Homeಮುಖಪುಟ‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಒಕ್ಕೂಟ ಸರ್ಕಾರದ ಮಾಜಿ ಸಚಿವ ಪಿ. ಚಿದಂಬರಂ ಅವರು, ‘ಜೆ.ಪಿ.ನಡ್ಡಾ ಅವರು ಯಾವಾಗ ತಮ್ಮ ನಾಮಪತ್ರ ಸಲ್ಲಿಸಿದರು” ಎಂದು ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅವಧಿ 2023 ರಲ್ಲಿ ಕೊನೆಗೊಳ್ಳಬೇಕಿದೆ, ಆದರೆ ಅವರ ಅಧಿಕಾರಾವಧಿಯನ್ನು 2024ರ ವರೆಗೆ ಮುಂದುವರೆಸಲಾಗಿದೆ.

ಚಿದಂಬರಂ ಅವರು ಮಂಗಳವಾರ ಟ್ವೀಟ್ ಮಾಡಿದ್ದು,“ಅಂದಹಾಗೆ ಶ್ರೀ ನಡ್ಡಾ ಅವರು, ಯಾವ ‘ಚುನಾವಣಾ ಪ್ರಾಧಿಕಾರದ ಮುಂದೆ, ಯಾವಾಗ ತಮ್ಮ ‘ನಾಮಪತ್ರಗಳನ್ನು’ ಸಲ್ಲಿಸಿದರು ಎಂಬುವುದನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ಅಪಾರ ಸಾರ್ವಜನಿಕ ಮತ್ತು ಮಾಧ್ಯಮದ ಆಸಕ್ತಿಯನ್ನು ಹುಟ್ಟುಹಾಕಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಮುಹೂರ್ತವಾಗಿದೆ. 2020 ರ ಜನವರಿಯಲ್ಲಿ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಜೆ ಪಿ ನಡ್ಡಾ ಅವರ ‘ಜನಸಾಮಾನ್ಯರ ಮತದಿಂದ ಅವಿರೋಧ ಆಯ್ಕೆ’ ನಂತರ ಇದಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ಮತ್ತು ಮತ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಗೌರವ ಸಲ್ಲಿಸುವಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ಎಲ್ಲಾ ರಾಜ್ಯ ಅಧ್ಯಕ್ಷರಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಪ್ರದೇಶ ಚುನಾವಣಾ ಅಧಿಕಾರಿಗಳು (PRO) ಆಯಾ ರಾಜ್ಯ ಕಾಂಗ್ರೆಸ್ ಸಮಿತಿಗಳ ಮತಗಟ್ಟೆ ಅಧಿಕಾರಿಗಳಾಗಿರುತ್ತಾರೆ. ಮತದಾನ ಕೇಂದ್ರಗಳಲ್ಲಿ ಕ್ರಮವನ್ನು ಇಟ್ಟುಕೊಳ್ಳುವ ಮತ್ತು ಚುನಾವಣೆಯು ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ವಿಸ್ತರಿಸಲು ನಿರ್ಧರಿಸಲಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಹೇಳಿದೆ.

ನಡ್ಡಾ ಅವರು ಮೂರು ವರ್ಷಗಳ ಅಧಿಕಾರಾವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ. ನಡ್ಡಾ ಅವರನ್ನು 2019 ರ ಜುಲೈನಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 2020ರ ಜನವರಿ 20 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಆಯ್ಕೆಯು ಸರ್ವಾನುಮತದಿಂದ ನಡೆಯಿತು.

ಬಿಜೆಪಿಯ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಇರಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸನೀಯ ವ್ಯಕ್ತಿಯಾಗಿದ್ದು, ಅವರ ಅಧಿಕಾರದ ನಂತರ ಪಕ್ಷವೂ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....