Homeಕಥೆ"ಗಂಧರ್ವಸೇನಾ ಸತ್ತಾಗ?" : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

“ಗಂಧರ್ವಸೇನಾ ಸತ್ತಾಗ?” : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

- Advertisement -
- Advertisement -

ರಾಜ ತನ್ನ `ಪರಿವಾರ’ ಸಮೇತ ಒಡ್ಡೋಲಗದಲ್ಲಿ ಬ್ಯುಸಿಯಾಗಿದ್ದ. ಅಷ್ಟೊತ್ತು ಮಿಸ್ಸಿಂಗ್ ಆಗಿದ್ದ ಮಂತ್ರಿ, ಜೋರಾಗಿ ರೋಧಿಸುತ್ತ ಕಣ್ಣೀರ ಧಾರೆ ಸುರಿಸುತ್ತ ಓಡೋಡಿ ಒಡ್ಡೋಲಗ ಪ್ರವೇಶಿಸಿದ. ಮಂತ್ರಿಯ ಸ್ಥಿತಿ ನೋಡಿ ರಾಜನಿಗೆ ಗಾಬರಿಯಾಯ್ತು. “ಏನಾಯ್ತು ಮಂತ್ರಪ್ಪ. ಅದ್ಯಾಕಿಂಗೆ ಸಣ್ಣಮಕ್ಕಳ ಥರ ಅತ್ಕೊಂಡು ಬತ್ತಾ ಇದೀಯ? ಮನೆಯಲ್ಲಿ ಹೆಂಡ್ರು, ಮಕ್ಕಳು ಕ್ಷೇಮವೆ” ರಾಜ ವಿಚಾರಿಸಿದ. “ಅಯ್ಯೋ ಏನಂಥಾ ಹ್ಯೇಳೋದು ಮಾರಾಜುರೆ. ಗಂಧರ್ವ ಸೇನಾ ಸತ್ತೋದ್ನಂತೆ!” ಮಂತ್ರಿ ತನ್ನ ಸಂಕಟದ ಮೂಲವನ್ನು ಮುಂದಿಟ್ಟ.

“ಅಯ್ಯಯ್ಯೋ, ಎಂಥಾ ಸುದ್ದಿ ಹ್ಯೇಳ್ತಾ ಇದೀಯ ಮಂತ್ರಪ್ಪ. ಗಂಧರ್ವ ಸೇನಾ ಸತ್ತೋದ್ನಾ!!!” ಈಗ ಮಹಾರಾಜ ಕೂಡಾ ಮಂತ್ರಿಗೆ ಕೋರಸ್ ಕೊಟ್ಟು ರೋಧಿಸಲು ಶುರು ಮಾಡಿದ. ರಾಜನೆ ಕಣ್ಣೀರಿಟ್ಟ ಮೇಲೆ ಕೇಳಬೇಕೆ. ಇಡೀ ಒಡ್ಡೋಲಗವೆ

“ಅಯ್ಯಯ್ಯೋ, ಗಂಧರ್ವ ಸೇನಾ ಹೋಗ್ಬುಟ್ಟೆಯಾ” ಎಂಬ ರೋಧನೆಯಲ್ಲಿ ಮುಳುಗಿಹೋಯ್ತು.

ಹಾರ್ಟ್ ಬ್ರೇಕಿಂಗ್ ಸುದ್ದಿ ಕೇಳಿದಮೇಲೆ ಒಡ್ಡೋಲಗ ನಡೆಸುವ ಯಾವ ಉಮೇದಿಯೂ ರಾಜನಿಗೆ ಉಳಿಯಲಿಲ್ಲ. ರಾಜ್ಯದಲ್ಲಿ ಇಪ್ಪತ್ತೊಂದು ದಿನಗಳ ಶೋಕಾಚರಣೆ ಘೋಷಿಸಿ, ದುಃಖತಪ್ತ ಮೋರೆಯಲ್ಲಿ ಅಂತಃಪುರದ ಕಡೆ ನಡೆದ.

ಒಡ್ಡೋಲಗದಲ್ಲಿರಬೇಕಿದ್ದ ರಾಜ ಹೀಗೆ ಹೊತ್ತಲ್ಲದಹೊತ್ತಲ್ಲಿ ಅಂತಃಪುರಕ್ಕೆ ಧಾವಿಸಿದ್ದನ್ನು, ಅದರಲ್ಲು ದುಖತಪ್ತನಾಗಿ ರಾಣಿನಿವಾಸ ಹೊಕ್ಕಿದ್ದನ್ನು ನೋಡಿ ಅವನ ರಾಣಿಯರಿಗೆ ಅಚ್ಚರಿಯಾಯ್ತು. ಪಟ್ಟದರಸಿ ರಾಜನ ಬಳಿ ಬಂದು “ಯಾಕೆ ಮಾಸ್ವಾಮಿ, ಶ್ಯಾನೆ ಬ್ಯಾಸರದಲ್ಲಿ ಇದೀರಿ. ಮಟಮಟ ಮಧ್ಯಾನುವೆ ಮಂಚದ ಮನೆಯತ್ತ ಬಂದಿದೀರಿ. ಏನ್ಸಮಾಚಾರ?” ತುಸು ಅಳುಕಿನಲ್ಲೆ ಕೇಳಿದಳು. “ಏನಂಥಾ ಹ್ಯೇಳ್ಳಿ ಮಾರಾಣಿ, ಗಂಧರ್ವಸೇನಾ ಸತ್ತೋದ್ನಂತೆ” ರಾಜನ ಮಾತಿನ್ನು ಬಾಯೊಳಗೇ ಇತ್ತೇನೊ, ಮಹಾರಾಣಿ ದೊಪ್ಪನೆ ನೆಲಕ್ಕೆ ಕುಸಿದುಬಿದ್ದಳು. “ಏನಂದ್ರಿ ಪ್ರಭು, ಗಂಧರ್ವಸೇನ ಸತ್ತೋದ್ನ? ಅಯ್ಯೋ ದುರ್ವಿಧಿಯೇ?..!” ಮಹಾರಾಣಿ ಚಿತ್ರವಿಚಿತ್ರವಾಗಿ ರೋಧಿಸುತ್ತ ಕೋಣೆ ಹೊಕ್ಕು ರಾಜನ ಇನ್ನುಳಿದ ಮಡದಿಯರು, ಉಪಮಡದಿಯರಿಗೆ ಗಂಧರ್ವಸೇನಾ ಮೃತನಾದ ಸುದ್ದಿ ಅರುಹಿದಳು. ಇಡಿ ಅಂತಃಪುರವೆ ಶೋಕದ ಕಡಲಲ್ಲಿ ಮುಳುಗಿತು. ಕಿರಿಯರಸಿ ತನ್ನ ಖಾಸಗಿ ಕೋಣೆಯಲ್ಲಿ ಮುಸಿಮುಸಿ ಅಳುತ್ತಿರೋದನ್ನ ಕಂಡ ಆಕೆಯ ಸೇವಕಿಗೆ ಕುತೂಹಲ ಹೆಚ್ಚಾಗಿ ಕೇಳಿದಳು, “ಯಾಕೆ ರಾಣ್ಯವ್ವ ಹಿಂಗ ಅಳಾಕತ್ತಿದ್ದೀಯ? ಅಂತದ್ದೇನಾತಾ?”.

“ಏನಂಥಾ ಹ್ಯೇಳ್ಲೇ ಗೆಳತಿ, ಗಂಧರ್ವಸೇನಾ ಸತ್ತೋದ್ನಂತೆ!” ಕಿರಿಯರಸಿಯ ಶೋಕಸುದ್ದಿ ಕೇಳಿ ಸೇವಕಿಗು ಆಘಾತವಾಯ್ತು. “ಹೌದೇನೆ ನನ್ನವ್ವ. ಪಾಪಾ, ಹಿಂಗಾಗಬಾರದಿತ್ತು ಬಿಡು. ಅದಂಗಿರುಲಿ. ಈ ಗಂಧರ್ವಸೇನಾ ಯಾರು? ಅವ ನಿನುಗೆ, ಮಾರಾಜುಗೆ ಏನು ಸಮಂದ ಆಗಬೇಕಾ?” ಸೇವಕಿ ತನ್ನ ಅನುಮಾನ ತೆರೆದಿಟ್ಟಳು. ಕಿರಿಯರಸಿಗೆ ಜ್ಞಾನೋದಯ ಆದಂತಾಯ್ತು.

`ಹೌದು ಯಾರು ಈ ಗಂಧರ್ವಸೇನ? ನಾನ್ಯಾಕಿಷ್ಟು ಅಳ್ತಾ ಇದೀನಿ’. ತನ್ನ ಗೊಂದಲ ಬಗೆಹರಿಸಿಕೊಳ್ಳಲು ಪಟ್ಟದರಸಿಯ ಬಳಿ ಬಂದು ಗಂಧರ್ವಸೇನನ ಬಗ್ಗೆ ವಿಚಾರಿಸಿದಳು. ಆಕೆಗೂ ನಯಾಪೈಸೆಯ ಮಾಹಿತಿಯಿಲ್ಲ. ಆದರು ಲೀಟರುಗಟ್ಟಲೆ ಕಣ್ಣೀರು ಸುರಿಸಿ ರೋಧಿಸಿದ್ದಾಗಿತ್ತು. ರಾಜನ ಮುಂದೆ ನಿಂತ ಆಕೆ

“ಮಾರಾಜ, ಆಗ್ಲೆ ಗಂಧರ್ವಸೇನ ಸತ್ತೋದ ಅಂದ್ರಲ್ಲ, ಯಾರು ಆ ಪುಣ್ಯಾತ್ಮ? ನಿಮ್ಮ ಆತ್ಮೀಯ ಗೆಣೆಕಾರನೆ, ಹತ್ತಿರದ ಸಮಂಧಿಕನೆ?”. ಇನ್ನೂ ಶೋಕಸಾಗರದಲ್ಲೆ ಬಡಿದಾಡುತ್ತ ಬಿದ್ದುಕೊಂಡಿದ್ದ ರಾಜನಿಗೆ ರಾಣಿಯ ಪ್ರಶ್ನೆ ಕೇಳಿ ಜ್ಯೋತಿಯೊಂದು ದಿಗ್ಗನೆ ಜ್ವಲಿಸಿದಂತಾಯ್ತು. `ಅರೆರೆ, ಹೌದಲ್ಲವಾ? ಯಾರು ಈ ಗಂಧರ್ವಸೇನಾ? ಮಂತ್ರಿಯನ್ನು ವಿಚಾರಿಸದೆ ಇಷ್ಟು ವ್ಯರ್ಥವಾಗಿ ರೋಧಿಸಿದೆನಲ್ಲ. ಅವನನ್ನೆ ಕೇಳಿಬಿಡೋಣ’ ರಾಜನ ಸ್ವಗತ ಥಟ್ಟನೆ ಅನುಷ್ಟಾನಕ್ಕೆ ಬಂದು ಮಂತ್ರಿಗೆ ಕರೆ ಹೋಯ್ತು.

ಮಂತ್ರಿ ಆಗಮಿಸಿದ. “ಅಲ್ಲಾ ಮಂತ್ರಪ್ಪ, ಅವಾಗ್ಲೆ ಗಂಧರ್ವಸೇನಾ ಸತ್ತೋದ ಅಂತ ಗೋಳಾಡ್ತಾ ಹ್ಯೇಳಿದ್ಯಲ್ಲಪ್ಪ, ಯಾರು ಆ ಗಂಧರ್ವಸೇನ?”. “ಗೊತ್ತಿಲ್ಲ ಮಾಸ್ವಾಮಿ” ಮಂತ್ರಿ ಪ್ರಾಮಾಣಿಕವಾಗಿ ನುಡಿದ, “ಒಡ್ಡೋಲುಗಕ್ಕೆ ತಡವಾಯ್ತು ಅಂತ ಓಡೋಡಿ ಬರ್ತಿದ್ನಾ, ಅವಾಗ ಅಗಸೆ ಬಾಗುಲತ್ರ ನಮ್ಮ ಸೇನಾಧಿಪತಿ ಅತ್ಕಂಡು ನಿಂತಿದ್ದ. ಏನಾಯ್ತು ಅಂತ ಕೇಳಿದ್ದುಕ್ಕೆ, ಗಂಧರ್ವಸೇನ ಸತ್ತೋದ ಅಂತ ಹ್ಯೇಳಿ ಜೋರಾಗಿ ಅತ್ತ. ಅದುಕ್ಕೆ ನಾನೂ ಅಳ್ತಾ ಬಂದು ನಿಮುಗೆ ಸುದ್ದಿ ಮುಟ್ಟಿಸಿದೆ ಆಟೆಯ”.

ಕೂಡಲೆ ಸೇನಾ ಅಧಿಪತಿಗೆ ಕರೆ ಹೋಯ್ತು. “ಏನಯ್ಯಾ ಸೇನಾಧಿಪತಿ, ಮಾಮಂತ್ರಿ ಹತ್ರ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ಗೋಳಾಡಿದ್ಯಂತಲ್ಲ. ಯಾರಯ್ಯ ಆ ಗಂಧರ್ವ ಸೇನಾ?”.

“ಗೊತ್ತಿಲ್ಲ ಮಾಪ್ರಬು. ಬ್ಯೆಳಿಗ್ಗೆ ಅಗಸೆ ಬಾಗುಲತ್ರ ನಿಂತಿದ್ನಾ, ಊರುಗುಡಿ ಪೂಜಾರಪ್ಪ ಅತ್ಕಂತ ಗುಡಿ ಕಡೆ ಹ್ವೊಂಟಿದ್ದ. ಯಾಕಪ್ಪಾ ಅಂತ ಕ್ಯೇಳಿದ್ದುಕ್ಕೆ, ಗಂಧರ್ವಸೇನ ಸತ್ತೋದ ಅಂತ ಹೊಯ್ಕೊಂತ ಹ್ವೋದ. ಅದುಕ್ಕೆ ನಾನುವೆ ಅತ್ಕಂತ ನಿಂತಿದ್ದೆ” ಸೇನಾಧಿಪತಿ ಕೊಟ್ಟ ಮಾಹಿತಿ ಇಷ್ಟು. ಕೂಡಲೇ ಪೂಜಾರಪ್ಪನಿಗೆ ರಾಜನ ಕರೆ ಹೋಯ್ತು.

“ಏನು ಅಯ್ನೋರೆ, ಬ್ಯೆಳಿಗ್ಗೆ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ಅಳ್ತಿದ್ರಂತಲ್ಲ. ಯಾರು ಆ ಗಂಧರ್ವಸೇನಾ?” ರಾಜ ಪ್ರಶ್ನಿಸಿದ.

“ಗೊತ್ತಿಲ್ಲ ಮಾರಾಜ. ಬ್ಯೆಳಿಗ್ಗೆ ದ್ಯೇವುಸ್ಥಾನುಕ್ಕೆ ಪೂಜೆಗೆ ಅಂತ ಹೊಂಟ್ನಾ. ನನ್ನ ಹೆಂಡ್ರು ಸಿಕ್ಕಾಪಟ್ಟೆ ಅಳ್ತಾ ಇದ್ಳು. ಕ್ಯೇಳಿದ್ದುಕ್ಕೆ ಗಂಧರ್ವಸೇನ ಸತ್ತೋದ ಅಂದ್ಲು. ಅದುಕ್ಕೆ ನಾನೂ ಅತ್ಕಂತ ಹೊಂಟಿದ್ದೆ” ಪೂಜಾರಪ್ಪ ಪ್ರತಿಕ್ರಿಯಿಸಿದ.

ಯಥಾ ಪ್ರಕಾರ ಪೂಜಾರಪ್ಪನ ಹೆಂಡತಿಯನ್ನು ಕರೆದು ಕೇಳಲಾಯ್ತು. “ನನಿಗೆ ಗೊತ್ತಿಲ್ಲ ಸ್ವಾಮಿ. ಬೆಳಿಗ್ಗೆ ಮೈಲಿಗೆ ಬಟ್ಟೆ ಇಸ್ಕೊಂಡು ಹೋಗಕ್ಕೆ ಅಂತ ಅಗಸರವನ ಹೆಂಡತಿ ಬಂದಿದ್ಳಾ, ಅವುಳು ತುಂಬಾ ಗೋಳಾಡ್ತಾ ಗಂಧರ್ವಸೇನ ಸತ್ತೋದ ಅಂತ ಹ್ಯೇಳಿದ್ಳು. ಅದುಕ್ಕೆ ನಾನೂ ಅತ್ತೆ.”

ರಾಜನಿಗೆ ಕುತೂಹಲ ಅದೆಷ್ಟು ಹೆಚ್ಚಾಗಿಹೋಯ್ತೆಂದರೆ, ಈ ಸಲ ಅಗಸರವನ ಹೆಂಡತಿಯನ್ನು ಕರೆಸುವ ತಾಳ್ಮೆಯೂ ಇಲ್ಲದೆ, ತನ್ನ `ಪರಿವಾರ’ ಸಮೇತ ಅಗಸನ ಮನೆಯತ್ತ ನಡೆದ. ಮನೆಯಲ್ಲಿ ದಂಪತಿ ಇರಲಿಲ್ಲ, ಕಾಯಕದ ಸಲುವಾಗಿ ಹೊಳೆದಂಡೆ ಬಳಿ ಹೋಗಿದ್ದರು. ಅಲ್ಲಿಗೇ ಸವಾರಿ ಹೊರಟಿತು. ಕೊನೆಗೂ ಆ ಹೆಂಗಸು ಸಿಕ್ಕಳು. “ಏನಮ್ಮಾ, ಬ್ಯೆಳಿಗ್ಗೆ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ತುಂಬಾ ಅಳ್ತಿದ್ದ್ಯಂತೆ. ಯಾರು ಆ ಪುಣ್ಯಾತ್ಮ?” ಮಹಾರಾಜ ಪ್ರಶ್ನಿಸಿದ.“ಅಯ್ಯಾ ಸಾಮಿ, ಮೊನ್ನೆಯಿನು ಅರಾಮಾಗಿದ್ದ ಸಾಮಿ. ಬಾಳ ಪಿರೂತಿಯಿಂದ ಸಾಕಿದ್ದೆ. ನಿನ್ನೆ ನಮ್ಮುನ್ನೆಲ್ಲ ಬಿಟ್ಟೋದ. ನ್ಯೆನಿಸಿಕಂಡ್ರೆ ಅಳು ಬತ್ತದೆ ಸಾಮಿ” ಮತ್ತೆ ಆ ಹೆಂಗಸಲ್ಲಿ ದುಖ ಉಮ್ಮಳಿಸಿತು, ಕಣ್ಣೀರಿಡಲು ಶುರು ಮಾಡಿದಳು.

“ಯಾರಮ್ಮ, ನಿನ್ನ ಮಗನಾ ಅವನು?” ರಾಜ ಪ್ರಶ್ನಿಸಿದ.

“ಮಗನಿಗಿಂತ ಜಾಸ್ತಿ ಪಿರೂತಿಯಿಂದ ಸಾಕಿದ್ದೆ ಸಾಮಿ. ನನ್ನ ಕತ್ತೆಯ ಹೆಸ್ರು ಅದು?.!!!”

ಆ ಹೆಂಗಸಿನ ಉತ್ತರ ಕೇಳಿಸಿಕೊಂಡ ತರುವಾಯ ಅಲ್ಲಿ ನೆರೆದಿದ್ವರಿಗೆಲ್ಲ ತಮ್ಮ ಮುಠ್ಠಾಳತನದ ಅರಿವಾಗಿ ಮೂರ್ಛೆ ಹೋಗುವುದೊಂದು ಬಾಕಿ. ಇಪ್ಪತ್ತೊಂದು ದಿನ ಶೋಕಾಚಾರಣೆ ಘೋಷಿಸಿದ್ದ ರಾಜ ಮೆತ್ತಗೆ ಅಲ್ಲಿಂದ ನುಣುಚಿಕೊಂಡು ಅರಮನೆಯತ್ತ ದೌಡಾಯಿಸಿದ.

(ಸೂಚನೆ: ಇದೊಂದು ಬಂಗಾಳಿ ಜನಪದ ಕಥೆ. ಪ್ರಸ್ತುತ ಯಾವುದೇ ವಿದ್ಯಮಾನ, ವ್ಯಕ್ತಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...