Homeಅಂಕಣಗಳುಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

- Advertisement -
- Advertisement -

ಎದುರು ಬರುತ್ತಿರುವವನು ಕಾಂಗ್ರೆಸ್ ಕಾರ್ಯಕರ್ತ ಎಂದು ಗೊತ್ತಾದರೆ ಸಾಕು ಭಕ್ತಿಯಿಂದ ಕೈ ಮುಗಿದು, ’ದಯಮಾಡಿ ನನ್ನನ್ನ ಕಾಂಗ್ರೆಸ್‌ಗೆ ಸೇರಿಸಿ’ ಎಂದು ಕೇಳಿಕೊಳ್ಳುತ್ತಿದ್ದ ಕಡೂರು ದತ್ತಣ್ಣ ಕಾಂಗ್ರೆಸ್ ಸೇರಿಯೂ ಆಯ್ತು; ಅದನ್ನು ಬಿಟ್ಟು ಮತ್ತೆ ಜೆಡಿಎಸ್ ಸೇರಿ ಕಡೂರಿನ ಕ್ಯಾಂಡೇಟ್ ಆಗಿಯೂ ಆಯ್ತು. ಕಡೂರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಅಂತಹ ವ್ಯತ್ಯಾಸವಿಲ್ಲ, ಹಾಗಾಗಿ ದತ್ತಣ್ಣ ಎಲ್ಲಿ ನಿಂತರೂ ಮೂರನೆ ಸ್ಥಾನ ಕಾಯಂ ಆಗಿದೆಯಂತಲ್ಲಾ, ಥೂತ್ತೇರಿ.

*****

ಸಿ.ಸೋಮಶೇಖರ ನೆನಪಿಸಿಕೊಳ್ಳಿ; ಅಧಿಕಾರಿಯಾಗಿ ಅಖಂಡ ಐಶ್ವರ್ಯ ಹೊಂದಿದ್ದವರು ಮತ್ತು ಲಂಕೇಶ್‌ರಿಂದ ಜನ್ಮಾಪಿ ನೆನೆಸಿಕೊಳ್ಳುವಂತೆ ಟೀಕಿಸಿಕೊಂಡಿದ್ದವರು. ಇದಕ್ಕಿಂತ ಹೆಚ್ಚಾಗಿ ವಚನ ಸಾಹಿತ್ಯವನ್ನು ಅರೆದು ಕುಡಿಯಲು ಪ್ರಯತ್ನಿಸಿ, ಅರಗಿಸಿಕೊಳ್ಳಲಾಗದೆ ವಾಂತಿ ಮಾಡಿಕೊಂಡಿದ್ದರು. ಈತ ವಚನ ಹೇಳುತ್ತಿರುವುದು ಬಿಜೆಪಿ ಪಡಸಾಲೆಯಲ್ಲಿ, ಏಕೆಂದರೆ ಬಿಜೆಪಿ ಗರ್ಭಗುಡಿಗೆ ಆತ ಹೋಗುವಂತಿಲ್ಲ. ಬಿಜೆಪಿ ಲಿಂಗಾಯಿತರಿಗೆ ಗೌರವ ತಂದುಕೊಟ್ಟ ಪಕ್ಷ ಎಂದು ಹೇಳಿಕೊಂಡು ತಿರುಗುತ್ತಿರುವ ಈತ ತುಮಕೂರು ಜಿಲ್ಲೆಯ ಡಿ.ಸಿಯಾಗಿದ್ದಾಗ, ಇಂಥದೇ ಚುನಾವಣೆ ಬಂದು ಮೊದಲು ಆ ಡಿ.ಸಿಯನ್ನ ವರ್ಗಮಾಡಿ ಎಂದು ದೇವೇಗೌಡರು ಹಟ ಹಿಡಿದದ್ದು ಯಾಕೆ ಅಂತ ಈಗ ಗೊತ್ತಾಗುತ್ತಿದೆಯಲ್ಲಾ, ಥೂತ್ತೇರಿ.

*****

ಬಿಜೆಪಿ ಪರವಾಗಿ ಸಿ.ಸೋಮಶೇಖರ್ ನಂತಹವರು ಎಷ್ಟೇ ವಕಾಲತ್ತು ವಹಿಸಿದರೂ ಈಶ್ವರಪ್ಪನಿಗಿರುವ ಪಕ್ಷನಿಷ್ಠೆ ಇಡೀ ದೇಶದಲ್ಲಿಯೇ ಯಾರಿಗೂ ಇಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಅದಕ್ಕಾಗಿಯೇ ಪ್ರಧಾನಿಯವರೇ ಫೋನು ಮಾಡಿ ಅಭಿನಂದಿಸಿ, ’ಈಶ್ವರಪ್ಪಾಜಿ, ತು ಅಸಾಧಾರಣ ವ್ಯಕ್ತಿ ಹೈ. ಏಕ್ ಬಾರ್ ಇದರ್ ಆನ’ ಎಂದರಂತಲ್ಲಾ. ಆ ಕೂಡಲೇ ಕೇಸರಿ ಮೈದುಂಬಿದಂತಾದ ಈಶ್ವರಪ್ಪ, ’ಆ ಜಗದೀಶ್ ಶೆಟ್ಟರ್ ಕಾಂಗ್ರೆಸ್ಸಲ್ಲಿ ಸಾಯಿಲಿ, ನಾನು ಮಾತ್ರ ಬಿಜೆಪಿಲಿದ್ದೇ ಹೋಯ್ತಿನಿ’ ಎಂದರಂತಲ್ಲಾ. ಇಂತಹ ಕಠೋರ ಶಪಥ ಮಾಡಿದ ಈಶ್ವರಪ್ಪನನ್ನು ಅಭಿನಂದಿಸುವುದು ನಮ್ಮ ಕರ್ತವ್ಯ ಅಲ್ಲವೆ! ಅದಕ್ಕಾಗಿ ಫೋನು ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್, ’ನಮಸ್ತೇ ಸದಾ ವತ್ಸಲೇ ಮಾತೃ ಭೂಮಿ..’

“ಹಲೋ ಯಾರೂ?”

“ನಾನು ಸಾರ್ ಯಾಹೂ.”

“ಯಾಹೂ ಎಲ್ಲಿಗೋದ್ರಿ, ಬನ್ರಿ ಮಾತಾಡನ”.

“ಡೆಡ್‌ಲೈನಿಗೆ ಒಂದೆರಡು ಮಾತ್ ಹೇಳಿ ಸಾರ್.”

“ಏನು ಮಾತಾಡದ್ರಿ.. ಯಾವುದ್ಕು ಉತ್ಸಾಹ ಇಲ. ಸುಮ್ಮನೆ ತೋರಿಕೆಗೆ ಏನೇನೋ ಮಾತಾಡ್ತಿನಿ.”

“ಅದು ಗೊತ್ತು ಸಾರ್, ನಿಮ್ಮತ್ರ ಸೇವಕನಂಗಿದ್ದ ಹುಡುಗನ ಪರ ಓಟು ಕೇಳಿದರಂತೆ. ಹಿಂಸೆ ನ್ಯನಿಸಿಗಳಕ್ಕಾಗಲ್ಲ.”

“ಆದ್ರು ಕೇಳಬೇಕಲ್ಲ ಹೇಳಿ.”

“ಯಾಕ್ಸರ್ ಬಿಜೆಪಿಗಳು ನಿಮಿಗೆ ಇಂತ ಅವುಮಾನ ಮಾಡಿದ್ರು. ಬಿಜೆಪಿ ಇತಿಹಾಸದಲ್ಲಿ ಯಾರಿಗೂ ಇಂತ ಅವುಮಾನಾಗಿಲ್ಲ ಸಾ.”

“ಶೆಟ್ಟರ್‌ಗಿಂತ ಅವುಮಾನಾಗಿಲ್ಲ ಬುಡ್ರಿ.”

“ಅಂಗಂತಿರಾ?”

ಇದನ್ನೂ ಓದಿ: ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

“ಊ ಮತ್ತೆ. ಮುಖ್ಯಮಂತ್ರಿಯಾಗಿದ್ದೋರಿಗೆ ಮಿಸ್ ಕಾಲ್ ಕೊಟ್ಟು, ಇವುರು ಪೋನ್ ಮಾಡಿದಾಗ ನಿಮಗೆ ಟಿಕೆಟ್ ಇಲ್ಲ ಅಂದುಬುಟ್ಟು ಕಟ್ ಮಾಡ್ಯವುರಲ್ಲ, ಇದವು ಅವಮಾನ ಅಲವೆ?”

“ನಿಮ್ಮ ಅವುಮಾನದ ಮುಂದೆ ಅವುರದೇನೂ ಅಲ್ಲ ಸಾರ್.”

“ಅದ್ಯಂಗರೀ?”

“ನೀವು ಬಿಜೆಪಿ ಕಟ್ಟಿ ಬೆಳೆಸಿದ ಮಹಾನಾಯಕ. ಶಿವಮೊಗ್ಗದಲ್ಲಿ ಪಾರ್ಟಿಗಾಗಿ ಬಂದ್, ಗೋಲಿಬಾರು, ಲೂಟಿ ಯಲ್ಲಾನು ಮಾಡಿಸಿದ್ದಿರಿ. ಕೆ.ಹೆಚ್.ಶ್ರೀನಿವಾಸ್ ಊರಾಬುಟ್ಟೋಗಂಗೆ ಮಾಡಿದ್ದಿರಿ, ಮುಸ್ಲಿಮರ ಮದುವೆಗೂ ದುಡ್ಡುಕೊಟ್ಟಿದ್ದಿರಿ. ತಮುಳು ಜನ ಸಂಘಟಿಸಿ ಅವುರನೆಲ್ಲಾ ಬಸ್ಸಲ್ಲಿ ಸರದಿ ಪ್ರಕಾರ ತುಂಬಿಕಂಡೋಗಿ ತಮುಳು ನಾಡಿನ ತಂಜಾವ್ಯೂರು, ರಾಮೇಶ್ವರ, ಚಿದಂಬರ, ಮದುರೆ, ಪಳನಿ ಯಲ್ಲಾನು ತೋರಿಸಿಗಂಡು ಬಂದು ಸುರದ್ದಿದ್ದಿರಿ. ಹಂಗೆ ನೋಡಿದ್ರೆ ಆ ಶಿವಮೊಗ್ಗದಲ್ಲಿ ನಿಮ್ಮನ್ನ ಸೋಲಸಕ್ಕೆ ಯಾರಿಂದ್ಲೂ ಸಾಧ್ಯವಿಲ್ಲ. ಇದ್ಯಾವುದನ್ನು ಲೆಕ್ಕಕ್ಕೆ ತಗೊಳ್ದೆ, ಕೇವಲ ಸಿದ್ದರಾಮಯ್ಯನ ತಲೆ ಕಡಿತಿನಿ ಅಂದಿದ್ದ ಮಾತ್ರಕ್ಕೆ ನಿಮ್ಮ ಸೇವಕನಿಗೆ ಟಿಕೆಟ್ ಕೊಟ್ಟು ನಿಮಗಿಲ್ಲ ಅಂದರಲ್ಲಾ ಸಾರ್. ನನಗೇ ಇಷ್ಟು ಹಿಂಸೆ ಆಯ್ತಾ ಅದೆ. ನೀವ್ಯಂಗೆ ತಡ್ಕೋತಾ ಇದೀರಿ ಅನ್ನದೆ ಆಶ್ಚರ್ಯ ಸಾರ್.”

“ಅದು ಪಾರ್ಟಿ ನಿಷ್ಟೆ ಕಂಡ್ರಿ, ನನಿಗೆ ಇಲ್ಲಿವರಿಗೂ ಸಿಕ್ಕಿದೆಲ್ಲಾ ಪಾರ್ಟಿಯಿಂದ. ಪಾರ್ಟಿ ನಮ್ಮ ತಾಯಿಯಿದ್ದಂಗೆ.”

“ಪಾರ್ಟಿ ತಾಯಿಯಾದ್ರೆ, ತಂದೆ ಯಾರು ಸಾರ್?”

“ಪೊಲಿಟಿಕೆಲ್ ಪಾರ್ಟಿ ಅಂದ್ರೆ ತಾಯಿ, ಅಲ್ಲಿ ತಂದೆಯಿರಲ್ಲ”

“ಅಂದ್ರೆ ಪೊಲಿಟಿಕಲ್ ಪಾರ್ಟಿಗೆ ತಂದೆಯಿರಲ್ವ ಸಾರ್?”

“ರಿ ತಲೆಕೆಟ್ಟಂಗೆ ಮಾತಾಬ್ಯಾಡಿ. ನಮ್ಮನ್ನ ಬೆಳೆಸಿ ಸ್ಥಾನಮಾನ ಕೊಟ್ಟ ಪಾರ್ಟಿ ತಾಯಿಗೆ ಸಮಾನ ಅಂತ ನಾನು ಹೇಳಿದ್ದು.”

“ನನಿಗೇನೂ ಈ ಹೋಲಿಕೆನೆ ಸರಿಯಿಲ್ಲ ಸಾರ್. ಅಪ್ರಭುದ್ಧ ಮೂರ್ಖರು ಮಾತ್ರ ಇಂತ ಹೋಲಿಕೆ ಮಾಡಬಲ್ಲರು.”

“ಯಾಕ್ರಿ ಅಂಗಂತಿರಿ?”

“ಮತ್ತಿನ್ನೇನು ಸಾರ್, ಹೆತ್ತು ಹಾಲು ಕುಡಿಸಿ ಬೆಳೆಸೋ ತಾಯಿ ಎಲ್ಲೀ, ಹಾದಿ ಬೀದಿಲಿ ಸಿಕ್ಕಿದೋರ ಹಿಡಕಂಡು ಬಂದು, ಚಡ್ಡಿ ಇಕ್ಕಿ, ಲಾಟಿ ಕೊಟ್ಟು ಮಹೊಡಿ ಸಾಬರಿಗೆ ಅನ್ನೂ ಪಾರ್ಟಿ ಎಲ್ಲಿ? ಅಂಥ ಪಾರ್ಟಿನ ದೇವತೆಯಂತ ತಾಯಿಗೋಲುಸ್ತಿರಲ್ಲಾ. ಆಯ್ತು ನಿಮ್ಮ ಮಾತನ್ನ ಒಪ್ಪಿಗಳನ. ಇವತ್ತು ನಿಮ್ಮ ಕತೆ ಏನಾಗಿದೆ?”

“ಏನು ಆಗಬಾರದ್ದಾಗಿಲ್ಲ ಕಂಡ್ರೀ.”

“ಸಾರ್ ನಿಮಗೆ ಯಂಗೇಳಬೇಕು ಅಂತ ಗೊತ್ತಾಯ್ತಯಿಲ್ಲ. ಬಿಜೆಪಿಲಿ ಚುನಾವಣೆಗೆ ನಿಲ್ಲಕ್ಕೆ ನಿಮ್ಮಷ್ಟು ಯೋಗ್ಯ ಕ್ಯಾಂಡೇಟ್ ಇರಲಿಲ್ಲ. ಅವುರು ನಿರಾಕರಿಸಿದ ತಕ್ಷಣನೆ ಶೆಟ್ಟರ್ ತರ ತೀರ್ಮಾನ ತಗೊಬೇಕಿತ್ತು.”

“ಬ್ಯಾರೆ ಪಾರ್ಟಿಯೋರು ನನ್ನನ್ನ ಸೇರಿಸ್ರಿರಲಿಲ್ಲ ಕಂಡ್ರಿ.”

“ಜೆಡಿಎಸ್‌ನೋರು ಸೇರಿಸ್ತಿದ್ರು ಸಾರ್. ಜೆಡಿಎಸ್ ಟೀಮನ್ನ ದಂಡೂಪಾಳ್ಯದ ಗ್ಯಾಂಗು ಅಂದಿದ್ದ ಆಯನೂರ್ ಮಂಜುನಾಥನ್ನೆ ಸೇರಿಸಿಕೊಂಡ್ರು. ಅಂಥದರಲ್ಲಿ ಕುಮಾರಣ್ಣ ನಿಮ್ಮನ್ನ ಬುಡತಿದ್ರೆ..”

“ಬುಡತಿರಲಿಲ್ಲ ನಿಜ. ಅಂಗೆ ನೋಡಿದ್ರೆ ಕುಮಾರಣ್ಣ ಈ ಹಿಂದೆ ಎರಡು ಬಾರಿ ನಾನೇಳಿದೋರಿಗೆ ಟಿಕೆಟ್ ಕೊಟ್ಟವುರೆ. ಅಂಗಂತ ನಾನು ಪಾರ್ಟಿ ಬುಡಕ್ಕಾಗಲ್ಲ. ಈಗ ನಾನು ಚುನಾವಣಾ ರಾಜಕಾರಣದಿಂದ ದೂರ. ಮುಂದೆ ಪಾರ್ಟಿ ಕೆಲಸ ಮಾಡಿಕಂಡೋಯ್ತಿನಿ”

“ಪಾರ್ಟಿ ಕೆಲಸನ ನಿಮ್ಮಿಂದ ಯಾರೂ ನಿರೀಕ್ಷೆ ಮಾಡಿಲ್ಲ.”

“ಯಾಕ್ರಿ ಅಂಗಂತಿರಿ?”

“ನಿಮ್ಮ ಜಾಗಕ್ಕೆ ನಿಮಗಿಂತ್ಲೂ ಭೀಕರ ವ್ಯಕ್ತಿನ ತಂದಾಗ್ಯದೆ. ಮುಂದೆ ಅವುಂದೆ ರಾಜ್ಯಭಾರ. ಅವುರು ಆವರಿಸಿಕೊಂಡ ಜಾಗದಲ್ಲಿ ನೀವು ಅಪ್ಪಮಕ್ಕಳಿಗೇನೂ ಕೆಲಸಿಲ್ಲ. ನಿಮ್ಮ ಈ ನಿವೃತ್ತಿ ನಂತರ ನಿಮ್ಮ ಮಗ ನಿಮ್ಮ ಜೊತೆ ಬಂದು ಸೇರಿಕಳ್ತನೆ. ನೀವು ಮೂಲೆಗುಂಪಾಗದ್ರಲ್ಲಿ ಈಗಾಗ್ಲೆ ಮೂಲೆಗುಂಪಾಗಿರೊ ಎಡೂರಪ್ಪನ ಕೈವಾಡನೂ ಇದೆ.”

“ಅವುರ ಕೈವಾಡ ಯಾಕಿರತ್ರಿ?”

“ಸಾರ್ ನಿಜ ಹೇಳಿ. ನಿಮಗೆ ಎಡೂರಪ್ಪ ಅಂದ್ರೆ ಅಷ್ಟಕಷ್ಟೆ. ಇನ್ನ ರಾಘವೇಂದ್ರನ ಗೆಲುವು ನಿಮಗೆ ಬೇಕಿರಲಿಲ್ಲ. ಅಂಗೇನೆ ಆ ವಿಜಯೇಂದ್ರನ ಅಭ್ಯುದಯ ನಿಮಗೆ ಬೇಕಿಲ್ಲ, ಇದು ಗೊತ್ತಾಗಿ ಎಡೂರಪ್ಪ ನಮ್ಮ ಕತೆ ಮುಗದರಷ್ಟೆ ಹೋಯ್ತು, ಈಶ್ವರಪ್ಪನ ಕತೆನೂ ಮುಗಿಲಿ ಅಂತ ಕಾಯ್ತಿದ್ರು ಸಾರ್.”

“ಅದು ನನಿಗೂ ಗೊತ್ತು ಕಂಡ್ರಿ. ನಾನೇನು ಅಷ್ಟು ದಡ್ಡ ಅಲ್ಲ.”

“ಆದ್ರು ನೀವು ಅಸಹಾಯಕರಾಗಿ ಅಂತ್ಯವಾಗ್ತಿರಿ ಸಾರ್.”

“ಹ್ಯಂಗ್ರೀ?”

“ಎಡೂರಪ್ಪನ ಮಕ್ಕಳು ಎಂ.ಪಿ ಎಂ.ಎಲ್.ಎ ಆಯ್ತರೆ. ಸಿಟ್ಟು ಸ್ವಾಭಿಮಾನ ತೋರಿದ ಶೆಟ್ಟರ್ ಎಂ.ಎಲ್.ಎ ಆಯ್ತರೆ. ನೀವು ಅಪ್ಪಾ ಮಗ ಏನೂ ಆಗಲವಲ್ಲ ಸಾ.”

“ಆಗದಿದ್ರೆ ಕತ್ತೆ ಬಾಲ, ಸಂಘದ ಕಾರ್ಯಕರ್ತರಾಗಿರ್ತಿವಿ.”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...