Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...