Homeಕಥೆ"ಗಂಧರ್ವಸೇನಾ ಸತ್ತಾಗ?" : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

“ಗಂಧರ್ವಸೇನಾ ಸತ್ತಾಗ?” : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

- Advertisement -
- Advertisement -

ರಾಜ ತನ್ನ `ಪರಿವಾರ’ ಸಮೇತ ಒಡ್ಡೋಲಗದಲ್ಲಿ ಬ್ಯುಸಿಯಾಗಿದ್ದ. ಅಷ್ಟೊತ್ತು ಮಿಸ್ಸಿಂಗ್ ಆಗಿದ್ದ ಮಂತ್ರಿ, ಜೋರಾಗಿ ರೋಧಿಸುತ್ತ ಕಣ್ಣೀರ ಧಾರೆ ಸುರಿಸುತ್ತ ಓಡೋಡಿ ಒಡ್ಡೋಲಗ ಪ್ರವೇಶಿಸಿದ. ಮಂತ್ರಿಯ ಸ್ಥಿತಿ ನೋಡಿ ರಾಜನಿಗೆ ಗಾಬರಿಯಾಯ್ತು. “ಏನಾಯ್ತು ಮಂತ್ರಪ್ಪ. ಅದ್ಯಾಕಿಂಗೆ ಸಣ್ಣಮಕ್ಕಳ ಥರ ಅತ್ಕೊಂಡು ಬತ್ತಾ ಇದೀಯ? ಮನೆಯಲ್ಲಿ ಹೆಂಡ್ರು, ಮಕ್ಕಳು ಕ್ಷೇಮವೆ” ರಾಜ ವಿಚಾರಿಸಿದ. “ಅಯ್ಯೋ ಏನಂಥಾ ಹ್ಯೇಳೋದು ಮಾರಾಜುರೆ. ಗಂಧರ್ವ ಸೇನಾ ಸತ್ತೋದ್ನಂತೆ!” ಮಂತ್ರಿ ತನ್ನ ಸಂಕಟದ ಮೂಲವನ್ನು ಮುಂದಿಟ್ಟ.

“ಅಯ್ಯಯ್ಯೋ, ಎಂಥಾ ಸುದ್ದಿ ಹ್ಯೇಳ್ತಾ ಇದೀಯ ಮಂತ್ರಪ್ಪ. ಗಂಧರ್ವ ಸೇನಾ ಸತ್ತೋದ್ನಾ!!!” ಈಗ ಮಹಾರಾಜ ಕೂಡಾ ಮಂತ್ರಿಗೆ ಕೋರಸ್ ಕೊಟ್ಟು ರೋಧಿಸಲು ಶುರು ಮಾಡಿದ. ರಾಜನೆ ಕಣ್ಣೀರಿಟ್ಟ ಮೇಲೆ ಕೇಳಬೇಕೆ. ಇಡೀ ಒಡ್ಡೋಲಗವೆ

“ಅಯ್ಯಯ್ಯೋ, ಗಂಧರ್ವ ಸೇನಾ ಹೋಗ್ಬುಟ್ಟೆಯಾ” ಎಂಬ ರೋಧನೆಯಲ್ಲಿ ಮುಳುಗಿಹೋಯ್ತು.

ಹಾರ್ಟ್ ಬ್ರೇಕಿಂಗ್ ಸುದ್ದಿ ಕೇಳಿದಮೇಲೆ ಒಡ್ಡೋಲಗ ನಡೆಸುವ ಯಾವ ಉಮೇದಿಯೂ ರಾಜನಿಗೆ ಉಳಿಯಲಿಲ್ಲ. ರಾಜ್ಯದಲ್ಲಿ ಇಪ್ಪತ್ತೊಂದು ದಿನಗಳ ಶೋಕಾಚರಣೆ ಘೋಷಿಸಿ, ದುಃಖತಪ್ತ ಮೋರೆಯಲ್ಲಿ ಅಂತಃಪುರದ ಕಡೆ ನಡೆದ.

ಒಡ್ಡೋಲಗದಲ್ಲಿರಬೇಕಿದ್ದ ರಾಜ ಹೀಗೆ ಹೊತ್ತಲ್ಲದಹೊತ್ತಲ್ಲಿ ಅಂತಃಪುರಕ್ಕೆ ಧಾವಿಸಿದ್ದನ್ನು, ಅದರಲ್ಲು ದುಖತಪ್ತನಾಗಿ ರಾಣಿನಿವಾಸ ಹೊಕ್ಕಿದ್ದನ್ನು ನೋಡಿ ಅವನ ರಾಣಿಯರಿಗೆ ಅಚ್ಚರಿಯಾಯ್ತು. ಪಟ್ಟದರಸಿ ರಾಜನ ಬಳಿ ಬಂದು “ಯಾಕೆ ಮಾಸ್ವಾಮಿ, ಶ್ಯಾನೆ ಬ್ಯಾಸರದಲ್ಲಿ ಇದೀರಿ. ಮಟಮಟ ಮಧ್ಯಾನುವೆ ಮಂಚದ ಮನೆಯತ್ತ ಬಂದಿದೀರಿ. ಏನ್ಸಮಾಚಾರ?” ತುಸು ಅಳುಕಿನಲ್ಲೆ ಕೇಳಿದಳು. “ಏನಂಥಾ ಹ್ಯೇಳ್ಳಿ ಮಾರಾಣಿ, ಗಂಧರ್ವಸೇನಾ ಸತ್ತೋದ್ನಂತೆ” ರಾಜನ ಮಾತಿನ್ನು ಬಾಯೊಳಗೇ ಇತ್ತೇನೊ, ಮಹಾರಾಣಿ ದೊಪ್ಪನೆ ನೆಲಕ್ಕೆ ಕುಸಿದುಬಿದ್ದಳು. “ಏನಂದ್ರಿ ಪ್ರಭು, ಗಂಧರ್ವಸೇನ ಸತ್ತೋದ್ನ? ಅಯ್ಯೋ ದುರ್ವಿಧಿಯೇ?..!” ಮಹಾರಾಣಿ ಚಿತ್ರವಿಚಿತ್ರವಾಗಿ ರೋಧಿಸುತ್ತ ಕೋಣೆ ಹೊಕ್ಕು ರಾಜನ ಇನ್ನುಳಿದ ಮಡದಿಯರು, ಉಪಮಡದಿಯರಿಗೆ ಗಂಧರ್ವಸೇನಾ ಮೃತನಾದ ಸುದ್ದಿ ಅರುಹಿದಳು. ಇಡಿ ಅಂತಃಪುರವೆ ಶೋಕದ ಕಡಲಲ್ಲಿ ಮುಳುಗಿತು. ಕಿರಿಯರಸಿ ತನ್ನ ಖಾಸಗಿ ಕೋಣೆಯಲ್ಲಿ ಮುಸಿಮುಸಿ ಅಳುತ್ತಿರೋದನ್ನ ಕಂಡ ಆಕೆಯ ಸೇವಕಿಗೆ ಕುತೂಹಲ ಹೆಚ್ಚಾಗಿ ಕೇಳಿದಳು, “ಯಾಕೆ ರಾಣ್ಯವ್ವ ಹಿಂಗ ಅಳಾಕತ್ತಿದ್ದೀಯ? ಅಂತದ್ದೇನಾತಾ?”.

“ಏನಂಥಾ ಹ್ಯೇಳ್ಲೇ ಗೆಳತಿ, ಗಂಧರ್ವಸೇನಾ ಸತ್ತೋದ್ನಂತೆ!” ಕಿರಿಯರಸಿಯ ಶೋಕಸುದ್ದಿ ಕೇಳಿ ಸೇವಕಿಗು ಆಘಾತವಾಯ್ತು. “ಹೌದೇನೆ ನನ್ನವ್ವ. ಪಾಪಾ, ಹಿಂಗಾಗಬಾರದಿತ್ತು ಬಿಡು. ಅದಂಗಿರುಲಿ. ಈ ಗಂಧರ್ವಸೇನಾ ಯಾರು? ಅವ ನಿನುಗೆ, ಮಾರಾಜುಗೆ ಏನು ಸಮಂದ ಆಗಬೇಕಾ?” ಸೇವಕಿ ತನ್ನ ಅನುಮಾನ ತೆರೆದಿಟ್ಟಳು. ಕಿರಿಯರಸಿಗೆ ಜ್ಞಾನೋದಯ ಆದಂತಾಯ್ತು.

`ಹೌದು ಯಾರು ಈ ಗಂಧರ್ವಸೇನ? ನಾನ್ಯಾಕಿಷ್ಟು ಅಳ್ತಾ ಇದೀನಿ’. ತನ್ನ ಗೊಂದಲ ಬಗೆಹರಿಸಿಕೊಳ್ಳಲು ಪಟ್ಟದರಸಿಯ ಬಳಿ ಬಂದು ಗಂಧರ್ವಸೇನನ ಬಗ್ಗೆ ವಿಚಾರಿಸಿದಳು. ಆಕೆಗೂ ನಯಾಪೈಸೆಯ ಮಾಹಿತಿಯಿಲ್ಲ. ಆದರು ಲೀಟರುಗಟ್ಟಲೆ ಕಣ್ಣೀರು ಸುರಿಸಿ ರೋಧಿಸಿದ್ದಾಗಿತ್ತು. ರಾಜನ ಮುಂದೆ ನಿಂತ ಆಕೆ

“ಮಾರಾಜ, ಆಗ್ಲೆ ಗಂಧರ್ವಸೇನ ಸತ್ತೋದ ಅಂದ್ರಲ್ಲ, ಯಾರು ಆ ಪುಣ್ಯಾತ್ಮ? ನಿಮ್ಮ ಆತ್ಮೀಯ ಗೆಣೆಕಾರನೆ, ಹತ್ತಿರದ ಸಮಂಧಿಕನೆ?”. ಇನ್ನೂ ಶೋಕಸಾಗರದಲ್ಲೆ ಬಡಿದಾಡುತ್ತ ಬಿದ್ದುಕೊಂಡಿದ್ದ ರಾಜನಿಗೆ ರಾಣಿಯ ಪ್ರಶ್ನೆ ಕೇಳಿ ಜ್ಯೋತಿಯೊಂದು ದಿಗ್ಗನೆ ಜ್ವಲಿಸಿದಂತಾಯ್ತು. `ಅರೆರೆ, ಹೌದಲ್ಲವಾ? ಯಾರು ಈ ಗಂಧರ್ವಸೇನಾ? ಮಂತ್ರಿಯನ್ನು ವಿಚಾರಿಸದೆ ಇಷ್ಟು ವ್ಯರ್ಥವಾಗಿ ರೋಧಿಸಿದೆನಲ್ಲ. ಅವನನ್ನೆ ಕೇಳಿಬಿಡೋಣ’ ರಾಜನ ಸ್ವಗತ ಥಟ್ಟನೆ ಅನುಷ್ಟಾನಕ್ಕೆ ಬಂದು ಮಂತ್ರಿಗೆ ಕರೆ ಹೋಯ್ತು.

ಮಂತ್ರಿ ಆಗಮಿಸಿದ. “ಅಲ್ಲಾ ಮಂತ್ರಪ್ಪ, ಅವಾಗ್ಲೆ ಗಂಧರ್ವಸೇನಾ ಸತ್ತೋದ ಅಂತ ಗೋಳಾಡ್ತಾ ಹ್ಯೇಳಿದ್ಯಲ್ಲಪ್ಪ, ಯಾರು ಆ ಗಂಧರ್ವಸೇನ?”. “ಗೊತ್ತಿಲ್ಲ ಮಾಸ್ವಾಮಿ” ಮಂತ್ರಿ ಪ್ರಾಮಾಣಿಕವಾಗಿ ನುಡಿದ, “ಒಡ್ಡೋಲುಗಕ್ಕೆ ತಡವಾಯ್ತು ಅಂತ ಓಡೋಡಿ ಬರ್ತಿದ್ನಾ, ಅವಾಗ ಅಗಸೆ ಬಾಗುಲತ್ರ ನಮ್ಮ ಸೇನಾಧಿಪತಿ ಅತ್ಕಂಡು ನಿಂತಿದ್ದ. ಏನಾಯ್ತು ಅಂತ ಕೇಳಿದ್ದುಕ್ಕೆ, ಗಂಧರ್ವಸೇನ ಸತ್ತೋದ ಅಂತ ಹ್ಯೇಳಿ ಜೋರಾಗಿ ಅತ್ತ. ಅದುಕ್ಕೆ ನಾನೂ ಅಳ್ತಾ ಬಂದು ನಿಮುಗೆ ಸುದ್ದಿ ಮುಟ್ಟಿಸಿದೆ ಆಟೆಯ”.

ಕೂಡಲೆ ಸೇನಾ ಅಧಿಪತಿಗೆ ಕರೆ ಹೋಯ್ತು. “ಏನಯ್ಯಾ ಸೇನಾಧಿಪತಿ, ಮಾಮಂತ್ರಿ ಹತ್ರ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ಗೋಳಾಡಿದ್ಯಂತಲ್ಲ. ಯಾರಯ್ಯ ಆ ಗಂಧರ್ವ ಸೇನಾ?”.

“ಗೊತ್ತಿಲ್ಲ ಮಾಪ್ರಬು. ಬ್ಯೆಳಿಗ್ಗೆ ಅಗಸೆ ಬಾಗುಲತ್ರ ನಿಂತಿದ್ನಾ, ಊರುಗುಡಿ ಪೂಜಾರಪ್ಪ ಅತ್ಕಂತ ಗುಡಿ ಕಡೆ ಹ್ವೊಂಟಿದ್ದ. ಯಾಕಪ್ಪಾ ಅಂತ ಕ್ಯೇಳಿದ್ದುಕ್ಕೆ, ಗಂಧರ್ವಸೇನ ಸತ್ತೋದ ಅಂತ ಹೊಯ್ಕೊಂತ ಹ್ವೋದ. ಅದುಕ್ಕೆ ನಾನುವೆ ಅತ್ಕಂತ ನಿಂತಿದ್ದೆ” ಸೇನಾಧಿಪತಿ ಕೊಟ್ಟ ಮಾಹಿತಿ ಇಷ್ಟು. ಕೂಡಲೇ ಪೂಜಾರಪ್ಪನಿಗೆ ರಾಜನ ಕರೆ ಹೋಯ್ತು.

“ಏನು ಅಯ್ನೋರೆ, ಬ್ಯೆಳಿಗ್ಗೆ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ಅಳ್ತಿದ್ರಂತಲ್ಲ. ಯಾರು ಆ ಗಂಧರ್ವಸೇನಾ?” ರಾಜ ಪ್ರಶ್ನಿಸಿದ.

“ಗೊತ್ತಿಲ್ಲ ಮಾರಾಜ. ಬ್ಯೆಳಿಗ್ಗೆ ದ್ಯೇವುಸ್ಥಾನುಕ್ಕೆ ಪೂಜೆಗೆ ಅಂತ ಹೊಂಟ್ನಾ. ನನ್ನ ಹೆಂಡ್ರು ಸಿಕ್ಕಾಪಟ್ಟೆ ಅಳ್ತಾ ಇದ್ಳು. ಕ್ಯೇಳಿದ್ದುಕ್ಕೆ ಗಂಧರ್ವಸೇನ ಸತ್ತೋದ ಅಂದ್ಲು. ಅದುಕ್ಕೆ ನಾನೂ ಅತ್ಕಂತ ಹೊಂಟಿದ್ದೆ” ಪೂಜಾರಪ್ಪ ಪ್ರತಿಕ್ರಿಯಿಸಿದ.

ಯಥಾ ಪ್ರಕಾರ ಪೂಜಾರಪ್ಪನ ಹೆಂಡತಿಯನ್ನು ಕರೆದು ಕೇಳಲಾಯ್ತು. “ನನಿಗೆ ಗೊತ್ತಿಲ್ಲ ಸ್ವಾಮಿ. ಬೆಳಿಗ್ಗೆ ಮೈಲಿಗೆ ಬಟ್ಟೆ ಇಸ್ಕೊಂಡು ಹೋಗಕ್ಕೆ ಅಂತ ಅಗಸರವನ ಹೆಂಡತಿ ಬಂದಿದ್ಳಾ, ಅವುಳು ತುಂಬಾ ಗೋಳಾಡ್ತಾ ಗಂಧರ್ವಸೇನ ಸತ್ತೋದ ಅಂತ ಹ್ಯೇಳಿದ್ಳು. ಅದುಕ್ಕೆ ನಾನೂ ಅತ್ತೆ.”

ರಾಜನಿಗೆ ಕುತೂಹಲ ಅದೆಷ್ಟು ಹೆಚ್ಚಾಗಿಹೋಯ್ತೆಂದರೆ, ಈ ಸಲ ಅಗಸರವನ ಹೆಂಡತಿಯನ್ನು ಕರೆಸುವ ತಾಳ್ಮೆಯೂ ಇಲ್ಲದೆ, ತನ್ನ `ಪರಿವಾರ’ ಸಮೇತ ಅಗಸನ ಮನೆಯತ್ತ ನಡೆದ. ಮನೆಯಲ್ಲಿ ದಂಪತಿ ಇರಲಿಲ್ಲ, ಕಾಯಕದ ಸಲುವಾಗಿ ಹೊಳೆದಂಡೆ ಬಳಿ ಹೋಗಿದ್ದರು. ಅಲ್ಲಿಗೇ ಸವಾರಿ ಹೊರಟಿತು. ಕೊನೆಗೂ ಆ ಹೆಂಗಸು ಸಿಕ್ಕಳು. “ಏನಮ್ಮಾ, ಬ್ಯೆಳಿಗ್ಗೆ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ತುಂಬಾ ಅಳ್ತಿದ್ದ್ಯಂತೆ. ಯಾರು ಆ ಪುಣ್ಯಾತ್ಮ?” ಮಹಾರಾಜ ಪ್ರಶ್ನಿಸಿದ.“ಅಯ್ಯಾ ಸಾಮಿ, ಮೊನ್ನೆಯಿನು ಅರಾಮಾಗಿದ್ದ ಸಾಮಿ. ಬಾಳ ಪಿರೂತಿಯಿಂದ ಸಾಕಿದ್ದೆ. ನಿನ್ನೆ ನಮ್ಮುನ್ನೆಲ್ಲ ಬಿಟ್ಟೋದ. ನ್ಯೆನಿಸಿಕಂಡ್ರೆ ಅಳು ಬತ್ತದೆ ಸಾಮಿ” ಮತ್ತೆ ಆ ಹೆಂಗಸಲ್ಲಿ ದುಖ ಉಮ್ಮಳಿಸಿತು, ಕಣ್ಣೀರಿಡಲು ಶುರು ಮಾಡಿದಳು.

“ಯಾರಮ್ಮ, ನಿನ್ನ ಮಗನಾ ಅವನು?” ರಾಜ ಪ್ರಶ್ನಿಸಿದ.

“ಮಗನಿಗಿಂತ ಜಾಸ್ತಿ ಪಿರೂತಿಯಿಂದ ಸಾಕಿದ್ದೆ ಸಾಮಿ. ನನ್ನ ಕತ್ತೆಯ ಹೆಸ್ರು ಅದು?.!!!”

ಆ ಹೆಂಗಸಿನ ಉತ್ತರ ಕೇಳಿಸಿಕೊಂಡ ತರುವಾಯ ಅಲ್ಲಿ ನೆರೆದಿದ್ವರಿಗೆಲ್ಲ ತಮ್ಮ ಮುಠ್ಠಾಳತನದ ಅರಿವಾಗಿ ಮೂರ್ಛೆ ಹೋಗುವುದೊಂದು ಬಾಕಿ. ಇಪ್ಪತ್ತೊಂದು ದಿನ ಶೋಕಾಚಾರಣೆ ಘೋಷಿಸಿದ್ದ ರಾಜ ಮೆತ್ತಗೆ ಅಲ್ಲಿಂದ ನುಣುಚಿಕೊಂಡು ಅರಮನೆಯತ್ತ ದೌಡಾಯಿಸಿದ.

(ಸೂಚನೆ: ಇದೊಂದು ಬಂಗಾಳಿ ಜನಪದ ಕಥೆ. ಪ್ರಸ್ತುತ ಯಾವುದೇ ವಿದ್ಯಮಾನ, ವ್ಯಕ್ತಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...