂಚಿಸಲು; ಚರಿತ್ರೆಯ ನೆನಪು ವರ್ತಮಾನದಲ್ಲಿ ಕ್ರಿಯಾಶೀಲತೆ ಹುಟ್ಟಿಸಲಿ ಎಂದು ಪ್ರೇರಿಸಲು. ಇಲ್ಲಿ ಕವಿಯು ಜನತೆಯ ನಾಯಕನಾಗಿದ್ದಾನೆ. ಜನರ ಸ್ವಾತಂತ್ರ್ಯ ಮತ್ತು ಅವನ ಸ್ವಾತಂತ್ರ್ಯಗಳೆರಡೂ ಇಲ್ಲಿ ಏಕೀಭವಿಸಿವೆ.

ಎರಡನೇ ಖಂಡವು ವರ್ತಮಾನದಲ್ಲಿ ಈ ಸ್ವಾತಂತ್ರ್ಯಗಳು ಕಸಿಯಲ್ಪಟ್ಟ ದಾರುಣ ಸನ್ನಿವೇಶದ ಚಿತ್ರವನ್ನು ಮುಂದಿಡುತ್ತದೆ. ಆದರೆ ಈ ಬಂಧನದ ದಾರುಣತೆ ಖಾಯಮ್ಮಲ್ಲ. ಅದನ್ನು ನಿವಾರಿಸಬಹುದು. ಇದಕ್ಕಾಗಿ ದಂಗೆ ಚಳವಳಿ ಹೋರಾಟ ಮುಂತಾದ ಮಹತ್ವಾಕಾಂಕ್ಷಿ ಪ್ರಯತ್ನಗಳನ್ನು ಕವಿತೆ ಮುಂದಿಡುತ್ತಿಲ್ಲ. ಬದಲಾಗಿ ‘ಸ್ವಲ್ಪ ಕಾಲು ಝಾಡಿಸಲು’ ‘ಮೌನ ಮುರಿಯಲು’ ‘ಸ್ವಲ್ಪ ಹೆಣಗಲು’ ಸೂಚಿಸುತ್ತದೆ. ವ್ಯಕ್ತಿಗಳು ತಮ್ಮ ಪರಿಮಿತಿಯಲ್ಲೇ ಮಾಡುವ ಇಂತಹ ಸಣ್ಣಪುಟ್ಟ ಮಿಸುಕಾಟದಿಂದ ಇಡೀ ವ್ಯವಸ್ಥೆಯನ್ನು ಪಲ್ಲಟಿಸುವ ಮಹಾಕ್ರಾಂತಿ ಸಂಭವಿಸಿದೆ ಹೋಗಬಹುದು. ಆದರೆ ಅಂತಹ ಅದಕ್ಕೆ ಬೇಕಾದ ನಡಿಗೆ ಶುರುವಾಗುತ್ತದೆ. ನಾಡಿನ ಸಮುದಾಯವು ಪ್ರಜ್ಞೆ ಮತ್ತು ಪ್ರತಿರೋಧ ಗುಣವನ್ನು ಪಡೆದುಕೊಂಡು ಕೆಟ್ಟ ವ್ಯವಸ್ಥೆಯ ವಿರುದ್ಧ ಸಂಘಟಿತ ದನಿಯೆತ್ತಿದಾಗ ಮಾತ್ರ ಸಂಪೂರ್ಣ ಸ್ವಾತಂತ್ರ್ಯವು ಸಾಧ್ಯ. ಅದು ತಕ್ಷಣ ಸಾಧ್ಯವಾಗುವ ಸನ್ನಿವೇಶವಿಲ್ಲ. ಅದು ನಿಷ್ಕ್ರಿಯತೆಗೆ ಕಾರಣವಾಗಬೇಕಿಲ್ಲ. ಬದಲಾವಣೆ ಎಂಬ ದೀರ್ಘಯಾನವು ಸಣ್ಣಹೆಜ್ಜೆಗಳ ಮೂಲಕವೇ ಆರಂಭವಾಗುತ್ತದೆ. ಅಂತಹ ಮಿಸುಕಾಟ ಮಾಡಿದರೆ ಪರಿಣಾಮ ಹಾಲ ಹಾದಿ ಮೂಡುತ್ತದೆ; ನೆಲವೇ ಎದೆಬಿರಿತು ಹಾಡುತ್ತದೆ.

ನಿರ್ದಿಷ್ಟ ಹಾಡಿನ ಭಾವವು ಮನುಕುಲವು ಮತ್ತೆಮತ್ತೆ ಎದುರಿಸುವ ಸಮಸ್ಯೆಯನ್ನು ಕುರಿತು ಇದ್ದಾಗ, ಅದು ನಾನಾ ವಿನ್ಯಾಸದಲ್ಲಿ ಬೇರೆಬೇರೆ ಭಾಷೆಯಲ್ಲಿ ಎಲ್ಲ ಕಾಲಘಟ್ಟದಲ್ಲೂ ಪುನರಾವರ್ತನೆ ಆಗುತ್ತಲೇ ಇರುತ್ತದೆ. ದುಷ್ಟ ಸರ್ವಾಧಿಕಾರಗಳ ಅಡಿಯಲ್ಲಿ ಉಸಿರುಗಟ್ಟುವ ಸನ್ನಿವೇಶದಲ್ಲಿ ಬದುಕುವ ಎಲ್ಲ ಸಮಾಜಗಳು ತಮ್ಮ ಎದೆಯ ದನಿಯೆಂದೇ ಹಾಡಿಕೊಳ್ಳುವಷ್ಟು ಇದು ಸಾಧಾರಣೀಕರಣ ಪಡೆದಿದೆ. ಹೀಗಾಗಿಯೇ ಇದರ ಭಾವವು ಗಂಡಾಳಿಕೆ ಸಮಾಜದಲ್ಲಿರುವ ವಿವಾಹ ಮತ್ತು ಕುಟುಂಬ ಮುಂತಾದ ವ್ಯವಸ್ಥೆಗಳಲ್ಲಿ ನಲುಗುತ್ತಿರುವ ಸ್ತ್ರೀಯರ ದನಿಯಾಗುವಂತಿದೆ. ಕನ್ನಡದ ಮಹಿಳಾ ಸಂವೇದನೆಯ ಕಾವ್ಯದಲ್ಲಿ ಇದರ ಪ್ರತಿಬಿಂಬಗಳನ್ನು ಕಾಣಬಹುದು.
ಜೆಎನ್‌ಯು ವಿದ್ಯಾರ್ಥಿಗಳು ಕನ್ಹಯ್ಯಕುಮಾರ್ ಅವರ ನೇತೃತ್ವದಲ್ಲಿ ಕೂಗಿದ ಆಜಾದಿ ಘೋಷಣೆಯಲ್ಲಿ ಇದು ಅನುರಣನಗೊಂಡಿತು. ಈಗಲೂ ಟರ್ಕಿಯ ಕುರ್ದಿಶರ, ಇಸ್ರೇಲಿ ಹುಕೂಮತ್ತಿನಲ್ಲಿರುವ ಪ್ಯಾಲಸ್ತೇನಿಯರ, ಚೀನಾದ ಪಾದದಡಿ ಅಪ್ಪಚ್ಚಿಯಾಗಿರುವ ವುಗೈರ್ ಮುಸ್ಲಿಮರ ಹಾಗೂ ಟಿಬೆಟಿಯನ್ ಬೌದ್ಧರ, ಬರ್ಮಾದ ರೋಹಿಂಗ್ಯಾಗಳ ಎದೆಯೊಳಗೆ ಈ ಕವನ ಹಲವಾರು ವಿನ್ಯಾಸಗಳಲ್ಲಿ ರೂಪುಗೊಳ್ಳುತ್ತಿರಬಹುದು.

ಬಾಬಾ ಸಾಹೇಬರು ಬೌದ್ಧಧರ್ಮವನ್ನು ಸ್ವೀಕಾರ ಮಾಡುವ ಮುನ್ನ ಇದೇ ಭಾವವುಳ್ಳ ಮಾತುಗಳನ್ನು ಆಡಿರುವರು ಮತ್ತು ಲೇಖನ ಬರೆದಿರುವರು. ಸಾರಾ ಅಬೂಬಕರ್ ಅವರ ಕಥನದ ನಾಯಕಿಯರಲ್ಲಿ ಈ ಪದ್ಯವು ಬೇರೆ ಧಾಟಿಲಯದಲ್ಲಿ ಕಟ್ಟಲ್ಪಟ್ಟಿದೆ. ಸಿದ್ಧಲಿಂಗಯ್ಯನವರ ‘ಎಲ್ಲಿಗೆ ಬಂತು ಯಾರಿಗೆ ಬಂತು ಸ್ವಾತಂತ್ರ್ಯ’ ಕವನದಲ್ಲಿ ಈ ಹಾಡಿನ ಭಾವವು ಹೋರಾಟದ ಮೊದಲು ಹುಟ್ಟುವ ಸವಾಲಿನಂತೆ ಕೇಳಲ್ಪಟ್ಟಿದೆ. ಶತಮಾನದ ಹಿಂದೆ ರವೀಂದ್ರನಾಥ ಟಾಗೂರರು ಗೀತಾಂಜಲಿ ಸಂಕಲನದಲ್ಲಿ ಸೇರಿಸಿದ ‘ವೇರ್ ದಿ ಮೈಂಡ್ ಈಸ್’ ಎಂಬ ಗೀತೆಯಲ್ಲಿ ಈ ಪದ್ಯದ ಭಾವವು ದೇಶಕಟ್ಟುವ ತತ್ವವಾಗಿ ಈಗಾಗಲೇ ಹೇಳಲ್ಪಟ್ಟಿದೆ. ‘ಆನು ಒಲಿದಂತೆ ಹಾಡುವ’ ಎಂಬ ಬಸವಣ್ಣನವರ ವಚನ, ಕುವೆಂಪು ಅವರ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಲೇಖನ ಈ ಪದ್ಯದ ಮೂಲಮಾತೃಕೆಗಳಾಗಿದ್ದರೆ ಆಶ್ಚರ್ಯವಿಲ್ಲ. ಎಲ್ಲ ದಮನಿತ ಸಮಾಜ, ಕುಟುಂಬ, ಧರ್ಮ, ದೇಶಗಳಲ್ಲಿ ಇರುವ ಪ್ರಜ್ಞಾವಂತರಿಗೆ, ಸಂವೇದನಾಶೀಲರಿಗೆ ಸ್ವಾತಂತ್ರ್ಯ ಬಯಸುವವರಿಗೆ ಇದು ತಮ್ಮದೇ ಸ್ವಾತಂತ್ರ್ಯದ ಹಾಡೆನಿಸುತ್ತದೆ. ಈಗ ತಾಲಿಬಾನಿಗಳ ಕೋವಿಗೈಯಲ್ಲಿ ಸಿಲುಕಿರುವ ಆಫ್ಘಾನಿಸ್ತಾನದ ಮಹಿಳೆಯರು, ಕಲಾವಿದರು ಈ ಹಾಡನ್ನು ಹಾಡುತ್ತಿರಬಹುದು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...