Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...