Homeಅಂಕಣಗಳುಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

- Advertisement -
- Advertisement -

ಎದುರು ಬರುತ್ತಿರುವವನು ಕಾಂಗ್ರೆಸ್ ಕಾರ್ಯಕರ್ತ ಎಂದು ಗೊತ್ತಾದರೆ ಸಾಕು ಭಕ್ತಿಯಿಂದ ಕೈ ಮುಗಿದು, ’ದಯಮಾಡಿ ನನ್ನನ್ನ ಕಾಂಗ್ರೆಸ್‌ಗೆ ಸೇರಿಸಿ’ ಎಂದು ಕೇಳಿಕೊಳ್ಳುತ್ತಿದ್ದ ಕಡೂರು ದತ್ತಣ್ಣ ಕಾಂಗ್ರೆಸ್ ಸೇರಿಯೂ ಆಯ್ತು; ಅದನ್ನು ಬಿಟ್ಟು ಮತ್ತೆ ಜೆಡಿಎಸ್ ಸೇರಿ ಕಡೂರಿನ ಕ್ಯಾಂಡೇಟ್ ಆಗಿಯೂ ಆಯ್ತು. ಕಡೂರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಅಂತಹ ವ್ಯತ್ಯಾಸವಿಲ್ಲ, ಹಾಗಾಗಿ ದತ್ತಣ್ಣ ಎಲ್ಲಿ ನಿಂತರೂ ಮೂರನೆ ಸ್ಥಾನ ಕಾಯಂ ಆಗಿದೆಯಂತಲ್ಲಾ, ಥೂತ್ತೇರಿ.

*****

ಸಿ.ಸೋಮಶೇಖರ ನೆನಪಿಸಿಕೊಳ್ಳಿ; ಅಧಿಕಾರಿಯಾಗಿ ಅಖಂಡ ಐಶ್ವರ್ಯ ಹೊಂದಿದ್ದವರು ಮತ್ತು ಲಂಕೇಶ್‌ರಿಂದ ಜನ್ಮಾಪಿ ನೆನೆಸಿಕೊಳ್ಳುವಂತೆ ಟೀಕಿಸಿಕೊಂಡಿದ್ದವರು. ಇದಕ್ಕಿಂತ ಹೆಚ್ಚಾಗಿ ವಚನ ಸಾಹಿತ್ಯವನ್ನು ಅರೆದು ಕುಡಿಯಲು ಪ್ರಯತ್ನಿಸಿ, ಅರಗಿಸಿಕೊಳ್ಳಲಾಗದೆ ವಾಂತಿ ಮಾಡಿಕೊಂಡಿದ್ದರು. ಈತ ವಚನ ಹೇಳುತ್ತಿರುವುದು ಬಿಜೆಪಿ ಪಡಸಾಲೆಯಲ್ಲಿ, ಏಕೆಂದರೆ ಬಿಜೆಪಿ ಗರ್ಭಗುಡಿಗೆ ಆತ ಹೋಗುವಂತಿಲ್ಲ. ಬಿಜೆಪಿ ಲಿಂಗಾಯಿತರಿಗೆ ಗೌರವ ತಂದುಕೊಟ್ಟ ಪಕ್ಷ ಎಂದು ಹೇಳಿಕೊಂಡು ತಿರುಗುತ್ತಿರುವ ಈತ ತುಮಕೂರು ಜಿಲ್ಲೆಯ ಡಿ.ಸಿಯಾಗಿದ್ದಾಗ, ಇಂಥದೇ ಚುನಾವಣೆ ಬಂದು ಮೊದಲು ಆ ಡಿ.ಸಿಯನ್ನ ವರ್ಗಮಾಡಿ ಎಂದು ದೇವೇಗೌಡರು ಹಟ ಹಿಡಿದದ್ದು ಯಾಕೆ ಅಂತ ಈಗ ಗೊತ್ತಾಗುತ್ತಿದೆಯಲ್ಲಾ, ಥೂತ್ತೇರಿ.

*****

ಬಿಜೆಪಿ ಪರವಾಗಿ ಸಿ.ಸೋಮಶೇಖರ್ ನಂತಹವರು ಎಷ್ಟೇ ವಕಾಲತ್ತು ವಹಿಸಿದರೂ ಈಶ್ವರಪ್ಪನಿಗಿರುವ ಪಕ್ಷನಿಷ್ಠೆ ಇಡೀ ದೇಶದಲ್ಲಿಯೇ ಯಾರಿಗೂ ಇಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಅದಕ್ಕಾಗಿಯೇ ಪ್ರಧಾನಿಯವರೇ ಫೋನು ಮಾಡಿ ಅಭಿನಂದಿಸಿ, ’ಈಶ್ವರಪ್ಪಾಜಿ, ತು ಅಸಾಧಾರಣ ವ್ಯಕ್ತಿ ಹೈ. ಏಕ್ ಬಾರ್ ಇದರ್ ಆನ’ ಎಂದರಂತಲ್ಲಾ. ಆ ಕೂಡಲೇ ಕೇಸರಿ ಮೈದುಂಬಿದಂತಾದ ಈಶ್ವರಪ್ಪ, ’ಆ ಜಗದೀಶ್ ಶೆಟ್ಟರ್ ಕಾಂಗ್ರೆಸ್ಸಲ್ಲಿ ಸಾಯಿಲಿ, ನಾನು ಮಾತ್ರ ಬಿಜೆಪಿಲಿದ್ದೇ ಹೋಯ್ತಿನಿ’ ಎಂದರಂತಲ್ಲಾ. ಇಂತಹ ಕಠೋರ ಶಪಥ ಮಾಡಿದ ಈಶ್ವರಪ್ಪನನ್ನು ಅಭಿನಂದಿಸುವುದು ನಮ್ಮ ಕರ್ತವ್ಯ ಅಲ್ಲವೆ! ಅದಕ್ಕಾಗಿ ಫೋನು ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್, ’ನಮಸ್ತೇ ಸದಾ ವತ್ಸಲೇ ಮಾತೃ ಭೂಮಿ..’

“ಹಲೋ ಯಾರೂ?”

“ನಾನು ಸಾರ್ ಯಾಹೂ.”

“ಯಾಹೂ ಎಲ್ಲಿಗೋದ್ರಿ, ಬನ್ರಿ ಮಾತಾಡನ”.

“ಡೆಡ್‌ಲೈನಿಗೆ ಒಂದೆರಡು ಮಾತ್ ಹೇಳಿ ಸಾರ್.”

“ಏನು ಮಾತಾಡದ್ರಿ.. ಯಾವುದ್ಕು ಉತ್ಸಾಹ ಇಲ. ಸುಮ್ಮನೆ ತೋರಿಕೆಗೆ ಏನೇನೋ ಮಾತಾಡ್ತಿನಿ.”

“ಅದು ಗೊತ್ತು ಸಾರ್, ನಿಮ್ಮತ್ರ ಸೇವಕನಂಗಿದ್ದ ಹುಡುಗನ ಪರ ಓಟು ಕೇಳಿದರಂತೆ. ಹಿಂಸೆ ನ್ಯನಿಸಿಗಳಕ್ಕಾಗಲ್ಲ.”

“ಆದ್ರು ಕೇಳಬೇಕಲ್ಲ ಹೇಳಿ.”

“ಯಾಕ್ಸರ್ ಬಿಜೆಪಿಗಳು ನಿಮಿಗೆ ಇಂತ ಅವುಮಾನ ಮಾಡಿದ್ರು. ಬಿಜೆಪಿ ಇತಿಹಾಸದಲ್ಲಿ ಯಾರಿಗೂ ಇಂತ ಅವುಮಾನಾಗಿಲ್ಲ ಸಾ.”

“ಶೆಟ್ಟರ್‌ಗಿಂತ ಅವುಮಾನಾಗಿಲ್ಲ ಬುಡ್ರಿ.”

“ಅಂಗಂತಿರಾ?”

ಇದನ್ನೂ ಓದಿ: ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

“ಊ ಮತ್ತೆ. ಮುಖ್ಯಮಂತ್ರಿಯಾಗಿದ್ದೋರಿಗೆ ಮಿಸ್ ಕಾಲ್ ಕೊಟ್ಟು, ಇವುರು ಪೋನ್ ಮಾಡಿದಾಗ ನಿಮಗೆ ಟಿಕೆಟ್ ಇಲ್ಲ ಅಂದುಬುಟ್ಟು ಕಟ್ ಮಾಡ್ಯವುರಲ್ಲ, ಇದವು ಅವಮಾನ ಅಲವೆ?”

“ನಿಮ್ಮ ಅವುಮಾನದ ಮುಂದೆ ಅವುರದೇನೂ ಅಲ್ಲ ಸಾರ್.”

“ಅದ್ಯಂಗರೀ?”

“ನೀವು ಬಿಜೆಪಿ ಕಟ್ಟಿ ಬೆಳೆಸಿದ ಮಹಾನಾಯಕ. ಶಿವಮೊಗ್ಗದಲ್ಲಿ ಪಾರ್ಟಿಗಾಗಿ ಬಂದ್, ಗೋಲಿಬಾರು, ಲೂಟಿ ಯಲ್ಲಾನು ಮಾಡಿಸಿದ್ದಿರಿ. ಕೆ.ಹೆಚ್.ಶ್ರೀನಿವಾಸ್ ಊರಾಬುಟ್ಟೋಗಂಗೆ ಮಾಡಿದ್ದಿರಿ, ಮುಸ್ಲಿಮರ ಮದುವೆಗೂ ದುಡ್ಡುಕೊಟ್ಟಿದ್ದಿರಿ. ತಮುಳು ಜನ ಸಂಘಟಿಸಿ ಅವುರನೆಲ್ಲಾ ಬಸ್ಸಲ್ಲಿ ಸರದಿ ಪ್ರಕಾರ ತುಂಬಿಕಂಡೋಗಿ ತಮುಳು ನಾಡಿನ ತಂಜಾವ್ಯೂರು, ರಾಮೇಶ್ವರ, ಚಿದಂಬರ, ಮದುರೆ, ಪಳನಿ ಯಲ್ಲಾನು ತೋರಿಸಿಗಂಡು ಬಂದು ಸುರದ್ದಿದ್ದಿರಿ. ಹಂಗೆ ನೋಡಿದ್ರೆ ಆ ಶಿವಮೊಗ್ಗದಲ್ಲಿ ನಿಮ್ಮನ್ನ ಸೋಲಸಕ್ಕೆ ಯಾರಿಂದ್ಲೂ ಸಾಧ್ಯವಿಲ್ಲ. ಇದ್ಯಾವುದನ್ನು ಲೆಕ್ಕಕ್ಕೆ ತಗೊಳ್ದೆ, ಕೇವಲ ಸಿದ್ದರಾಮಯ್ಯನ ತಲೆ ಕಡಿತಿನಿ ಅಂದಿದ್ದ ಮಾತ್ರಕ್ಕೆ ನಿಮ್ಮ ಸೇವಕನಿಗೆ ಟಿಕೆಟ್ ಕೊಟ್ಟು ನಿಮಗಿಲ್ಲ ಅಂದರಲ್ಲಾ ಸಾರ್. ನನಗೇ ಇಷ್ಟು ಹಿಂಸೆ ಆಯ್ತಾ ಅದೆ. ನೀವ್ಯಂಗೆ ತಡ್ಕೋತಾ ಇದೀರಿ ಅನ್ನದೆ ಆಶ್ಚರ್ಯ ಸಾರ್.”

“ಅದು ಪಾರ್ಟಿ ನಿಷ್ಟೆ ಕಂಡ್ರಿ, ನನಿಗೆ ಇಲ್ಲಿವರಿಗೂ ಸಿಕ್ಕಿದೆಲ್ಲಾ ಪಾರ್ಟಿಯಿಂದ. ಪಾರ್ಟಿ ನಮ್ಮ ತಾಯಿಯಿದ್ದಂಗೆ.”

“ಪಾರ್ಟಿ ತಾಯಿಯಾದ್ರೆ, ತಂದೆ ಯಾರು ಸಾರ್?”

“ಪೊಲಿಟಿಕೆಲ್ ಪಾರ್ಟಿ ಅಂದ್ರೆ ತಾಯಿ, ಅಲ್ಲಿ ತಂದೆಯಿರಲ್ಲ”

“ಅಂದ್ರೆ ಪೊಲಿಟಿಕಲ್ ಪಾರ್ಟಿಗೆ ತಂದೆಯಿರಲ್ವ ಸಾರ್?”

“ರಿ ತಲೆಕೆಟ್ಟಂಗೆ ಮಾತಾಬ್ಯಾಡಿ. ನಮ್ಮನ್ನ ಬೆಳೆಸಿ ಸ್ಥಾನಮಾನ ಕೊಟ್ಟ ಪಾರ್ಟಿ ತಾಯಿಗೆ ಸಮಾನ ಅಂತ ನಾನು ಹೇಳಿದ್ದು.”

“ನನಿಗೇನೂ ಈ ಹೋಲಿಕೆನೆ ಸರಿಯಿಲ್ಲ ಸಾರ್. ಅಪ್ರಭುದ್ಧ ಮೂರ್ಖರು ಮಾತ್ರ ಇಂತ ಹೋಲಿಕೆ ಮಾಡಬಲ್ಲರು.”

“ಯಾಕ್ರಿ ಅಂಗಂತಿರಿ?”

“ಮತ್ತಿನ್ನೇನು ಸಾರ್, ಹೆತ್ತು ಹಾಲು ಕುಡಿಸಿ ಬೆಳೆಸೋ ತಾಯಿ ಎಲ್ಲೀ, ಹಾದಿ ಬೀದಿಲಿ ಸಿಕ್ಕಿದೋರ ಹಿಡಕಂಡು ಬಂದು, ಚಡ್ಡಿ ಇಕ್ಕಿ, ಲಾಟಿ ಕೊಟ್ಟು ಮಹೊಡಿ ಸಾಬರಿಗೆ ಅನ್ನೂ ಪಾರ್ಟಿ ಎಲ್ಲಿ? ಅಂಥ ಪಾರ್ಟಿನ ದೇವತೆಯಂತ ತಾಯಿಗೋಲುಸ್ತಿರಲ್ಲಾ. ಆಯ್ತು ನಿಮ್ಮ ಮಾತನ್ನ ಒಪ್ಪಿಗಳನ. ಇವತ್ತು ನಿಮ್ಮ ಕತೆ ಏನಾಗಿದೆ?”

“ಏನು ಆಗಬಾರದ್ದಾಗಿಲ್ಲ ಕಂಡ್ರೀ.”

“ಸಾರ್ ನಿಮಗೆ ಯಂಗೇಳಬೇಕು ಅಂತ ಗೊತ್ತಾಯ್ತಯಿಲ್ಲ. ಬಿಜೆಪಿಲಿ ಚುನಾವಣೆಗೆ ನಿಲ್ಲಕ್ಕೆ ನಿಮ್ಮಷ್ಟು ಯೋಗ್ಯ ಕ್ಯಾಂಡೇಟ್ ಇರಲಿಲ್ಲ. ಅವುರು ನಿರಾಕರಿಸಿದ ತಕ್ಷಣನೆ ಶೆಟ್ಟರ್ ತರ ತೀರ್ಮಾನ ತಗೊಬೇಕಿತ್ತು.”

“ಬ್ಯಾರೆ ಪಾರ್ಟಿಯೋರು ನನ್ನನ್ನ ಸೇರಿಸ್ರಿರಲಿಲ್ಲ ಕಂಡ್ರಿ.”

“ಜೆಡಿಎಸ್‌ನೋರು ಸೇರಿಸ್ತಿದ್ರು ಸಾರ್. ಜೆಡಿಎಸ್ ಟೀಮನ್ನ ದಂಡೂಪಾಳ್ಯದ ಗ್ಯಾಂಗು ಅಂದಿದ್ದ ಆಯನೂರ್ ಮಂಜುನಾಥನ್ನೆ ಸೇರಿಸಿಕೊಂಡ್ರು. ಅಂಥದರಲ್ಲಿ ಕುಮಾರಣ್ಣ ನಿಮ್ಮನ್ನ ಬುಡತಿದ್ರೆ..”

“ಬುಡತಿರಲಿಲ್ಲ ನಿಜ. ಅಂಗೆ ನೋಡಿದ್ರೆ ಕುಮಾರಣ್ಣ ಈ ಹಿಂದೆ ಎರಡು ಬಾರಿ ನಾನೇಳಿದೋರಿಗೆ ಟಿಕೆಟ್ ಕೊಟ್ಟವುರೆ. ಅಂಗಂತ ನಾನು ಪಾರ್ಟಿ ಬುಡಕ್ಕಾಗಲ್ಲ. ಈಗ ನಾನು ಚುನಾವಣಾ ರಾಜಕಾರಣದಿಂದ ದೂರ. ಮುಂದೆ ಪಾರ್ಟಿ ಕೆಲಸ ಮಾಡಿಕಂಡೋಯ್ತಿನಿ”

“ಪಾರ್ಟಿ ಕೆಲಸನ ನಿಮ್ಮಿಂದ ಯಾರೂ ನಿರೀಕ್ಷೆ ಮಾಡಿಲ್ಲ.”

“ಯಾಕ್ರಿ ಅಂಗಂತಿರಿ?”

“ನಿಮ್ಮ ಜಾಗಕ್ಕೆ ನಿಮಗಿಂತ್ಲೂ ಭೀಕರ ವ್ಯಕ್ತಿನ ತಂದಾಗ್ಯದೆ. ಮುಂದೆ ಅವುಂದೆ ರಾಜ್ಯಭಾರ. ಅವುರು ಆವರಿಸಿಕೊಂಡ ಜಾಗದಲ್ಲಿ ನೀವು ಅಪ್ಪಮಕ್ಕಳಿಗೇನೂ ಕೆಲಸಿಲ್ಲ. ನಿಮ್ಮ ಈ ನಿವೃತ್ತಿ ನಂತರ ನಿಮ್ಮ ಮಗ ನಿಮ್ಮ ಜೊತೆ ಬಂದು ಸೇರಿಕಳ್ತನೆ. ನೀವು ಮೂಲೆಗುಂಪಾಗದ್ರಲ್ಲಿ ಈಗಾಗ್ಲೆ ಮೂಲೆಗುಂಪಾಗಿರೊ ಎಡೂರಪ್ಪನ ಕೈವಾಡನೂ ಇದೆ.”

“ಅವುರ ಕೈವಾಡ ಯಾಕಿರತ್ರಿ?”

“ಸಾರ್ ನಿಜ ಹೇಳಿ. ನಿಮಗೆ ಎಡೂರಪ್ಪ ಅಂದ್ರೆ ಅಷ್ಟಕಷ್ಟೆ. ಇನ್ನ ರಾಘವೇಂದ್ರನ ಗೆಲುವು ನಿಮಗೆ ಬೇಕಿರಲಿಲ್ಲ. ಅಂಗೇನೆ ಆ ವಿಜಯೇಂದ್ರನ ಅಭ್ಯುದಯ ನಿಮಗೆ ಬೇಕಿಲ್ಲ, ಇದು ಗೊತ್ತಾಗಿ ಎಡೂರಪ್ಪ ನಮ್ಮ ಕತೆ ಮುಗದರಷ್ಟೆ ಹೋಯ್ತು, ಈಶ್ವರಪ್ಪನ ಕತೆನೂ ಮುಗಿಲಿ ಅಂತ ಕಾಯ್ತಿದ್ರು ಸಾರ್.”

“ಅದು ನನಿಗೂ ಗೊತ್ತು ಕಂಡ್ರಿ. ನಾನೇನು ಅಷ್ಟು ದಡ್ಡ ಅಲ್ಲ.”

“ಆದ್ರು ನೀವು ಅಸಹಾಯಕರಾಗಿ ಅಂತ್ಯವಾಗ್ತಿರಿ ಸಾರ್.”

“ಹ್ಯಂಗ್ರೀ?”

“ಎಡೂರಪ್ಪನ ಮಕ್ಕಳು ಎಂ.ಪಿ ಎಂ.ಎಲ್.ಎ ಆಯ್ತರೆ. ಸಿಟ್ಟು ಸ್ವಾಭಿಮಾನ ತೋರಿದ ಶೆಟ್ಟರ್ ಎಂ.ಎಲ್.ಎ ಆಯ್ತರೆ. ನೀವು ಅಪ್ಪಾ ಮಗ ಏನೂ ಆಗಲವಲ್ಲ ಸಾ.”

“ಆಗದಿದ್ರೆ ಕತ್ತೆ ಬಾಲ, ಸಂಘದ ಕಾರ್ಯಕರ್ತರಾಗಿರ್ತಿವಿ.”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...