Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...