Homeಮುಖಪುಟ‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಒಕ್ಕೂಟ ಸರ್ಕಾರದ ಮಾಜಿ ಸಚಿವ ಪಿ. ಚಿದಂಬರಂ ಅವರು, ‘ಜೆ.ಪಿ.ನಡ್ಡಾ ಅವರು ಯಾವಾಗ ತಮ್ಮ ನಾಮಪತ್ರ ಸಲ್ಲಿಸಿದರು” ಎಂದು ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅವಧಿ 2023 ರಲ್ಲಿ ಕೊನೆಗೊಳ್ಳಬೇಕಿದೆ, ಆದರೆ ಅವರ ಅಧಿಕಾರಾವಧಿಯನ್ನು 2024ರ ವರೆಗೆ ಮುಂದುವರೆಸಲಾಗಿದೆ.

ಚಿದಂಬರಂ ಅವರು ಮಂಗಳವಾರ ಟ್ವೀಟ್ ಮಾಡಿದ್ದು,“ಅಂದಹಾಗೆ ಶ್ರೀ ನಡ್ಡಾ ಅವರು, ಯಾವ ‘ಚುನಾವಣಾ ಪ್ರಾಧಿಕಾರದ ಮುಂದೆ, ಯಾವಾಗ ತಮ್ಮ ‘ನಾಮಪತ್ರಗಳನ್ನು’ ಸಲ್ಲಿಸಿದರು ಎಂಬುವುದನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ಅಪಾರ ಸಾರ್ವಜನಿಕ ಮತ್ತು ಮಾಧ್ಯಮದ ಆಸಕ್ತಿಯನ್ನು ಹುಟ್ಟುಹಾಕಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಮುಹೂರ್ತವಾಗಿದೆ. 2020 ರ ಜನವರಿಯಲ್ಲಿ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಜೆ ಪಿ ನಡ್ಡಾ ಅವರ ‘ಜನಸಾಮಾನ್ಯರ ಮತದಿಂದ ಅವಿರೋಧ ಆಯ್ಕೆ’ ನಂತರ ಇದಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ಮತ್ತು ಮತ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಗೌರವ ಸಲ್ಲಿಸುವಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ಎಲ್ಲಾ ರಾಜ್ಯ ಅಧ್ಯಕ್ಷರಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಪ್ರದೇಶ ಚುನಾವಣಾ ಅಧಿಕಾರಿಗಳು (PRO) ಆಯಾ ರಾಜ್ಯ ಕಾಂಗ್ರೆಸ್ ಸಮಿತಿಗಳ ಮತಗಟ್ಟೆ ಅಧಿಕಾರಿಗಳಾಗಿರುತ್ತಾರೆ. ಮತದಾನ ಕೇಂದ್ರಗಳಲ್ಲಿ ಕ್ರಮವನ್ನು ಇಟ್ಟುಕೊಳ್ಳುವ ಮತ್ತು ಚುನಾವಣೆಯು ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ವಿಸ್ತರಿಸಲು ನಿರ್ಧರಿಸಲಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಹೇಳಿದೆ.

ನಡ್ಡಾ ಅವರು ಮೂರು ವರ್ಷಗಳ ಅಧಿಕಾರಾವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ. ನಡ್ಡಾ ಅವರನ್ನು 2019 ರ ಜುಲೈನಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 2020ರ ಜನವರಿ 20 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಆಯ್ಕೆಯು ಸರ್ವಾನುಮತದಿಂದ ನಡೆಯಿತು.

ಬಿಜೆಪಿಯ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಇರಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸನೀಯ ವ್ಯಕ್ತಿಯಾಗಿದ್ದು, ಅವರ ಅಧಿಕಾರದ ನಂತರ ಪಕ್ಷವೂ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...