Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...