Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...