Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...