Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...