Homeಮುಖಪುಟ‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಒಕ್ಕೂಟ ಸರ್ಕಾರದ ಮಾಜಿ ಸಚಿವ ಪಿ. ಚಿದಂಬರಂ ಅವರು, ‘ಜೆ.ಪಿ.ನಡ್ಡಾ ಅವರು ಯಾವಾಗ ತಮ್ಮ ನಾಮಪತ್ರ ಸಲ್ಲಿಸಿದರು” ಎಂದು ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅವಧಿ 2023 ರಲ್ಲಿ ಕೊನೆಗೊಳ್ಳಬೇಕಿದೆ, ಆದರೆ ಅವರ ಅಧಿಕಾರಾವಧಿಯನ್ನು 2024ರ ವರೆಗೆ ಮುಂದುವರೆಸಲಾಗಿದೆ.

ಚಿದಂಬರಂ ಅವರು ಮಂಗಳವಾರ ಟ್ವೀಟ್ ಮಾಡಿದ್ದು,“ಅಂದಹಾಗೆ ಶ್ರೀ ನಡ್ಡಾ ಅವರು, ಯಾವ ‘ಚುನಾವಣಾ ಪ್ರಾಧಿಕಾರದ ಮುಂದೆ, ಯಾವಾಗ ತಮ್ಮ ‘ನಾಮಪತ್ರಗಳನ್ನು’ ಸಲ್ಲಿಸಿದರು ಎಂಬುವುದನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ಅಪಾರ ಸಾರ್ವಜನಿಕ ಮತ್ತು ಮಾಧ್ಯಮದ ಆಸಕ್ತಿಯನ್ನು ಹುಟ್ಟುಹಾಕಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಮುಹೂರ್ತವಾಗಿದೆ. 2020 ರ ಜನವರಿಯಲ್ಲಿ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಜೆ ಪಿ ನಡ್ಡಾ ಅವರ ‘ಜನಸಾಮಾನ್ಯರ ಮತದಿಂದ ಅವಿರೋಧ ಆಯ್ಕೆ’ ನಂತರ ಇದಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ಮತ್ತು ಮತ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಗೌರವ ಸಲ್ಲಿಸುವಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ಎಲ್ಲಾ ರಾಜ್ಯ ಅಧ್ಯಕ್ಷರಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಪ್ರದೇಶ ಚುನಾವಣಾ ಅಧಿಕಾರಿಗಳು (PRO) ಆಯಾ ರಾಜ್ಯ ಕಾಂಗ್ರೆಸ್ ಸಮಿತಿಗಳ ಮತಗಟ್ಟೆ ಅಧಿಕಾರಿಗಳಾಗಿರುತ್ತಾರೆ. ಮತದಾನ ಕೇಂದ್ರಗಳಲ್ಲಿ ಕ್ರಮವನ್ನು ಇಟ್ಟುಕೊಳ್ಳುವ ಮತ್ತು ಚುನಾವಣೆಯು ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ವಿಸ್ತರಿಸಲು ನಿರ್ಧರಿಸಲಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಹೇಳಿದೆ.

ನಡ್ಡಾ ಅವರು ಮೂರು ವರ್ಷಗಳ ಅಧಿಕಾರಾವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ. ನಡ್ಡಾ ಅವರನ್ನು 2019 ರ ಜುಲೈನಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 2020ರ ಜನವರಿ 20 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಆಯ್ಕೆಯು ಸರ್ವಾನುಮತದಿಂದ ನಡೆಯಿತು.

ಬಿಜೆಪಿಯ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಇರಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸನೀಯ ವ್ಯಕ್ತಿಯಾಗಿದ್ದು, ಅವರ ಅಧಿಕಾರದ ನಂತರ ಪಕ್ಷವೂ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...