Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...