Homeಕಥೆ"ಗಂಧರ್ವಸೇನಾ ಸತ್ತಾಗ?" : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

“ಗಂಧರ್ವಸೇನಾ ಸತ್ತಾಗ?” : ಪ್ರಸ್ತುತ ಯಾವುದೇ ವಿದ್ಯಮಾನಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ

- Advertisement -
- Advertisement -

ರಾಜ ತನ್ನ `ಪರಿವಾರ’ ಸಮೇತ ಒಡ್ಡೋಲಗದಲ್ಲಿ ಬ್ಯುಸಿಯಾಗಿದ್ದ. ಅಷ್ಟೊತ್ತು ಮಿಸ್ಸಿಂಗ್ ಆಗಿದ್ದ ಮಂತ್ರಿ, ಜೋರಾಗಿ ರೋಧಿಸುತ್ತ ಕಣ್ಣೀರ ಧಾರೆ ಸುರಿಸುತ್ತ ಓಡೋಡಿ ಒಡ್ಡೋಲಗ ಪ್ರವೇಶಿಸಿದ. ಮಂತ್ರಿಯ ಸ್ಥಿತಿ ನೋಡಿ ರಾಜನಿಗೆ ಗಾಬರಿಯಾಯ್ತು. “ಏನಾಯ್ತು ಮಂತ್ರಪ್ಪ. ಅದ್ಯಾಕಿಂಗೆ ಸಣ್ಣಮಕ್ಕಳ ಥರ ಅತ್ಕೊಂಡು ಬತ್ತಾ ಇದೀಯ? ಮನೆಯಲ್ಲಿ ಹೆಂಡ್ರು, ಮಕ್ಕಳು ಕ್ಷೇಮವೆ” ರಾಜ ವಿಚಾರಿಸಿದ. “ಅಯ್ಯೋ ಏನಂಥಾ ಹ್ಯೇಳೋದು ಮಾರಾಜುರೆ. ಗಂಧರ್ವ ಸೇನಾ ಸತ್ತೋದ್ನಂತೆ!” ಮಂತ್ರಿ ತನ್ನ ಸಂಕಟದ ಮೂಲವನ್ನು ಮುಂದಿಟ್ಟ.

“ಅಯ್ಯಯ್ಯೋ, ಎಂಥಾ ಸುದ್ದಿ ಹ್ಯೇಳ್ತಾ ಇದೀಯ ಮಂತ್ರಪ್ಪ. ಗಂಧರ್ವ ಸೇನಾ ಸತ್ತೋದ್ನಾ!!!” ಈಗ ಮಹಾರಾಜ ಕೂಡಾ ಮಂತ್ರಿಗೆ ಕೋರಸ್ ಕೊಟ್ಟು ರೋಧಿಸಲು ಶುರು ಮಾಡಿದ. ರಾಜನೆ ಕಣ್ಣೀರಿಟ್ಟ ಮೇಲೆ ಕೇಳಬೇಕೆ. ಇಡೀ ಒಡ್ಡೋಲಗವೆ

“ಅಯ್ಯಯ್ಯೋ, ಗಂಧರ್ವ ಸೇನಾ ಹೋಗ್ಬುಟ್ಟೆಯಾ” ಎಂಬ ರೋಧನೆಯಲ್ಲಿ ಮುಳುಗಿಹೋಯ್ತು.

ಹಾರ್ಟ್ ಬ್ರೇಕಿಂಗ್ ಸುದ್ದಿ ಕೇಳಿದಮೇಲೆ ಒಡ್ಡೋಲಗ ನಡೆಸುವ ಯಾವ ಉಮೇದಿಯೂ ರಾಜನಿಗೆ ಉಳಿಯಲಿಲ್ಲ. ರಾಜ್ಯದಲ್ಲಿ ಇಪ್ಪತ್ತೊಂದು ದಿನಗಳ ಶೋಕಾಚರಣೆ ಘೋಷಿಸಿ, ದುಃಖತಪ್ತ ಮೋರೆಯಲ್ಲಿ ಅಂತಃಪುರದ ಕಡೆ ನಡೆದ.

ಒಡ್ಡೋಲಗದಲ್ಲಿರಬೇಕಿದ್ದ ರಾಜ ಹೀಗೆ ಹೊತ್ತಲ್ಲದಹೊತ್ತಲ್ಲಿ ಅಂತಃಪುರಕ್ಕೆ ಧಾವಿಸಿದ್ದನ್ನು, ಅದರಲ್ಲು ದುಖತಪ್ತನಾಗಿ ರಾಣಿನಿವಾಸ ಹೊಕ್ಕಿದ್ದನ್ನು ನೋಡಿ ಅವನ ರಾಣಿಯರಿಗೆ ಅಚ್ಚರಿಯಾಯ್ತು. ಪಟ್ಟದರಸಿ ರಾಜನ ಬಳಿ ಬಂದು “ಯಾಕೆ ಮಾಸ್ವಾಮಿ, ಶ್ಯಾನೆ ಬ್ಯಾಸರದಲ್ಲಿ ಇದೀರಿ. ಮಟಮಟ ಮಧ್ಯಾನುವೆ ಮಂಚದ ಮನೆಯತ್ತ ಬಂದಿದೀರಿ. ಏನ್ಸಮಾಚಾರ?” ತುಸು ಅಳುಕಿನಲ್ಲೆ ಕೇಳಿದಳು. “ಏನಂಥಾ ಹ್ಯೇಳ್ಳಿ ಮಾರಾಣಿ, ಗಂಧರ್ವಸೇನಾ ಸತ್ತೋದ್ನಂತೆ” ರಾಜನ ಮಾತಿನ್ನು ಬಾಯೊಳಗೇ ಇತ್ತೇನೊ, ಮಹಾರಾಣಿ ದೊಪ್ಪನೆ ನೆಲಕ್ಕೆ ಕುಸಿದುಬಿದ್ದಳು. “ಏನಂದ್ರಿ ಪ್ರಭು, ಗಂಧರ್ವಸೇನ ಸತ್ತೋದ್ನ? ಅಯ್ಯೋ ದುರ್ವಿಧಿಯೇ?..!” ಮಹಾರಾಣಿ ಚಿತ್ರವಿಚಿತ್ರವಾಗಿ ರೋಧಿಸುತ್ತ ಕೋಣೆ ಹೊಕ್ಕು ರಾಜನ ಇನ್ನುಳಿದ ಮಡದಿಯರು, ಉಪಮಡದಿಯರಿಗೆ ಗಂಧರ್ವಸೇನಾ ಮೃತನಾದ ಸುದ್ದಿ ಅರುಹಿದಳು. ಇಡಿ ಅಂತಃಪುರವೆ ಶೋಕದ ಕಡಲಲ್ಲಿ ಮುಳುಗಿತು. ಕಿರಿಯರಸಿ ತನ್ನ ಖಾಸಗಿ ಕೋಣೆಯಲ್ಲಿ ಮುಸಿಮುಸಿ ಅಳುತ್ತಿರೋದನ್ನ ಕಂಡ ಆಕೆಯ ಸೇವಕಿಗೆ ಕುತೂಹಲ ಹೆಚ್ಚಾಗಿ ಕೇಳಿದಳು, “ಯಾಕೆ ರಾಣ್ಯವ್ವ ಹಿಂಗ ಅಳಾಕತ್ತಿದ್ದೀಯ? ಅಂತದ್ದೇನಾತಾ?”.

“ಏನಂಥಾ ಹ್ಯೇಳ್ಲೇ ಗೆಳತಿ, ಗಂಧರ್ವಸೇನಾ ಸತ್ತೋದ್ನಂತೆ!” ಕಿರಿಯರಸಿಯ ಶೋಕಸುದ್ದಿ ಕೇಳಿ ಸೇವಕಿಗು ಆಘಾತವಾಯ್ತು. “ಹೌದೇನೆ ನನ್ನವ್ವ. ಪಾಪಾ, ಹಿಂಗಾಗಬಾರದಿತ್ತು ಬಿಡು. ಅದಂಗಿರುಲಿ. ಈ ಗಂಧರ್ವಸೇನಾ ಯಾರು? ಅವ ನಿನುಗೆ, ಮಾರಾಜುಗೆ ಏನು ಸಮಂದ ಆಗಬೇಕಾ?” ಸೇವಕಿ ತನ್ನ ಅನುಮಾನ ತೆರೆದಿಟ್ಟಳು. ಕಿರಿಯರಸಿಗೆ ಜ್ಞಾನೋದಯ ಆದಂತಾಯ್ತು.

`ಹೌದು ಯಾರು ಈ ಗಂಧರ್ವಸೇನ? ನಾನ್ಯಾಕಿಷ್ಟು ಅಳ್ತಾ ಇದೀನಿ’. ತನ್ನ ಗೊಂದಲ ಬಗೆಹರಿಸಿಕೊಳ್ಳಲು ಪಟ್ಟದರಸಿಯ ಬಳಿ ಬಂದು ಗಂಧರ್ವಸೇನನ ಬಗ್ಗೆ ವಿಚಾರಿಸಿದಳು. ಆಕೆಗೂ ನಯಾಪೈಸೆಯ ಮಾಹಿತಿಯಿಲ್ಲ. ಆದರು ಲೀಟರುಗಟ್ಟಲೆ ಕಣ್ಣೀರು ಸುರಿಸಿ ರೋಧಿಸಿದ್ದಾಗಿತ್ತು. ರಾಜನ ಮುಂದೆ ನಿಂತ ಆಕೆ

“ಮಾರಾಜ, ಆಗ್ಲೆ ಗಂಧರ್ವಸೇನ ಸತ್ತೋದ ಅಂದ್ರಲ್ಲ, ಯಾರು ಆ ಪುಣ್ಯಾತ್ಮ? ನಿಮ್ಮ ಆತ್ಮೀಯ ಗೆಣೆಕಾರನೆ, ಹತ್ತಿರದ ಸಮಂಧಿಕನೆ?”. ಇನ್ನೂ ಶೋಕಸಾಗರದಲ್ಲೆ ಬಡಿದಾಡುತ್ತ ಬಿದ್ದುಕೊಂಡಿದ್ದ ರಾಜನಿಗೆ ರಾಣಿಯ ಪ್ರಶ್ನೆ ಕೇಳಿ ಜ್ಯೋತಿಯೊಂದು ದಿಗ್ಗನೆ ಜ್ವಲಿಸಿದಂತಾಯ್ತು. `ಅರೆರೆ, ಹೌದಲ್ಲವಾ? ಯಾರು ಈ ಗಂಧರ್ವಸೇನಾ? ಮಂತ್ರಿಯನ್ನು ವಿಚಾರಿಸದೆ ಇಷ್ಟು ವ್ಯರ್ಥವಾಗಿ ರೋಧಿಸಿದೆನಲ್ಲ. ಅವನನ್ನೆ ಕೇಳಿಬಿಡೋಣ’ ರಾಜನ ಸ್ವಗತ ಥಟ್ಟನೆ ಅನುಷ್ಟಾನಕ್ಕೆ ಬಂದು ಮಂತ್ರಿಗೆ ಕರೆ ಹೋಯ್ತು.

ಮಂತ್ರಿ ಆಗಮಿಸಿದ. “ಅಲ್ಲಾ ಮಂತ್ರಪ್ಪ, ಅವಾಗ್ಲೆ ಗಂಧರ್ವಸೇನಾ ಸತ್ತೋದ ಅಂತ ಗೋಳಾಡ್ತಾ ಹ್ಯೇಳಿದ್ಯಲ್ಲಪ್ಪ, ಯಾರು ಆ ಗಂಧರ್ವಸೇನ?”. “ಗೊತ್ತಿಲ್ಲ ಮಾಸ್ವಾಮಿ” ಮಂತ್ರಿ ಪ್ರಾಮಾಣಿಕವಾಗಿ ನುಡಿದ, “ಒಡ್ಡೋಲುಗಕ್ಕೆ ತಡವಾಯ್ತು ಅಂತ ಓಡೋಡಿ ಬರ್ತಿದ್ನಾ, ಅವಾಗ ಅಗಸೆ ಬಾಗುಲತ್ರ ನಮ್ಮ ಸೇನಾಧಿಪತಿ ಅತ್ಕಂಡು ನಿಂತಿದ್ದ. ಏನಾಯ್ತು ಅಂತ ಕೇಳಿದ್ದುಕ್ಕೆ, ಗಂಧರ್ವಸೇನ ಸತ್ತೋದ ಅಂತ ಹ್ಯೇಳಿ ಜೋರಾಗಿ ಅತ್ತ. ಅದುಕ್ಕೆ ನಾನೂ ಅಳ್ತಾ ಬಂದು ನಿಮುಗೆ ಸುದ್ದಿ ಮುಟ್ಟಿಸಿದೆ ಆಟೆಯ”.

ಕೂಡಲೆ ಸೇನಾ ಅಧಿಪತಿಗೆ ಕರೆ ಹೋಯ್ತು. “ಏನಯ್ಯಾ ಸೇನಾಧಿಪತಿ, ಮಾಮಂತ್ರಿ ಹತ್ರ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ಗೋಳಾಡಿದ್ಯಂತಲ್ಲ. ಯಾರಯ್ಯ ಆ ಗಂಧರ್ವ ಸೇನಾ?”.

“ಗೊತ್ತಿಲ್ಲ ಮಾಪ್ರಬು. ಬ್ಯೆಳಿಗ್ಗೆ ಅಗಸೆ ಬಾಗುಲತ್ರ ನಿಂತಿದ್ನಾ, ಊರುಗುಡಿ ಪೂಜಾರಪ್ಪ ಅತ್ಕಂತ ಗುಡಿ ಕಡೆ ಹ್ವೊಂಟಿದ್ದ. ಯಾಕಪ್ಪಾ ಅಂತ ಕ್ಯೇಳಿದ್ದುಕ್ಕೆ, ಗಂಧರ್ವಸೇನ ಸತ್ತೋದ ಅಂತ ಹೊಯ್ಕೊಂತ ಹ್ವೋದ. ಅದುಕ್ಕೆ ನಾನುವೆ ಅತ್ಕಂತ ನಿಂತಿದ್ದೆ” ಸೇನಾಧಿಪತಿ ಕೊಟ್ಟ ಮಾಹಿತಿ ಇಷ್ಟು. ಕೂಡಲೇ ಪೂಜಾರಪ್ಪನಿಗೆ ರಾಜನ ಕರೆ ಹೋಯ್ತು.

“ಏನು ಅಯ್ನೋರೆ, ಬ್ಯೆಳಿಗ್ಗೆ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ಅಳ್ತಿದ್ರಂತಲ್ಲ. ಯಾರು ಆ ಗಂಧರ್ವಸೇನಾ?” ರಾಜ ಪ್ರಶ್ನಿಸಿದ.

“ಗೊತ್ತಿಲ್ಲ ಮಾರಾಜ. ಬ್ಯೆಳಿಗ್ಗೆ ದ್ಯೇವುಸ್ಥಾನುಕ್ಕೆ ಪೂಜೆಗೆ ಅಂತ ಹೊಂಟ್ನಾ. ನನ್ನ ಹೆಂಡ್ರು ಸಿಕ್ಕಾಪಟ್ಟೆ ಅಳ್ತಾ ಇದ್ಳು. ಕ್ಯೇಳಿದ್ದುಕ್ಕೆ ಗಂಧರ್ವಸೇನ ಸತ್ತೋದ ಅಂದ್ಲು. ಅದುಕ್ಕೆ ನಾನೂ ಅತ್ಕಂತ ಹೊಂಟಿದ್ದೆ” ಪೂಜಾರಪ್ಪ ಪ್ರತಿಕ್ರಿಯಿಸಿದ.

ಯಥಾ ಪ್ರಕಾರ ಪೂಜಾರಪ್ಪನ ಹೆಂಡತಿಯನ್ನು ಕರೆದು ಕೇಳಲಾಯ್ತು. “ನನಿಗೆ ಗೊತ್ತಿಲ್ಲ ಸ್ವಾಮಿ. ಬೆಳಿಗ್ಗೆ ಮೈಲಿಗೆ ಬಟ್ಟೆ ಇಸ್ಕೊಂಡು ಹೋಗಕ್ಕೆ ಅಂತ ಅಗಸರವನ ಹೆಂಡತಿ ಬಂದಿದ್ಳಾ, ಅವುಳು ತುಂಬಾ ಗೋಳಾಡ್ತಾ ಗಂಧರ್ವಸೇನ ಸತ್ತೋದ ಅಂತ ಹ್ಯೇಳಿದ್ಳು. ಅದುಕ್ಕೆ ನಾನೂ ಅತ್ತೆ.”

ರಾಜನಿಗೆ ಕುತೂಹಲ ಅದೆಷ್ಟು ಹೆಚ್ಚಾಗಿಹೋಯ್ತೆಂದರೆ, ಈ ಸಲ ಅಗಸರವನ ಹೆಂಡತಿಯನ್ನು ಕರೆಸುವ ತಾಳ್ಮೆಯೂ ಇಲ್ಲದೆ, ತನ್ನ `ಪರಿವಾರ’ ಸಮೇತ ಅಗಸನ ಮನೆಯತ್ತ ನಡೆದ. ಮನೆಯಲ್ಲಿ ದಂಪತಿ ಇರಲಿಲ್ಲ, ಕಾಯಕದ ಸಲುವಾಗಿ ಹೊಳೆದಂಡೆ ಬಳಿ ಹೋಗಿದ್ದರು. ಅಲ್ಲಿಗೇ ಸವಾರಿ ಹೊರಟಿತು. ಕೊನೆಗೂ ಆ ಹೆಂಗಸು ಸಿಕ್ಕಳು. “ಏನಮ್ಮಾ, ಬ್ಯೆಳಿಗ್ಗೆ ಅದ್ಯಾರೊ ಗಂಧರ್ವಸೇನ ಸತ್ತೋದ ಅಂತ ತುಂಬಾ ಅಳ್ತಿದ್ದ್ಯಂತೆ. ಯಾರು ಆ ಪುಣ್ಯಾತ್ಮ?” ಮಹಾರಾಜ ಪ್ರಶ್ನಿಸಿದ.“ಅಯ್ಯಾ ಸಾಮಿ, ಮೊನ್ನೆಯಿನು ಅರಾಮಾಗಿದ್ದ ಸಾಮಿ. ಬಾಳ ಪಿರೂತಿಯಿಂದ ಸಾಕಿದ್ದೆ. ನಿನ್ನೆ ನಮ್ಮುನ್ನೆಲ್ಲ ಬಿಟ್ಟೋದ. ನ್ಯೆನಿಸಿಕಂಡ್ರೆ ಅಳು ಬತ್ತದೆ ಸಾಮಿ” ಮತ್ತೆ ಆ ಹೆಂಗಸಲ್ಲಿ ದುಖ ಉಮ್ಮಳಿಸಿತು, ಕಣ್ಣೀರಿಡಲು ಶುರು ಮಾಡಿದಳು.

“ಯಾರಮ್ಮ, ನಿನ್ನ ಮಗನಾ ಅವನು?” ರಾಜ ಪ್ರಶ್ನಿಸಿದ.

“ಮಗನಿಗಿಂತ ಜಾಸ್ತಿ ಪಿರೂತಿಯಿಂದ ಸಾಕಿದ್ದೆ ಸಾಮಿ. ನನ್ನ ಕತ್ತೆಯ ಹೆಸ್ರು ಅದು?.!!!”

ಆ ಹೆಂಗಸಿನ ಉತ್ತರ ಕೇಳಿಸಿಕೊಂಡ ತರುವಾಯ ಅಲ್ಲಿ ನೆರೆದಿದ್ವರಿಗೆಲ್ಲ ತಮ್ಮ ಮುಠ್ಠಾಳತನದ ಅರಿವಾಗಿ ಮೂರ್ಛೆ ಹೋಗುವುದೊಂದು ಬಾಕಿ. ಇಪ್ಪತ್ತೊಂದು ದಿನ ಶೋಕಾಚಾರಣೆ ಘೋಷಿಸಿದ್ದ ರಾಜ ಮೆತ್ತಗೆ ಅಲ್ಲಿಂದ ನುಣುಚಿಕೊಂಡು ಅರಮನೆಯತ್ತ ದೌಡಾಯಿಸಿದ.

(ಸೂಚನೆ: ಇದೊಂದು ಬಂಗಾಳಿ ಜನಪದ ಕಥೆ. ಪ್ರಸ್ತುತ ಯಾವುದೇ ವಿದ್ಯಮಾನ, ವ್ಯಕ್ತಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಂಬಂಧಿಸಿದ್ದಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...