Homeಕರ್ನಾಟಕದೇವನೂರರನ್ನು ಕಂಡದ್ದು...

ದೇವನೂರರನ್ನು ಕಂಡದ್ದು…

- Advertisement -
- Advertisement -

“ದೇವನೂರು ಬರುತ್ತಾರಾ”? “ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿದ್ದ ಎರಡು ಮೂರು ಪ್ರಮುಖ ಕಾರ್ಯಕ್ರಮಗಳಲ್ಲಿ ಅವರು ಕಾಣಿಸಿಕೊಂಡಿಲ್ಲ” ಎಂದೆ. “ಇಲ್ಲ ಈ ಸಭೆಗೆ ಬಂದೆ ಬರುತ್ತಾರೆ” ಎಂದರು ಸ್ನೇಹಿತರು .

“ದೇವನೂರು ಬಂದರು” ಎಂದು ಪಿಸುಗುಟ್ಟಿದರು ಪಕ್ಕದಲ್ಲಿದ್ದವರು. ಒಳಬರುತ್ತಲಿತ್ತು ಮೇರು ಪರ್ವತ. ಆರಡಿಗೆ ಒಂದೆರಡು ಇಂಚು ಕಡಿಮೆ ಇರುವ ದೇಹವದು. ಇಸ್ತ್ರಿ ಕಾಣದ ದೊಗಲೆ ಪ್ಯಾಂಟು, ಅದರ ಮೇಲೊಂದು ತುಂಬ ತೋಳಿನ ಹತ್ತಿಯ ನೂಲಿನ ಅಂಗಿ, ಅದರ ಮೇಲೊಂದು ಅರ್ಧತೋಳಿನ ಉಲನ್ ಸ್ವಿಟರ್, ಕೊರಳಲ್ಲಿ ಜೋತಾಡುತ್ತಿತ್ತೊಂದು ಟವೆಲ್. ಕಾಲಲ್ಲಿರುವ ಸಾದಾ ಚಪ್ಪಲಿಗಳನ್ನು ಬಾಗಿಲು ಬಳಿ ಬಿಟ್ಟು ಮುಗುಳುನಗುತ್ತ ಒಳಬಂದರು.

ದೇವನೂರ ಮಹಾದೇವರ ಬಗ್ಗೆ ಅನೇಕ ಬಾರಿ ಕೇಳಿದ್ದೆ ಅಂತೆಕಂತೆಗಳನ್ನು. ಅವರಿಗೆ ರಾಜಕಾರಣ ಆಸಕ್ತಿದಾಯಕ ವಿಷಯವಂತೆ; ಆದರೆ ರಾಜಕೀಯ ಮಾಡುವವರನ್ನು ಹತ್ತಿರಕ್ಕೆ ಸೇರಿಸೊಲ್ಲವಂತೆ; ವಿಧಾನಸಭೆಯ ಮೇಲ್ಮನೆಯ ಸದಸ್ಯತ್ವ ಮನೆ ಬಾಗಿಲಿಗೆ ಬಂದಾಗ ಬಾಗಿಲನ್ನು ತಗೆಯಲೇ ಇಲ್ಲವಂತೆ; ತಮ್ಮ ಮನೆ ಬಿಟ್ಟು ಯಾರ ಮನೆಗೂ ಹೋಗುವದಿಲ್ಲವಂತೆ; ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿಯನ್ನು ಗೌರವ ಪೂರ್ವಕವಾಗಿ ತಿರಸ್ಕರಿಸಿದರಂತೆ; ಇತ್ತೀಚೆಗೆ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿಲ್ಲವಂತೆ; ಸಿಕ್ಕ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದಾರಂತೆ; ಯಾರಿಗೂ ಅನವಶ್ಯಕ ಶಿಫಾರಸ್ಸು ಮಾಡುವದಿಲ್ಲವಂತೆ; ಯಾರ ಹಂಗಿಗೂ ಒಳಗಾಗುವದಿಲ್ಲವಂತೆ; ತುಂಬ ನಿಷ್ಠುರವಾದಿಯಂತೆ; ಬರೆಯುವದು ಕಡಿಮೆಯಂತೆ; ಬರೆದಿದ್ದೆಲ್ಲ ಅಪ್ಪಟ ಚಿನ್ನವಂತೆ; ಹತ್ತಾರು ಪುಟಗಳನ್ನು ಅವರು ಬರೆದರೆ ಅದಕ್ಕೆ ಸಾವಿರಾರು ಪುಟಗಳ ವಿಮರ್ಶೆ ಬರುತ್ತವೆಯಂತೆ; ಹೀಗೆ ಅಂಕೆಯಿಲ್ಲದ ಅಂತೆಕಂತೆಗಳು ನನ್ನ ಮನಃಪಟ ದಲ್ಲಿದ್ದವು.

ಹೆಚ್ಚು ಕೇಳಿದಂತೆ ಅವರ ಬಗ್ಗೆ ಆಸಕ್ತಿ ಬೆಳೆಯಲಾರಂಭಿಸಿತು. ಮೊದಲ ಭಾರಿ ಝೂಮ್ ಮಿಟಿಂಗನಲ್ಲಿ ಅವರನ್ನೊಮ್ಮೆ ಭೇಟಿಯಾಗಿದ್ದೆ. ಅಂದು ಅವರು ಜಿ.ಬಿ. ಪಾಟೀಲರ್‍ಯಾರು ಅವರನ್ನು ತೋರಿಸಿ ಎಂದಾಗ ನಾನು ನವ ವಧುವಿನಂತೆ ನಾಚಿ ನೀರಾಗಿದ್ದೆ. ವೈಯಕ್ತಿಕವಾಗಿ ಕಾಣುವ ಬಯಕೆ ಅಂದು ಈಡೇರಿತು. ಆದರೆ ಖುದ್ದು ಮುಖತಃ ಭೇಟಿಯ ಆಸೆ ಹಾಗೆಯೇ ಉಳಿದಿತ್ತು.

ಇವರ ಬಗ್ಗೆ ತಲೆಯಲ್ಲಿ ಹುಳ ಬಿಟ್ಟುಕೊಂಡೆ. ಅವರ ಬರೆದ ಸಾಹಿತ್ಯವು ಕಣ್ಣು ಮಂದೆ ತೇಲುತ್ತ ಹೋದವು. ಬರೆದಿದ್ದು ಒಂದೇ ಒಂದು ಕಾದಂಬರಿ ’ಕುಸುಮ ಬಾಲೆ’, ಎರಡು ಕಥಾ ಸಂಕಲನಗಳು ’ದ್ಯಾವನೂರು’ ಮತ್ತು ’ಒಡಲಾಳ’ ಎಂದು. ಭಾರತದಾದ್ಯಂತ ಚರ್ಚೆಯಾದ ’ಎದೆಗೆ ಬಿದ್ದ ಅಕ್ಷರ’ ಅವರ ಬಿಡಿ ಬರಹಗಳ ಸಂಕಲನ. ಇತ್ತೀಚೆಗೆ ಅವರ ಎದೆಯಿಂದ ಹೊರಬಂದ ಆರ್.ಎಸ್.ಎಸ್. ಆಳ ಮತ್ತು ಅಗಲ ಎಂಬ ಚಿಕ್ಕ ಕೃತಿ ಕೂಡ ಸೇರಿಕೊಂಡಿದೆ. ’ನೋಡು ಮತ್ತು ಕೂಡು’ ಎಂಬ ಅನುವಾದ ಪುಸ್ತಕವನ್ನು ಪ್ರಕಟಿಸಿದ್ದಾರೆ. ಇದರ ಜೊತೆಗೆ ಪ್ರಕಟವಾಗದೆ ಉಳಿದಿರುವ ಇನ್ನಷ್ಟು ಬಿಡಿ ಬರಹಗಳು ಕೂಡ ಇವೆ.

ಮೂರು ದಶಕಗಳ ಹಿಂದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಅವರನ್ನು ಹುಡುಕಿಕೊಂಡು ಬಂದಿತ್ತು. ’ಕುಸುಮಬಾಲೆ’ ಮುಟ್ಟಿದ್ದಳು ಕೇಂದ್ರ ಸಾಹಿತ್ಯ ಅಕಾಡೆಮಿಯನ್ನು. ’ಎದೆಗೆ ಬಿದ್ದ ಅಕ್ಷರ’ಗಳು ತಟ್ಟಿದ್ದವು ಕೊಲ್ಕತ್ತಾದ ಭಾರತೀಯ ಭಾಷಾ ಪರಿಷತ್ತಿನ ಎದೆಯನ್ನು. ಅವರು ದೇವನೂರನ್ನು ಗೌರವಿಸಿದರು ಸೃಜನಶೀಲ ಕೃತಿಕಾರರೆಂದು. ನಾನೇಕೆ ಇವರನ್ನು ಗುರುತಿಸಿಲ್ಲವೆಂದಿತು ಒಕ್ಕೂಟದ ಕೇಂದ್ರ ಸರಕಾರ. ’ಪದ್ಮಶ್ರಿ’ ಪ್ರಶಸ್ತಿ ಕೊಟ್ಟು ಗೌರವಿಸಿದರು ಅವರನ್ನು. ಮೈಸೂರಿನ ವಿಶ್ವವಿದ್ಯಾನಿಲಯದವರು ತಮ್ಮ ಪಕ್ಕದ ಹೋಬಳಿ ನಂಜನಗೂಡಿನ ಮಹದೇವನಿಗೆ ಗೌರವಿಸಿದರು ಡಾಕ್ಟರ್ ಎಂದು. ಆದರೂ ಇವರೆಂದೂ ತಮ್ಮ ಹೆಸರಿನ ಮುಂದಾಗಲಿ ಅಥವಾ ಹಿಂದಾಗಲಿ ಗೌರವ ಸೂಚಕ ಪ್ರಶಸ್ತಿಗಳನ್ನು ಬಳಸಲೇ ಇಲ್ಲ. ಇವರು ಇಂದು ಮತ್ತು ಎಂದೆಂದಿಗೂ ’ದೇವನೂರ ಮಹಾದೇವ’ ಮಾತ್ರ.

ಅಂದಿನ ಸಭೆಯಲ್ಲಿ ಇವರು ನನ್ನ ಪಕ್ಕದಲ್ಲಿದ್ದರು. ಗಂಭೀರವಾಗಿ ನಡೆಯುತ್ತಿದ್ದ ಸಭೆಯಲ್ಲಿ ತಟ್ಟನೆ ಎದ್ದು ಹೊರನಡೆದರು. ಕುತೂಹಲದಿಂದ ನಾನೂ ಅವರನ್ನು ಹಿಂಬಾಲಿಸಿದ್ದೆ ವರಾಂಡಾಕ್ಕೆ. ’ಸೇದುತ್ತಿರಾ’ ಎಂದು ಸಿಗರೇಟು ನೀಡಲು ಮುಂದಾದರು. ಸೇದಲಾರದ ನಾನು ಅವರನ್ನು ಒಬ್ಬಂಟಿಯಾಗಿ ಯೋಚಿಸಲು ಬಿಟ್ಟು ಒಳಬಂದೆ.

ಸಭೆಯಲ್ಲಿ ನಾವೆಲ್ಲರೂ ಸಾಮಾನ್ಯವಾಗಿ ಯೋಚಿಸುತ್ತಿದ್ದಂತೆ ಅವರು ಯೋಚಿಸುತ್ತಿರಲಿಲ್ಲವೆಂದೆನಿಸಿತು ಅಂದು ನನಗೆ. ಮುಂದೆ ಬಾಧಿಸಬಹುದಾದ ವಿಷಯಗಳ ಬಗ್ಗೆ ಅವರಿಂದ ತಟ್ಟನೆ ಪ್ರಶ್ನೆಗಳು ಬರುತ್ತಿದ್ದವು. “ಸರ್ ಇದನ್ನು ಮುಗಿಸಿ ಅಲ್ಲಿಗೆ ಬರುವೆ” ಎಂದು ಒದ್ದಾಡುತ್ತಿದ್ದರು ತಜ್ಞ ಸಂಘಟಕರು. ಇವರ ಯೋಚನಾ ಲಹರಿಯ ಆಳ ಅಗಲಗಳನ್ನು ನಾನು ಅರಿಯದಾದೆ.

ಇನ್ನೊಂದು ಸಣ್ಣ ವಿಷಯ ಹೇಳಿ ಮುಗಿಸುವೆ. ಹಿಂದೊಮ್ಮೆ ಇವರ ಶ್ರೀಮತಿಯವರು ಗಂಡನ ಅಂಗಿ, ಚೊಣ್ಣಗಳು ಮುದ್ದೆಯಾಗಿರುವದನ್ನು ಕಂಡು ಅವುಗಳಿಗೆ ಇಸ್ತ್ರಿಮಾಡಿಸಿ ಇಟ್ಟಿದ್ದರಂತೆ. ಗೂಟದಲ್ಲಿ ಕಾಣದ ಬಟ್ಟೆಗಳಿಗಾಗಿ ಹುಡುಕಿ ’ಎಲ್ಲಿವೆ ಅವು’ ಅಂದರಂತೆ. ಅವರು ಕಪಾಟು ಕಡೆ ಕೈ ತೋರಿಸಿದಾಗ ’ಅವ್ಯಾಕೆ ಹಿಂಗೆ’ ಎಂದು ಕಸಿವಿಸಿಗೊಂಡು ತಮ್ಮೆಲ್ಲ ಇಸ್ತ್ರಿ ಬಟ್ಟೆಗಳನ್ನು ನೀರಲ್ಲಿ ಅದ್ದಿ ಒಣಹಾಕಿಬಿಟ್ಟರಂತೆ. ಅಂದಿನಿಂದ ಇವರ ಬಟ್ಟೆಯ ಸಹವಾಸ ಬೇಡವೆಂದು ಅವರೂ ಕೈತೊಳೆದರಂತೆ.

ಯಾರಿಗೆ ಗೊತ್ತು ಮಹಾದೇವನ ಮಹಿಮೆ! ’ತನ್ನವರು ತೊಡುವ ಬಟ್ಟೆಗಳಿಗೆಲ್ಲಿವೆ ಇಸ್ತ್ರಿ?’ ಅಂದಿರಬೇಕು, ಈ ಅಕ್ಷರದ ಮಹದೇವ. ಅವರಿಗಿಲ್ಲದ ಇಸ್ತ್ರಿ ಬಟ್ಟೆಗಳು ತನಗೇಕೇ ಎಂದಿರಬೇಕು ದೇವನೂರಿನ ಫಕೀರ.

ಜಿ ಬಿ ಪಾಟೀಲ

ಜಿ ಬಿ ಪಾಟೀಲ
ಬಸವನಬಾಗೇವಾಡಿಯ ಜಿ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿ ಯಶಸ್ವಿ ಉದ್ಯಮಿಯಾಗಿದ್ದೂ, ಸಾಮಾಜಿಕ ಹಾಗೂ ರಾಜಕೀಯ ಸಂಗತಿಗಳಲ್ಲಿ ನಿರಂತರ ಆಸಕ್ತಿ ಹೊಂದಿದ್ದವರು. ಸದ್ಯ ಜಾಗತಿಕ ಲಿಂಗಾಯಿತ ಮಹಾಸಭಾದ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: ದೇವನೂರ ಮಹದೇವ ಅವರ ಕಿರುಹೊತ್ತಿಗೆ ’ಆರ್‌ಎಸ್‌ಎಸ್- ಆಳ ಮತ್ತು ಅಗಲ’ದಿಂದ ಆಯ್ದ ಅಧ್ಯಾಯ; ಇಂದು, ವರ್ತಮಾನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...