Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...