Homeಕರ್ನಾಟಕಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

ಟೂಲ್‌ಕಿಟ್ ಸಂಪಾದಿಸಿದ್ದಕ್ಕೆ ದಿಶಾ ರವಿಯನ್ನು ಸರ್ಕಾರ ಒಂದೇ ದಿನದಲ್ಲಿ ಬಂಧಿಸಿತು. ಆದರೆ 'ಕೆಲಸಕ್ಕಾಗಿ ಲೈಂಗಿಕ ದುರ್ಬಳಕೆ' ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಲಾಗಿಲ್ಲ..

- Advertisement -
- Advertisement -

ಲೈಂಗಿಕ ಸಿಡಿ ಪ್ರಕರಣದ ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ಶಾಸಕ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.

ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಗೌರವ, ರಕ್ಷಣೆ ಇಲ್ಲ ಎನ್ನುವುದನ್ನು ಪದೇ ಪದೇ ನಿರೂಪಿಸುತ್ತಿದ್ದಾರೆ. ಇದುವರೆಗೂ ಸಂತ್ರಸ್ತ ಯುವತಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಧೈರ್ಯ ತುಂಬುವ ಮಾತನ್ನು ಬಿಜೆಪಿ ಸರ್ಕಾರ ಆಡಲೇ ಇಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ಸಿಡಿ ಬಿಡುಗಡೆಯಾಗಿ 25 ದಿನಗಳಾಗಿವೆ. ರಮೇಶ್ ಜಾರಕಿಹೊಳಿ ಬಂಧನ ಯಾವಾಗ? ಸಿಡಿ ಬಿಡುಗಡೆಗೆ ತಡೆಯಾಜ್ಞೆ ತಂದಿರುವ 6 ಮಂದಿ ಸಚಿವರ ರಾಜೀನಾಮೆ ಯಾವಾಗ? ಎಂದು ಪ್ರಶ್ನಿಸಿರುವ ಮಹಿಳಾ ಕಾಂಗ್ರೆಸ್, ಬಿಜೆಪಿ ಆಡಳಿತದಲ್ಲಿ ಎಲ್ಲವೂ ಉಲ್ಟಾ! ಇಲ್ಲಿ ಆರೋಪಿಗಳು ರಾಜಾರೋಷವಾಗಿ ತಿರುಗುತ್ತಾರೆ, ದೂರುದಾರರು, ಸಂತ್ರಸ್ತರು ತನಿಖೆ ಎದುರಿಸುತ್ತಾರೆ! ಆರೋಪಿಗಳು ಭಯ ಹುಟ್ಟಿಸುತ್ತಾರೆ, ಆದರೂ ಅವರನ್ನೇ ರಕ್ಷಿಸಲಾಗುತ್ತದೆ. ಕಾನೂನಿನ ಮೇಲಿರುವ ಜನರ ಭರವಸೆಯನ್ನು ಈ ಸರ್ಕಾರ ಹುಸಿಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಎಸ್ಐಟಿ ಮೇಲೆ ಬಿಜೆಪಿ ಸರ್ಕಾರ ಪ್ರಭಾವ ಬೀರುವ ಸಾಧ್ಯತೆಗಳೇ ಹೆಚ್ಚು. ಹೀಗಿರುವಾಗ ಸಂತ್ರಸ್ತ ಯುವತಿ ನ್ಯಾಯದ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಪ್ರಕರಣದ ಸಮಗ್ರ ತನಿಖೆಯಾಗಲಿ, ತಪ್ಪಿತಸ್ತರಿಗೆ ಶಿಕ್ಷೆ ಆಗಬೇಕು. ಅಲ್ಲಿಯವರೆಗೂ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ ಎಂದು ಒತ್ತಾಯಿಸಲಾಗಿದೆ.

ರೈತ ಹೋರಾಟದ ಟೂಲ್‌ಕಿಟ್ ಸಂಪಾದಿಸಿದ್ದಕ್ಕೆ ದಿಶಾ ರವಿಯನ್ನು ಸರ್ಕಾರ ಒಂದೇ ದಿನದಲ್ಲಿ ಬಂಧಿಸಿತು. ಆದರೆ ‘ಕೆಲಸಕ್ಕಾಗಿ ಲೈಂಗಿಕ ದುರ್ಬಳಕೆ’ ಪ್ರಕರಣದಲ್ಲಿ, ತನಗೆ ಜೀವ ಬೆದರಿಕೆ ಇದೆ ಎಂದು ಸಂತ್ರಸ್ತೆ ಹೇಳಿದಾಗಲೂ ರಮೇಶ್ ಜಾರಕಿಹೊಳಿಯನ್ನು ಬಂಧಿಸಲಾಗಿಲ್ಲ. ಆಟ ಈಗ ಶುರು ಎಂದು ರಮೇಶ್ ಜಾರಕಿಹೊಳಿ ಹೇಳುತ್ತಾರೆ. ಮೋದಿ ಮತ್ತು ಬಿಎಸ್‌ವೈ ಸರ್ಕಾರ ಏಕೆ ಅತ್ಯಾಚಾರಿಯನ್ನು ರಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೀವತ್ಸ ಪ್ರಶ್ನಿಸುತ್ತಿದ್ದಾರೆ.


ಇದನ್ನೂ ಓದಿ: ಸಿಡಿ ಪ್ರಕರಣ: SIT ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ – ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...