Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....