Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...