Homeಮುಖಪುಟ‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಒಕ್ಕೂಟ ಸರ್ಕಾರದ ಮಾಜಿ ಸಚಿವ ಪಿ. ಚಿದಂಬರಂ ಅವರು, ‘ಜೆ.ಪಿ.ನಡ್ಡಾ ಅವರು ಯಾವಾಗ ತಮ್ಮ ನಾಮಪತ್ರ ಸಲ್ಲಿಸಿದರು” ಎಂದು ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅವಧಿ 2023 ರಲ್ಲಿ ಕೊನೆಗೊಳ್ಳಬೇಕಿದೆ, ಆದರೆ ಅವರ ಅಧಿಕಾರಾವಧಿಯನ್ನು 2024ರ ವರೆಗೆ ಮುಂದುವರೆಸಲಾಗಿದೆ.

ಚಿದಂಬರಂ ಅವರು ಮಂಗಳವಾರ ಟ್ವೀಟ್ ಮಾಡಿದ್ದು,“ಅಂದಹಾಗೆ ಶ್ರೀ ನಡ್ಡಾ ಅವರು, ಯಾವ ‘ಚುನಾವಣಾ ಪ್ರಾಧಿಕಾರದ ಮುಂದೆ, ಯಾವಾಗ ತಮ್ಮ ‘ನಾಮಪತ್ರಗಳನ್ನು’ ಸಲ್ಲಿಸಿದರು ಎಂಬುವುದನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ಅಪಾರ ಸಾರ್ವಜನಿಕ ಮತ್ತು ಮಾಧ್ಯಮದ ಆಸಕ್ತಿಯನ್ನು ಹುಟ್ಟುಹಾಕಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಮುಹೂರ್ತವಾಗಿದೆ. 2020 ರ ಜನವರಿಯಲ್ಲಿ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಜೆ ಪಿ ನಡ್ಡಾ ಅವರ ‘ಜನಸಾಮಾನ್ಯರ ಮತದಿಂದ ಅವಿರೋಧ ಆಯ್ಕೆ’ ನಂತರ ಇದಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ಮತ್ತು ಮತ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಗೌರವ ಸಲ್ಲಿಸುವಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ಎಲ್ಲಾ ರಾಜ್ಯ ಅಧ್ಯಕ್ಷರಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಪ್ರದೇಶ ಚುನಾವಣಾ ಅಧಿಕಾರಿಗಳು (PRO) ಆಯಾ ರಾಜ್ಯ ಕಾಂಗ್ರೆಸ್ ಸಮಿತಿಗಳ ಮತಗಟ್ಟೆ ಅಧಿಕಾರಿಗಳಾಗಿರುತ್ತಾರೆ. ಮತದಾನ ಕೇಂದ್ರಗಳಲ್ಲಿ ಕ್ರಮವನ್ನು ಇಟ್ಟುಕೊಳ್ಳುವ ಮತ್ತು ಚುನಾವಣೆಯು ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ವಿಸ್ತರಿಸಲು ನಿರ್ಧರಿಸಲಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಹೇಳಿದೆ.

ನಡ್ಡಾ ಅವರು ಮೂರು ವರ್ಷಗಳ ಅಧಿಕಾರಾವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ. ನಡ್ಡಾ ಅವರನ್ನು 2019 ರ ಜುಲೈನಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 2020ರ ಜನವರಿ 20 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಆಯ್ಕೆಯು ಸರ್ವಾನುಮತದಿಂದ ನಡೆಯಿತು.

ಬಿಜೆಪಿಯ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಇರಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸನೀಯ ವ್ಯಕ್ತಿಯಾಗಿದ್ದು, ಅವರ ಅಧಿಕಾರದ ನಂತರ ಪಕ್ಷವೂ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...